ಬ್ರೇಕಿಂಗ್ ನ್ಯೂಸ್
15-10-25 05:36 pm Mangalore Correspondent ಕರಾವಳಿ
ಮಂಗಳೂರು, ಅ.14 : ನಗರದ ಪಂಪ್ವೆಲ್ ಸರ್ಕಲ್ನಿಂದ ಕಂಕನಾಡಿ ಬೈಪಾಸ್ ವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವುದರಿಂದ ಅಕ್ಟೋಬರ್ 13 ರಿಂದ ಎಪ್ರಿಲ್ 15ರ ವರೆಗೆ (7 ತಿಂಗಳು) ವಾಹನಗಳ ಸಂಚಾರದಲ್ಲಿ ಮಾರ್ಗ ಬದಲಾಯಿಸಿ ತಾತ್ಕಾಲಿಕ ಅಧಿಸೂಚನೆ ಹೊರಡಿಸಲಾಗಿದೆ.
ಪಂಪ್ವೆಲ್ ವೃತ್ತದಿಂದ ಕಂಕನಾಡಿ ಬೈಪಾಸ್ ವರೆಗೆ ರಸ್ತೆಯ ಪ್ರಥಮ ಹಾಗೂ ದ್ವಿತೀಯ ಹಂತದ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುವ ಸಮಯದಲ್ಲಿ ದ್ವಿಮುಖ ರಸ್ತೆಯ ಒಂದು ರಸ್ತೆಯನ್ನು ಕರಾವಳಿ ಜಂಕ್ಷನ್ನಿಂದ ಪಂಪ್ವೆಲ್ ವರೆಗೆ ವಾಹನಗಳು ಸಂಚರಿಸಲು ತಾತ್ಕಾಲಿಕವಾಗಿ ಏಕಮಖ ರಸ್ತೆಯನ್ನಾಗಿ ಘೋಷಿಸಿದೆ. ಅದೇ ರೀತಿ ಪಂಪ್ವೆಲ್ ಕಡೆಯಿಂದ - ಕಂಕನಾಡಿ ಓಲ್ಡ್ ರಸ್ತೆ - ಕಂಕನಾಡಿ ಜಂಕ್ಷನ್ ರಸ್ತೆಯನ್ನು ತಾತ್ಕಾಲಿಕವಾಗಿ ಏಕಮುಖ ರಸ್ತೆಯನ್ನಾಗಿ ಘೋಷಿಸಿದೆ. ಏಕಮುಖ ರಸ್ತೆಯ ಎರಡೂ ಬದಿಗಳಲ್ಲಿ ಎಲ್ಲಾ ತರಹದ ವಾಹನಗಳ ನಿಲುಗಡೆ ಮಾಡುವುದನ್ನು ನಿಷೇಧಿಸಲಾಗಿದೆ.
ಪಡೀಲ್ ಹಾಗೂ ತೊಕ್ಕೊಟ್ಟು ಕಡೆಯಿಂದ ಪಂಪ್ವೆಲ್ ವೃತ್ತಕ್ಕೆ ಬಂದು ಕರಾವಳಿ ವೃತ್ತಕ್ಕೆ ಹೋಗುವ ಎಲ್ಲಾ ವಾಹನಗಳು ಕಂಕನಾಡಿ ಓಲ್ಡ್ ರಸ್ತೆ ಮೂಲಕ ಕಂಕನಾಡಿ ಜಂಕ್ಷನ್ಗೆ ಬಂದು ಬಲಕ್ಕೆ ತಿರುಗಿ ಕರಾವಳಿ ವೃತ್ತದ ಕಡೆಗೆ ಸಂಚರಿಸಬೇಕು. ಫಳ್ನೀರ್ ರಸ್ತೆಯಿಂದ ಹಾಗೂ ವೆಲೆನ್ಸಿಯಾ ರಸ್ತೆಯಿಂದ ಪಂಪ್ವೆಲ್ ಕಡೆಗೆ ಹೋಗುವ ಎಲ್ಲಾ ವಾಹನಗಳು ಕಂಕನಾಡಿ ಜಂಕ್ಷನ್ನಿಂದ ನೇರವಾಗಿ ಕರಾವಳಿ ಜಂಕ್ಷನ್ಗೆ ಬಂದು ಬಲಕ್ಕೆ ತಿರುಗಿ ಪಂಪ್ವೆಲ್ ವೃತ್ತದ ಕಡೆಗೆ ಸಂಚರಿಸಬೇಕು ಎಂದು ನಗರ ಪೋಲಿಸ್ ಆಯುಕ್ತರು ಆದೇಶಿಸಿದ್ದಾರೆ.
ರಸ್ತೆ ಬಂದ್ ಬಗ್ಗೆ ಜಾಲತಾಣದಲ್ಲಿ ಟೀಕೆ
ಪಂಪ್ವೆಲ್ - ಕಂಕನಾಡಿ ಮಧ್ಯದ 300 ಮೀಟರ್ ಉದ್ದದ ರಸ್ತೆಯನ್ನು ಕಾಂಕ್ರೀಟ್ ಮಾಡಲು ಸುದೀರ್ಘ ಏಳು ತಿಂಗಳ ಕಾಲ ರಸ್ತೆ ಬಂದ್ ಮಾಡುವುದಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಟೀಕೆ ವ್ಯಕ್ತವಾಗಿದೆ. ಈಗಾಗಲೇ ಮೋರ್ಗನ್ಸ್ ಗೇಟ್ ಬಳಿಯ ಜಪ್ಪು ಮಹಾಕಾಳಿ ಪಡ್ಪು ರೈಲ್ವೇ ಅಂಡರ್ ಪಾಸ್ ಕಾಮಗಾರಿ ಮುಗಿಯದೆ ಪ್ರಯಾಣಿಕರು ಸಂಕಷ್ಟ ಪಡುತ್ತಿದ್ದಾರೆ. ತಲಪಾಡಿ, ತೊಕ್ಕೊಟ್ಟು, ಉಳ್ಳಾಲದಿಂದ ಮಂಗಳೂರು ಬಂದರು ಕಡೆಗೆ ಹೋಗಲು ಜಪ್ಪು ರೈಲ್ವೇ ಅಂಡರ್ ಪಾಸ್ ಹತ್ತಿರದ ಸಂಪರ್ಕ. ಆದರೆ ಆ ರಸ್ತೆಯನ್ನು ಕಳೆದೆರಡು ವರ್ಷದಿಂದ ಕಾಮಗಾರಿ ಸಲುವಾಗಿ ಮುಚ್ಚಲಾಗಿದೆ. ಇದರಿಂದಾಗಿ ಮೀನಿನ ಟೆಂಪೋ, ಈಚರ್ ಮಾದರಿಯ ವಾಹನಗಳು, ಪ್ರಯಾಣಿಕರು ಪಂಪ್ವೆಲ್ ಮೂಲಕ ಸುತ್ತು ಬಳಸಿ ಹೋಗಬೇಕು. ಇದರ ನಡುವೆ ಪಂಪ್ವೆಲ್ ಕಂಕನಾಡಿ ರಸ್ತೆಯನ್ನೂ ಬಂದ್ ಮಾಡಿದರೆ ಹೇಗೆ ಎಂದು ಜಾಲತಾಣದಲ್ಲಿ ಪ್ರಶ್ನೆ ಮಾಡಿದ್ದಾರೆ. ಸಣ್ಣ ರಸ್ತೆಯ ಕಾಮಗಾರಿ ನಡೆಸಲು ದೀರ್ಘ ಏಳು ತಿಂಗಳು ಅಗತ್ಯ ಇದೆಯೇ ಎಂದು ಪ್ರಶ್ನೆ ಮಾಡಿದ್ದಾರೆ.
Road development work between Pumpwell Circle and Kankanady Bypass in Mangaluru has led to traffic diversions from October 13 to April 15. The stretch will remain partially closed as authorities convert sections into one-way routes for construction. Parking on both sides has also been prohibited.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm