ಬ್ರೇಕಿಂಗ್ ನ್ಯೂಸ್
15-10-25 05:36 pm Mangalore Correspondent ಕರಾವಳಿ
ಮಂಗಳೂರು, ಅ.14 : ನಗರದ ಪಂಪ್ವೆಲ್ ಸರ್ಕಲ್ನಿಂದ ಕಂಕನಾಡಿ ಬೈಪಾಸ್ ವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವುದರಿಂದ ಅಕ್ಟೋಬರ್ 13 ರಿಂದ ಎಪ್ರಿಲ್ 15ರ ವರೆಗೆ (7 ತಿಂಗಳು) ವಾಹನಗಳ ಸಂಚಾರದಲ್ಲಿ ಮಾರ್ಗ ಬದಲಾಯಿಸಿ ತಾತ್ಕಾಲಿಕ ಅಧಿಸೂಚನೆ ಹೊರಡಿಸಲಾಗಿದೆ.
ಪಂಪ್ವೆಲ್ ವೃತ್ತದಿಂದ ಕಂಕನಾಡಿ ಬೈಪಾಸ್ ವರೆಗೆ ರಸ್ತೆಯ ಪ್ರಥಮ ಹಾಗೂ ದ್ವಿತೀಯ ಹಂತದ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುವ ಸಮಯದಲ್ಲಿ ದ್ವಿಮುಖ ರಸ್ತೆಯ ಒಂದು ರಸ್ತೆಯನ್ನು ಕರಾವಳಿ ಜಂಕ್ಷನ್ನಿಂದ ಪಂಪ್ವೆಲ್ ವರೆಗೆ ವಾಹನಗಳು ಸಂಚರಿಸಲು ತಾತ್ಕಾಲಿಕವಾಗಿ ಏಕಮಖ ರಸ್ತೆಯನ್ನಾಗಿ ಘೋಷಿಸಿದೆ. ಅದೇ ರೀತಿ ಪಂಪ್ವೆಲ್ ಕಡೆಯಿಂದ - ಕಂಕನಾಡಿ ಓಲ್ಡ್ ರಸ್ತೆ - ಕಂಕನಾಡಿ ಜಂಕ್ಷನ್ ರಸ್ತೆಯನ್ನು ತಾತ್ಕಾಲಿಕವಾಗಿ ಏಕಮುಖ ರಸ್ತೆಯನ್ನಾಗಿ ಘೋಷಿಸಿದೆ. ಏಕಮುಖ ರಸ್ತೆಯ ಎರಡೂ ಬದಿಗಳಲ್ಲಿ ಎಲ್ಲಾ ತರಹದ ವಾಹನಗಳ ನಿಲುಗಡೆ ಮಾಡುವುದನ್ನು ನಿಷೇಧಿಸಲಾಗಿದೆ.
ಪಡೀಲ್ ಹಾಗೂ ತೊಕ್ಕೊಟ್ಟು ಕಡೆಯಿಂದ ಪಂಪ್ವೆಲ್ ವೃತ್ತಕ್ಕೆ ಬಂದು ಕರಾವಳಿ ವೃತ್ತಕ್ಕೆ ಹೋಗುವ ಎಲ್ಲಾ ವಾಹನಗಳು ಕಂಕನಾಡಿ ಓಲ್ಡ್ ರಸ್ತೆ ಮೂಲಕ ಕಂಕನಾಡಿ ಜಂಕ್ಷನ್ಗೆ ಬಂದು ಬಲಕ್ಕೆ ತಿರುಗಿ ಕರಾವಳಿ ವೃತ್ತದ ಕಡೆಗೆ ಸಂಚರಿಸಬೇಕು. ಫಳ್ನೀರ್ ರಸ್ತೆಯಿಂದ ಹಾಗೂ ವೆಲೆನ್ಸಿಯಾ ರಸ್ತೆಯಿಂದ ಪಂಪ್ವೆಲ್ ಕಡೆಗೆ ಹೋಗುವ ಎಲ್ಲಾ ವಾಹನಗಳು ಕಂಕನಾಡಿ ಜಂಕ್ಷನ್ನಿಂದ ನೇರವಾಗಿ ಕರಾವಳಿ ಜಂಕ್ಷನ್ಗೆ ಬಂದು ಬಲಕ್ಕೆ ತಿರುಗಿ ಪಂಪ್ವೆಲ್ ವೃತ್ತದ ಕಡೆಗೆ ಸಂಚರಿಸಬೇಕು ಎಂದು ನಗರ ಪೋಲಿಸ್ ಆಯುಕ್ತರು ಆದೇಶಿಸಿದ್ದಾರೆ.
ರಸ್ತೆ ಬಂದ್ ಬಗ್ಗೆ ಜಾಲತಾಣದಲ್ಲಿ ಟೀಕೆ
ಪಂಪ್ವೆಲ್ - ಕಂಕನಾಡಿ ಮಧ್ಯದ 300 ಮೀಟರ್ ಉದ್ದದ ರಸ್ತೆಯನ್ನು ಕಾಂಕ್ರೀಟ್ ಮಾಡಲು ಸುದೀರ್ಘ ಏಳು ತಿಂಗಳ ಕಾಲ ರಸ್ತೆ ಬಂದ್ ಮಾಡುವುದಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಟೀಕೆ ವ್ಯಕ್ತವಾಗಿದೆ. ಈಗಾಗಲೇ ಮೋರ್ಗನ್ಸ್ ಗೇಟ್ ಬಳಿಯ ಜಪ್ಪು ಮಹಾಕಾಳಿ ಪಡ್ಪು ರೈಲ್ವೇ ಅಂಡರ್ ಪಾಸ್ ಕಾಮಗಾರಿ ಮುಗಿಯದೆ ಪ್ರಯಾಣಿಕರು ಸಂಕಷ್ಟ ಪಡುತ್ತಿದ್ದಾರೆ. ತಲಪಾಡಿ, ತೊಕ್ಕೊಟ್ಟು, ಉಳ್ಳಾಲದಿಂದ ಮಂಗಳೂರು ಬಂದರು ಕಡೆಗೆ ಹೋಗಲು ಜಪ್ಪು ರೈಲ್ವೇ ಅಂಡರ್ ಪಾಸ್ ಹತ್ತಿರದ ಸಂಪರ್ಕ. ಆದರೆ ಆ ರಸ್ತೆಯನ್ನು ಕಳೆದೆರಡು ವರ್ಷದಿಂದ ಕಾಮಗಾರಿ ಸಲುವಾಗಿ ಮುಚ್ಚಲಾಗಿದೆ. ಇದರಿಂದಾಗಿ ಮೀನಿನ ಟೆಂಪೋ, ಈಚರ್ ಮಾದರಿಯ ವಾಹನಗಳು, ಪ್ರಯಾಣಿಕರು ಪಂಪ್ವೆಲ್ ಮೂಲಕ ಸುತ್ತು ಬಳಸಿ ಹೋಗಬೇಕು. ಇದರ ನಡುವೆ ಪಂಪ್ವೆಲ್ ಕಂಕನಾಡಿ ರಸ್ತೆಯನ್ನೂ ಬಂದ್ ಮಾಡಿದರೆ ಹೇಗೆ ಎಂದು ಜಾಲತಾಣದಲ್ಲಿ ಪ್ರಶ್ನೆ ಮಾಡಿದ್ದಾರೆ. ಸಣ್ಣ ರಸ್ತೆಯ ಕಾಮಗಾರಿ ನಡೆಸಲು ದೀರ್ಘ ಏಳು ತಿಂಗಳು ಅಗತ್ಯ ಇದೆಯೇ ಎಂದು ಪ್ರಶ್ನೆ ಮಾಡಿದ್ದಾರೆ.
Road development work between Pumpwell Circle and Kankanady Bypass in Mangaluru has led to traffic diversions from October 13 to April 15. The stretch will remain partially closed as authorities convert sections into one-way routes for construction. Parking on both sides has also been prohibited.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm