ಬ್ರೇಕಿಂಗ್ ನ್ಯೂಸ್
16-10-25 10:37 pm Mangalore Correspondent ಕರಾವಳಿ
ಮಂಗಳೂರು, ಅ.16 : 1971ರ ಭಾರತ - ಪಾಕ್ ಯುದ್ಧದಲ್ಲಿ ಭಾಗವಹಿಸಿದ ಯುದ್ಧ ವೀರ ಗರೋಡಿ ತಿಮ್ಮಪ್ಪ ಆಳ್ವ(85) ಗುರುವಾರ ಸಂಜೆ ನಗರದ ಕುಂಟಿಕಾನ ಬಳಿಯ ಲೋಹಿತ್ ನಗರದ ತಮ್ಮ ನಿವಾಸದಲ್ಲಿ ನಿಧನ ಹೊಂದಿದರು.
ಮೃತರ ದೇಹವನ್ನು ಅವರ ಇಚ್ಛೆಯಂತೆ ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆಗೆ ದಾನ ಮಾಡಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಅವರ ಪುತ್ರ ಮೃತರಾಗಿದ್ದು ಪತ್ನಿ, ಒಬ್ಬರು ಮಗಳು ಆಯುರ್ವೇದಿಕ್ ವೈದ್ಯರಾಗಿದ್ದು ಮತ್ತು ಮೊಮ್ಮಕ್ಕಳು ಇದ್ದಾರೆ. ಜಿಟಿ ಆಳ್ವರು ಭೂಸೇನೆಯಲ್ಲಿ ಸೇವೆ ನಿರ್ವಹಿಸಿದ್ದು 1971ರ ಯುದ್ಧದಲ್ಲಿ ತೀವ್ರ ಗಾಯಗೊಂಡು ಚೇತರಿಕೆ ಕಂಡ ಬಳಿಕವೂ ಹತ್ತು ವರ್ಷ ಕಾಲ ದೇಶ ಸೇವೆಯಲ್ಲಿ ತೊಡಗಿದ್ದರು. 1982ರಲ್ಲಿ ಸೇನೆಯಿಂದ ಸ್ವಯಂ ನಿವೃತ್ತರಾಗಿ ಬಳಿಕ ಮಂಗಳೂರಿಗೆ ಬಂದು ಫುಡ್ ಇನ್ಸ್ ಪೆಕ್ಟರ್ ಆಗಿದ್ದರು. ಬೆಳ್ತಂಗಡಿ, ಬಂಟ್ವಾಳದಲ್ಲಿ ಕರ್ತವ್ಯ ನಿರ್ವಹಿಸಿ 2000ನೇ ಇಸವಿಯಲ್ಲಿ ನಿವೃತ್ತರಾಗಿದ್ದರು.
ಇತ್ತೀಚೆಗೆ ಅವರ ಅನುಭವ ಕಥನ 'ಗರೋಡಿ ಮನೆಯಿಂದ ಸೇನಾ ಗರಡಿಗೆ' ಪ್ರಕಟವಾಗಿತ್ತು. ತುಳುನಾಡಿನ ಸಾಮಾನ್ಯ ಕೃಷಿ ಕುಟುಂಬ ಒಂದರಲ್ಲಿ ಜನಿಸಿದ ಯುವಕ ದೇಶ ಕಾಯುವ ಸೈನಿಕನಾಗಿದ್ದಲ್ಲದೆ, 1971ರ ಪಾಕಿಸ್ತಾನ ಜೊತೆಗಿನ ಯುದ್ಧದಲ್ಲಿ ಪಾಲ್ಗೊಂಡು ಜೀವನ್ಮರಣ ಸ್ಥಿತಿಗೆ ಒಳಗಾಗಿದ್ದರು. ಹೆಲಿಕಾಫ್ಟರ್ ನಲ್ಲಿ ಯುದ್ಧ ಶಿಬಿರಕ್ಕೆ ಪ್ರಯಾಣಿಸುವ ವೇಳೆ ಪಾಕ್ ಸೈನಿಕರ ಫಿರಂಗಿ ದಾಳಿಗೆ ತುತ್ತಾಗಿ ಚಿತ್ತಗಾಂಗ್ ಪ್ರದೇಶದ ಕಾಡಿನಲ್ಲಿ ಬಿದ್ದು ಜೀವನ್ಮರಣ ಹೋರಾಟ ನಡೆಸಿ ಬದುಕಿ ಉಳಿದಿದ್ದರು. ಇವೆಲ್ಲದರ ಅನುಭವ ಕಥನ ಕಿರು ಪುಸ್ತಕವಾಗಿ ಪ್ರಕಟವಾಗಿದೆ.
1971ರ ಭಾರತ -ಪಾಕ್ ಯುದ್ಧದಲ್ಲಿ ಭಾರತ ಜಗತ್ತು ಬೆರಗಾಗುವ ರೀತಿಯಲ್ಲಿ ಜಯ ಗಳಿಸಿತ್ತು. ದೇಶದ ಅಂದಿನ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿಯವರ ದಿಟ್ಟ ನಿರ್ಧಾರ, ಅಂತಾರಾಷ್ಟ್ರೀಯ ಸಂಬಂಧಗಳನ್ನು ನಿಭಾಯಿಸಿದ ಚಾಣಾಕ್ಷತೆ, ಸೇನಾ ದಂಡನಾಯಕ ಮಾಣೆಕ್ ಶಾ ರೂಪಿಸಿದ ಯುದ್ಧ ತಂತ್ರ ಬೆರಗಿನದ್ದು. ಪಾಕ್ ವಿರುದ್ಧದ ಮೂರೂ ಯುದ್ಧದಲ್ಲಿ ಭಾಗವಹಿಸಿದ್ದ ಹಿರಿಮೆ ಜಿ.ಟಿ ಆಳ್ವ ಅವರದ್ದು. ಡೆಹ್ರಾಡೂನ್, ನಾಗಾಲ್ಯಾಂಡ್, ಉತ್ತರ ಪ್ರದೇಶ, ಅಸ್ಸಾಂ ಇನ್ನಿತರ ಕಡೆಗಳಲ್ಲಿ ಅವರು ಸೇವೆಗೈದಿದ್ದರು.
Former Indian Army soldier Garodi Thimmappa Alva (85), a veteran of the 1971 India–Pakistan war, passed away on Thursday evening at his residence in Lohit Nagar near Kuntikana, Mangaluru. A native of a farming family, Alva served in the Army for over a decade and miraculously survived after falling from a helicopter during enemy shelling in the Chittagong region.
16-10-25 09:04 pm
Bangalore Correspondent
ನವೆಂಬರಲ್ಲಿ ಅಧಿಕಾರ ಬಿಡಲು ಹೈಕಮಾಂಡ್ ಹೇಳಿಲ್ಲ, ಸಿದ...
16-10-25 04:44 pm
ಆರೆಸ್ಸೆಸ್ ಚಟುವಟಿಕೆ ನಿಷೇಧ ; ಸಚಿವ ಪ್ರಿಯಾಂಕ ಖರ್ಗ...
16-10-25 04:40 pm
ರಾಜ್ಯದಲ್ಲಿ 800 ಸರಕಾರಿ ಶಾಲೆ ಕರ್ನಾಟಕ ಪಬ್ಲಿಕ್ ಶಾ...
15-10-25 10:59 pm
ದೀಪಾವಳಿಗೆ ಹೆಚ್ಚುವರಿ ರೈಲು ; ಮಂಗಳೂರು- ಬೆಂಗಳೂರು,...
15-10-25 03:35 pm
16-10-25 10:52 pm
HK News Desk
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
16-10-25 10:37 pm
Mangalore Correspondent
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
ಪ್ರಿಯಾಂಕ ಖರ್ಗೆ ಮಾತು ಸರಿಯಾಗಿಯೇ ಇದೆ, ಸಮಾಜದಲ್ಲಿ...
16-10-25 05:09 pm
ತೆಂಕುತಿಟ್ಟಿನ ಪ್ರಸಿದ್ಧ ಭಾಗವತ, ಗಾನ ಕೋಗಿಲೆ ದಿನೇಶ...
16-10-25 01:11 pm
Pumpwell Kankandy Road close: ಪಂಪ್ವೆಲ್ - ಕಂಕ...
15-10-25 05:36 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm