ಬ್ರೇಕಿಂಗ್ ನ್ಯೂಸ್
19-10-25 07:58 pm Mangalore Correspondent ಕರಾವಳಿ
ಮಂಗಳೂರು, ಅ.19 : ಇತ್ತೀಚೆಗೆ ತನ್ನ ಸಾವಿಗೆ ಹನಿಟ್ರ್ಯಾಪ್ ನಡೆಸಿದ್ದ ಯುವತಿ ಸೇರಿ ನಾಲ್ವರು ಕಾರಣವೆಂದು ಡೆತ್ ನೋಟ್ ಬರೆದಿಟ್ಟು ಲೇಡಿಗೋಷನ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಅಭಿಷೇಕ್ ಆಚಾರ್ಯ ಎಂಬ ಯುವಕ ಕಾರ್ಕಳದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ಡೆತ್ ನೋಟ್ ನಲ್ಲಿ ಲೇಡಿಗೋಷನ್ ಆಸ್ಪತ್ರೆಯಲ್ಲಿ ನರ್ಸ್ ಆಗಿರುವ ನಿರೀಕ್ಷಾ ಎಂಬ ಯುವತಿ ಬಗ್ಗೆಯೇ ಆರೋಪ ಹೊರಿಸಲಾಗಿತ್ತು. ಆಕೆಯನ್ನು ಈಗ ನಗರದ ಕದ್ರಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಡೆತ್ ನೋಟ್ ನಲ್ಲಿ ನಿರೀಕ್ಷಾ ತನ್ನ ಜೊತೆಗೆ ರೂಮಿನಲ್ಲಿದ್ದ ಬೇರೆ ಹುಡುಗಿಯರ ಫೋಟೊ, ವಿಡಿಯೋಗಳನ್ನೂ ಗುಪ್ತ ಕ್ಯಾಮರಾದಲ್ಲಿ ತೆಗೆದಿಟ್ಟು ಬ್ಲಾಕ್ಮೇಲ್ ಮಾಡುತ್ತಿದ್ದಾಳೆ ಎಂದೂ ಬರೆಯಲಾಗಿತ್ತು. ಅದರಲ್ಲಿ ಉಲ್ಲೇಖಿಸಲಾಗಿದ್ದ ಯುವತಿಯೊಬ್ಬಳು ಕದ್ರಿ ಠಾಣೆಯಲ್ಲಿ ದೂರು ನೀಡಿದ್ದು ತನ್ನ ಬಟ್ಟೆ ತೆಗೆಯುವ ವಿಡಿಯೋವನ್ನು ಚಿತ್ರೀಕರಿಸಿ ಜಾಲತಾಣದಲ್ಲಿ ಹಂಚಿದ್ದಾಳೆಂದು ನಿರೀಕ್ಷಾ ವಿರುದ್ಧ ದೂರು ನೀಡಿದ್ದಳು. ಪ್ರಕರಣ ಸಂಬಂಧಿಸಿ ಕದ್ರಿ ಪೊಲೀಸರು ಆರೋಪಿ ಯುವತಿಯನ್ನು ಬಂಧಿಸಿದ್ದು ಕೋರ್ಟಿಗೆ ಹಾಜರುಪಡಿಸಿ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.


ನಾಲ್ವರ ವಿರುದ್ಧ ಎಫ್ಐಆರ್ ದಾಖಲು
ಇದೇ ವೇಳೆ, ಹನಿಟ್ರ್ಯಾಪ್ ಪ್ರಕರಣದಲ್ಲಿ ಅಭಿಷೇಕ್ ಸಾವಿಗೆ ಕಾರಣವಾದ ನಿರೀಕ್ಷಾ, ರಾಕೇಶ್, ತಸ್ಲೀಂ ಎಂಬವರನ್ನು ಒಳಗೊಂಡ ತಂಡವನ್ನು ಬಂಧಿಸಬೇಕೆಂದು ಜಾಲತಾಣದಲ್ಲಿ ಆಗ್ರಹ ಕೇಳಿಬರುತ್ತಿದೆ. ವಿಶ್ವಕರ್ಮ ಸಮಾಜದ ಮುಖಂಡರು ರಾಜ್ಯ ಗೃಹ ಸಚಿವರಿಗೂ ಮನವಿ ನೀಡಿದ್ದಾರೆ. ಅಲ್ಲದೆ, ಉಡುಪಿ ಎಸ್ಪಿ ಅವರನ್ನೂ ಭೇಟಿಯಾಗಿ ಮನವಿ ನೀಡಿದ್ದಾರೆ.
ಉಡುಪಿ ಎಸ್ಪಿ ಹರಿರಾಮ್ ಶಂಕರ್ ಸ್ಪಷ್ಟನೆ ನೀಡಿದ್ದು, ಸೂಸೈಡ್ ನೋಟ್ನಲ್ಲಿರುವ ವಿಷಯಗಳ ಬಗ್ಗೆ ಸಂಪೂರ್ಣ ತನಿಖೆ ನಡೆಸಲಾಗುವುದು. ತಾಂತ್ರಿಕ ಸಾಕ್ಷ್ಯಗಳನ್ನು ಸಂಗ್ರಹಿಸಿ, ಆತ್ಮಹತ್ಯೆ ಹಿಂದಿರುವ ನೈಜತೆಯನ್ನು ಪತ್ತೆಹಚ್ಚುವತ್ತ ಗಮನಹರಿಸಲಾಗಿದೆ. ಈಗಲೇ ಯಾವುದೇ ತೀರ್ಮಾನಕ್ಕೆ ಬರುವುದಿಲ್ಲ, ಆತ್ಮಹತ್ಯೆಗೆ ಪ್ರಚೋದನೆ ನೀಡಿದವರು ಯಾರೇ ಇದ್ದರೂ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ಕಾರ್ಕಳ ಪೊಲೀಸರು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ನಾಲ್ವರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ನಾಲ್ವರ ಪೈಕಿ ಈಗಾಗಲೇ ಮೂವರನ್ನು ವಿಚಾರಣೆ ನಡೆಸಲಾಗಿದ್ದು, ಅವರ ಮೊಬೈಲ್ ಫೋನ್ ವಶಪಡಿಸಿ ತಾಂತ್ರಿಕ ಪರೀಕ್ಷೆಗೆ ಕಳುಹಿಸಲಾಗಿದೆ. ಮೃತ ಅಭಿಷೇಕ್ನ ಫೋನ್ ಕೂಡ ವಶಕ್ಕೆ ಪಡೆದಿದ್ದು, ಅದರಲ್ಲಿರುವ ಫೋಟೋಗಳು, ವಿಡಿಯೋಗಳು ಮತ್ತು ಸಂದೇಶಗಳನ್ನು ಸಾಕ್ಷ್ಯವಾಗಿ ದಾಖಲಿಸಿಕೊಳ್ಳಲಾಗಿದೆ. ಹೆಚ್ಚಿನ ವೈಜ್ಞಾನಿಕ ಸಾಕ್ಷ್ಯಗಳಿಗಾಗಿ ಫೋನ್ ಅನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದಿದ್ದಾರೆ.
In connection with the death of Abhishek Acharya, a staff member of Lady Goschen Hospital who died by suicide in Karkala, police have arrested Nireeksha, a nurse named in his death note. The note alleged that Nireeksha secretly recorded photos and videos of other women in her room and blackmailed them.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm