ಬ್ರೇಕಿಂಗ್ ನ್ಯೂಸ್
22-10-25 09:55 pm Mangalore Correspondent ಕರಾವಳಿ
ಪುತ್ತೂರು, ಅ.22 : ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದ ಗೋಸಾಗಾಟದ ಲಾರಿಗೆ ತಡೆಯೊಡ್ಡಿದ ಪ್ರಕರಣದಲ್ಲಿ ಹಿಂದು ಪರ ಮುಖಂಡ ಅರುಣ್ ಪುತ್ತಿಲ ಅವರು ತಲವಾರು ಹಿಡಿದು ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದ್ದಾರೆಂದು ಸುಳ್ಳು ಸುದ್ದಿ ಹಬ್ಬಿಸುವ ಯತ್ನ ನಡೆದಿದೆ. ಈ ಬಗ್ಗೆ ಎಸ್ಪಿ ಅರುಣ್ ಸ್ಪಷ್ಟನೆ ನೀಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 12 ಜಾನುವಾರುಗಳಲ್ಲಿ ಹಿಂಸಾತ್ಮಕ ರೀತಿ ಕಟ್ಟಿದ್ದರಿಂದ ಒಂದು ಜಾನುವಾರು ಸತ್ತಿತ್ತು. ಈ ವೇಳೆ, ಸ್ಥಳಕ್ಕೆ ಬಂದಿದ್ದ ಅರುಣ್ ಕುಮಾರ್ ಪುತ್ತಿಲ ಗೋವು ಸತ್ತಿದ್ದನ್ನು ಗಮನಿಸಿ ಪೊಲೀಸರ ಅನುಮತಿ ಪಡೆದು ತುರ್ತಾಗಿ ಎತ್ತುಗಳನ್ನು ವಾಹನದಿಂದ ಇಳಿಸಲು ಮುಂದಾಗಿದ್ದಾರೆ. ಜಾನುವಾರಗಳು ಇನ್ನಷ್ಟು ಸಾವಾಗುವುದನ್ನು ತಪ್ಪಿಸಲು ಪೊಲೀಸರ ಜೊತೆಗೆ ವಾಹನವನ್ನು ಹೊರಭಾಗದಿಂದ ಕಟ್ಟಿದ್ದ ಹಗ್ಗವನ್ನು ಕತ್ತಿಯಲ್ಲಿ ಕಡಿದು ಹಾಕಿದ್ದಾರೆ. ಹತ್ತಿರದ ಮನೆಯಿಂದ ಕತ್ತಿಯನ್ನು ತರಿಸಿಕೊಂಡು ಕಟ್ಟಿ ಹಾಕಿದ್ದ ಹಗ್ಗಗಳನ್ನು ಕತ್ತರಿಸಿರುವುದಾಗಿದೆ.




ಆದರೆ ಅರುಣ್ಕುಮಾರ್ ಪುತ್ತಿಲ ಕೈಯಲ್ಲಿದ್ದ ಕತ್ತಿಯನ್ನು ಸಮೀಪದ ಮನೆಯೊಂದರಿಂದ ತರಲಾಗಿತ್ತು. ಘಟನೆ ನಡೆದ ಸ್ಥಳದ ಎದುರಿನ ಮುಸ್ಲಿಂ ಕುಟುಂಬದ ಮನೆಯಿಂದ ಆ ಕತ್ತಿಯನ್ನು ತರಲಾಗಿದ್ದು, ಜಾನುವಾರುಗಳನ್ನು ರಕ್ಷಿಸಲು ಸಹಾಯವಾಗಲೆಂದು ಅವರು ತಮ್ಮ ಮನೆಯಿಂದ ಕತ್ತಿಯನ್ನು ನೀಡಿದ್ದರು.
ಪೊಲೀಸರು ಇಂತಹ ಸಂದರ್ಭಗಳಲ್ಲಿ ಕೆಲವೊಮ್ಮೆ ಸ್ಥಳೀಯರು ಮತ್ತು ಇತರರ ಸಹಾಯವನ್ನು ಪಡೆಯುತ್ತಾರೆ. ಉದಾಹರಣೆಗೆ ರೋಗಿಗಳನ್ನು ಸ್ಥಳಾಂತರಿಸುವುದು, ಶವಗಳನ್ನು ಸಾಗಿಸುವುದು, ರಸ್ತೆಗಳಿಂದ ವಾಹನಗಳನ್ನು ತೆರವುಗೊಳಿಸುವುದು, ಎತ್ತುಗಳನ್ನು ಇಳಿಸುವುದು ಇತ್ಯಾದಿ. ಯಾರು ಅನಧಿಕೃತ ಕೃತ್ಯ ಮಾಡುತ್ತಾರೋ, ಅವರನ್ನು ಕೇವಲ ಅಪರಾಧಿಗಳೆಂದು ಪರಿಗಣಿಸಬೇಕು. ಈವರೆಗೆ ದಾಖಲಾಗಿರುವ ಪ್ರಕರಣಗಳ ವಿಶ್ಲೇಷಣೆಯಿಂದ ನೋಡಿದರೆ, ಜಾನುವಾರು ಸಾಗಾಣಿಕೆ ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿಗಳು ವಿವಿಧ ಧರ್ಮದವರಾಗಿದ್ದಾರೆ ಎಂಬುದು ಸ್ಪಷ್ಟವಾಗುತ್ತದೆ.
ಆದ್ದರಿಂದ, ಯಾವುದೇ ಸಂಸ್ಥೆ ಅಥವಾ ಸಂಘಟನೆಯು ಆರೋಪಿಯು ಬೇರೆ ಧರ್ಮದವರಾದ್ದರಿಂದ ಮಾತ್ರ ವಿಷಯವನ್ನು ಮುನ್ನೆಲೆಗೆ ತರುತ್ತಿದ್ದರೆ, ಅಥವಾ ತಮ್ಮ ಧರ್ಮದವರಾದ್ದರಿಂದ ಅದನ್ನು ಮುಚ್ಚಿಡುತ್ತಿದ್ದರೆ, ಜನರು ಅವರ ಉದ್ದೇಶಗಳನ್ನು ಪ್ರಶ್ನಿಸಬೇಕು. ಅವರ ಅಜೆಂಡಾಕ್ಕೆ ಬೆಂಬಲ ನೀಡಬಾರದು ಎಂದು ವಿನಂತಿಸಲಾಗಿದೆ. ಈ ಸಂಬಂಧ ತಪ್ಪು ಪ್ರಚಾರ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಎಸ್ಪಿ ಎಚ್ಚರಿಕೆ ನೀಡಿದ್ದಾರೆ.
Dakshina Kannada SP Arun has issued a clarification regarding rumours that Hindu leader Arun Puthila carried a sword during a police operation to stop illegal cattle transport in Puttur.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm