ಬ್ರೇಕಿಂಗ್ ನ್ಯೂಸ್
25-10-25 02:36 pm Mangalore Correspondent ಕರಾವಳಿ
ಮಂಗಳೂರು, ಅ.25: ಸಕಲೇಶಪುರ- ಸುಬ್ರಹ್ಮಣ್ಯ ರೋಡ್ ನಡುವೆ ನಡೆಯುತ್ತಿರುವ ರೈಲ್ವೆ ವಿದ್ಯುದ್ದೀಕರಣ ಕಾರ್ಯದಿಂದಾಗಿ, ಮಂಗಳೂರು ಬೆಂಗಳೂರು ನಡುವೆ ಸಂಚರಿಸುವ ಹಲವು ರೈಲುಗಳ ಸಮಯದಲ್ಲಿ ವ್ಯತ್ಯಯವಾಗಲಿದ್ದು, ಕೆಲವು ರೈಲುಗಳ ಸಂಚಾರವನ್ನು ರದ್ದು ಮಾಡಲಾಗಿದೆ.
ವಿದ್ಯುದ್ದೀಕರಣ ಕಾಮಗಾರಿ ನವೆಂಬರ್ 2 ರಿಂದ ಡಿಸೆಂಬರ್ 15ರ ವರೆಗೆ ನಡೆಯಲಿದ್ದು ಈ ವೇಳೆ ಹಲವು ರೈಲುಗಳ ಸೇವೆಯನ್ನು ರದ್ದುಪಡಿಸಲಾಗಿದೆ. ಈ ಕುರಿತು ನೈರುತ್ಯ ರೈಲ್ವೆ ಪ್ರಕಟಣೆ ಹೊರಡಿಸಿದೆ. ಕಾಮಗಾರಿ ನಡುವೆ ಪ್ರತಿ ದಿನ ನಾಲ್ಕು ಗಂಟೆಗಳಿಗೊಮ್ಮೆ ಲೈನ್ ಬ್ಲಾಕ್ ತೆರೆದುಕೊಳ್ಳಲಿದೆ. ಈ ವೇಳೆ ಮಾತ್ರ ರೈಲುಗಳ ಸಂಚಾರ ಇರಲಿದೆ.
ರೈಲು ಸಂಖ್ಯೆ 16539 ಯಶವಂತಪುರ–ಮಂಗಳೂರು ಜಂಕ್ಷನ್ ಸಾಪ್ತಾಹಿಕ ಎಕ್ಸ್’ಪ್ರೆಸ್ ರೈಲು ಮೊದಲು 01.11.2025 ರ ವರೆಗೆ ರದ್ದುಗೊಂಡಿತ್ತು. ಈಗ 08.11.2025 ರಿಂದ 13.12.2025 ರವರೆಗೆ ರದ್ದುಗೊಳ್ಳಲಿದೆ.
ರೈಲು ಸಂಖ್ಯೆ 16540 ಮಂಗಳೂರು ಜಂಕ್ಷನ್–ಯಶವಂತಪುರ ಸಾಪ್ತಾಹಿಕ ಎಕ್ಸ್’ಪ್ರೆಸ್ ರೈಲು ಮೊದಲು 02.11.2025 ರ ವರೆಗೆ ರದ್ದುಗೊಂಡಿತ್ತು. ಈಗ 09.11.2025 ರಿಂದ 14.12.2025 ರವರೆಗೆ ರದ್ದುಗೊಳ್ಳಲಿದೆ. ರೈಲು ಸಂಖ್ಯೆ 16575 ಯಶವಂತಪುರ – ಮಂಗಳೂರು ಜಂಕ್ಷನ್ ಗೋಮಟೇಶ್ವರ ಟ್ರೈನ್-ವೀಕ್ಲಿ ಎಕ್ಸ್’ಪ್ರೆಸ್ ಮೊದಲು 30.10.2025 ರ ವರೆಗೆ ರದ್ದುಗೊಂಡಿತ್ತು. ಈಗ 02.11.2025 ರಿಂದ 14.12.2025 ರ ವರೆಗೆ ರದ್ದುಗೊಳ್ಳಲಿದೆ.
ರೈಲು ಸಂಖ್ಯೆ 16576 ಮಂಗಳೂರು ಜಂಕ್ಷನ್– ಯಶವಂತಪುರ ಟ್ರೈ-ವೀಕ್ಲಿ ಎಕ್ಸ್’ಪ್ರೆಸ್ ಮೊದಲು 30.10.2025ರ ವರೆಗೆ ರದ್ದುಗೊಂಡಿತ್ತು. ಈಗ 03.11.2025 ರಿಂದ 15.12.2025 ರವರೆಗೆ ರದ್ದುಗೊಳ್ಳಲಿದೆ. ರೈಲು ಸಂಖ್ಯೆ 16515 ಯಶವಂತಪುರ – ಕಾರವಾರ ಟ್ರೈ-ವೀಕ್ಲಿ ಎಕ್ಸ್’ಪ್ರೆಸ್ ಮೊದಲು 31.10.2025 ರವರೆಗೆ ರದ್ದುಗೊಂಡಿತ್ತು. ಈಗ 03.11.2025 ರಿಂದ 15.12.2025 ರವರೆಗೆ ರದ್ದುಗೊಳ್ಳಲಿದೆ.
ರೈಲು ಸಂಖ್ಯೆ 16516 ಕಾರವಾರ – ಯಶವಂತಪುರ ಟ್ರೈ-ವೀಕ್ಲಿ ಎಕ್ಸ್’ಪ್ರೆಸ್ ಮೊದಲು 01.11.2025 ರವರೆಗೆ ರದ್ದುಗೊಂಡಿತ್ತು. ಈಗ 04.11.2025 ರಿಂದ 16.12.2025 ರವರೆಗೆ ರದ್ದುಗೊಳ್ಳಲಿದೆ.
ಬೆಳಗಿನ ರೈಲು ರದ್ದು ವಿಸ್ತರಣೆ
ಭಾರಿ ಮಳೆಯ ಕಾರಣ ರದ್ದಾಗಿದ್ದ ಮಂಗಳೂರು - ಬೆಂಗಳೂರು ಬೆಳಗಿನ ರೈಲುಗಳ ರದ್ದು ನಿರ್ಧಾರವನ್ನು ಕಳೆದ ತಿಂಗಳು ವಿಸ್ತರಣೆ ಮಾಡಲಾಗಿದೆ. ವಿದ್ಯುದ್ದೀಕರಣ ಕಾಮಗಾರಿ ಹಿನ್ನಲೆಯಲ್ಲಿ ಈ ರೈಲು ಸಂಚಾರವನ್ನು ಡಿಸೆಂಬರ್ 16ರ ವರೆಗೆ ರದ್ದು ಮಾಡಲಾಗಿದೆ.
Train services between Mangaluru and Bengaluru will face disruptions until mid-December due to ongoing railway electrification work between Sakleshpur and Subrahmanya Road. Several trains have been cancelled or rescheduled during this period, according to a press release issued by the South Western Railway.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm