ಬ್ರೇಕಿಂಗ್ ನ್ಯೂಸ್
25-10-25 02:36 pm Mangalore Correspondent ಕರಾವಳಿ
ಮಂಗಳೂರು, ಅ.25: ಸಕಲೇಶಪುರ- ಸುಬ್ರಹ್ಮಣ್ಯ ರೋಡ್ ನಡುವೆ ನಡೆಯುತ್ತಿರುವ ರೈಲ್ವೆ ವಿದ್ಯುದ್ದೀಕರಣ ಕಾರ್ಯದಿಂದಾಗಿ, ಮಂಗಳೂರು ಬೆಂಗಳೂರು ನಡುವೆ ಸಂಚರಿಸುವ ಹಲವು ರೈಲುಗಳ ಸಮಯದಲ್ಲಿ ವ್ಯತ್ಯಯವಾಗಲಿದ್ದು, ಕೆಲವು ರೈಲುಗಳ ಸಂಚಾರವನ್ನು ರದ್ದು ಮಾಡಲಾಗಿದೆ.
ವಿದ್ಯುದ್ದೀಕರಣ ಕಾಮಗಾರಿ ನವೆಂಬರ್ 2 ರಿಂದ ಡಿಸೆಂಬರ್ 15ರ ವರೆಗೆ ನಡೆಯಲಿದ್ದು ಈ ವೇಳೆ ಹಲವು ರೈಲುಗಳ ಸೇವೆಯನ್ನು ರದ್ದುಪಡಿಸಲಾಗಿದೆ. ಈ ಕುರಿತು ನೈರುತ್ಯ ರೈಲ್ವೆ ಪ್ರಕಟಣೆ ಹೊರಡಿಸಿದೆ. ಕಾಮಗಾರಿ ನಡುವೆ ಪ್ರತಿ ದಿನ ನಾಲ್ಕು ಗಂಟೆಗಳಿಗೊಮ್ಮೆ ಲೈನ್ ಬ್ಲಾಕ್ ತೆರೆದುಕೊಳ್ಳಲಿದೆ. ಈ ವೇಳೆ ಮಾತ್ರ ರೈಲುಗಳ ಸಂಚಾರ ಇರಲಿದೆ.
ರೈಲು ಸಂಖ್ಯೆ 16539 ಯಶವಂತಪುರ–ಮಂಗಳೂರು ಜಂಕ್ಷನ್ ಸಾಪ್ತಾಹಿಕ ಎಕ್ಸ್’ಪ್ರೆಸ್ ರೈಲು ಮೊದಲು 01.11.2025 ರ ವರೆಗೆ ರದ್ದುಗೊಂಡಿತ್ತು. ಈಗ 08.11.2025 ರಿಂದ 13.12.2025 ರವರೆಗೆ ರದ್ದುಗೊಳ್ಳಲಿದೆ.
ರೈಲು ಸಂಖ್ಯೆ 16540 ಮಂಗಳೂರು ಜಂಕ್ಷನ್–ಯಶವಂತಪುರ ಸಾಪ್ತಾಹಿಕ ಎಕ್ಸ್’ಪ್ರೆಸ್ ರೈಲು ಮೊದಲು 02.11.2025 ರ ವರೆಗೆ ರದ್ದುಗೊಂಡಿತ್ತು. ಈಗ 09.11.2025 ರಿಂದ 14.12.2025 ರವರೆಗೆ ರದ್ದುಗೊಳ್ಳಲಿದೆ. ರೈಲು ಸಂಖ್ಯೆ 16575 ಯಶವಂತಪುರ – ಮಂಗಳೂರು ಜಂಕ್ಷನ್ ಗೋಮಟೇಶ್ವರ ಟ್ರೈನ್-ವೀಕ್ಲಿ ಎಕ್ಸ್’ಪ್ರೆಸ್ ಮೊದಲು 30.10.2025 ರ ವರೆಗೆ ರದ್ದುಗೊಂಡಿತ್ತು. ಈಗ 02.11.2025 ರಿಂದ 14.12.2025 ರ ವರೆಗೆ ರದ್ದುಗೊಳ್ಳಲಿದೆ.
ರೈಲು ಸಂಖ್ಯೆ 16576 ಮಂಗಳೂರು ಜಂಕ್ಷನ್– ಯಶವಂತಪುರ ಟ್ರೈ-ವೀಕ್ಲಿ ಎಕ್ಸ್’ಪ್ರೆಸ್ ಮೊದಲು 30.10.2025ರ ವರೆಗೆ ರದ್ದುಗೊಂಡಿತ್ತು. ಈಗ 03.11.2025 ರಿಂದ 15.12.2025 ರವರೆಗೆ ರದ್ದುಗೊಳ್ಳಲಿದೆ. ರೈಲು ಸಂಖ್ಯೆ 16515 ಯಶವಂತಪುರ – ಕಾರವಾರ ಟ್ರೈ-ವೀಕ್ಲಿ ಎಕ್ಸ್’ಪ್ರೆಸ್ ಮೊದಲು 31.10.2025 ರವರೆಗೆ ರದ್ದುಗೊಂಡಿತ್ತು. ಈಗ 03.11.2025 ರಿಂದ 15.12.2025 ರವರೆಗೆ ರದ್ದುಗೊಳ್ಳಲಿದೆ.
ರೈಲು ಸಂಖ್ಯೆ 16516 ಕಾರವಾರ – ಯಶವಂತಪುರ ಟ್ರೈ-ವೀಕ್ಲಿ ಎಕ್ಸ್’ಪ್ರೆಸ್ ಮೊದಲು 01.11.2025 ರವರೆಗೆ ರದ್ದುಗೊಂಡಿತ್ತು. ಈಗ 04.11.2025 ರಿಂದ 16.12.2025 ರವರೆಗೆ ರದ್ದುಗೊಳ್ಳಲಿದೆ.
ಬೆಳಗಿನ ರೈಲು ರದ್ದು ವಿಸ್ತರಣೆ
ಭಾರಿ ಮಳೆಯ ಕಾರಣ ರದ್ದಾಗಿದ್ದ ಮಂಗಳೂರು - ಬೆಂಗಳೂರು ಬೆಳಗಿನ ರೈಲುಗಳ ರದ್ದು ನಿರ್ಧಾರವನ್ನು ಕಳೆದ ತಿಂಗಳು ವಿಸ್ತರಣೆ ಮಾಡಲಾಗಿದೆ. ವಿದ್ಯುದ್ದೀಕರಣ ಕಾಮಗಾರಿ ಹಿನ್ನಲೆಯಲ್ಲಿ ಈ ರೈಲು ಸಂಚಾರವನ್ನು ಡಿಸೆಂಬರ್ 16ರ ವರೆಗೆ ರದ್ದು ಮಾಡಲಾಗಿದೆ.
Train services between Mangaluru and Bengaluru will face disruptions until mid-December due to ongoing railway electrification work between Sakleshpur and Subrahmanya Road. Several trains have been cancelled or rescheduled during this period, according to a press release issued by the South Western Railway.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm