ಬ್ರೇಕಿಂಗ್ ನ್ಯೂಸ್
27-10-25 07:24 pm Mangalore Correspondent ಕರಾವಳಿ
ಮಂಗಳೂರು, ಅ.27: ಆರೆಸ್ಸೆಸ್ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಯಾವುದೇ ರೀತಿಯ ಬಲವಂತದ ಕ್ರಮ ಕೈಗೊಳ್ಳುವುದು ಬೇಡ ಎಂದು ಪುತ್ತೂರು ಹೆಚ್ಚುವರಿ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯ ಸೂಚಿಸಿದೆ.
ಮುಸ್ಲಿಂ ಮಹಿಳೆಯರ ವಿರುದ್ಧ ಅವಮಾನಕಾರಿ ಹೇಳಿಕೆ ನೀಡಿದ್ದಾರೆಂಬ ಆರೋಪದಲ್ಲಿ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಕಲ್ಲಡ್ಕ ಭಟ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಅಲ್ಲದೆ, ಕೇಸು ದಾಖಲು ಹಿನ್ನೆಲೆಯಲ್ಲಿ ಅ.30ರಂದು ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಪ್ರಭಾಕರ ಭಟ್ ಅವರಿಗೆ ನೋಟೀಸ್ ನೀಡಿದ್ದರು.
ಇದರ ಬೆನ್ನಲ್ಲೇ ಪುತ್ತೂರು ಸೆಶನ್ಸ್ ಕೋರ್ಟಿನಲ್ಲಿ ಮಧ್ಯಂತರ ಜಾಮೀನು ನೀಡುವಂತೆ ಪ್ರಭಾಕರ ಭಟ್ ಪರವಾಗಿ ಅಪೀಲು ಸಲ್ಲಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ, ಮುಂದಿನ ವಿಚಾರಣೆ ದಿನಾಂಕದ ವರೆಗೆ ಬಲವಂತದ ಕ್ರಮ ಬೇಡವೆಂದು ಹೇಳಿ ಅ.29ಕ್ಕೆ ಮುಂದೂಡಿದೆ. ಅಲ್ಲದೆ, ಪ್ರತಿವಾದಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿಗೆ ನೋಟಿಸ್ ಜಾರಿ ಮಾಡಿದೆ.
ಪ್ರಭಾಕರ ಭಟ್ ಅವರು ಪುತ್ತೂರಿನ ಉಪ್ಪಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಹಿಂದು- ಮುಸ್ಲಿಂ ದ್ವೇಷ ಹುಟ್ಟಿಸುವ ರೀತಿ ಮಾತನಾಡಿದ್ದಾರೆಂದು ಈಶ್ವರಿ ಪದ್ಮುಂಜ ಅವರು ಪುತ್ತೂರಿನಲ್ಲಿ ಪೊಲೀಸ್ ದೂರು ನೀಡಿದ್ದರು.
The Puttur Additional District and Sessions Court has directed that no coercive action be taken against senior RSS leader Kalladka Prabhakar Bhat until the next hearing in connection with a case registered against him for allegedly making derogatory remarks against Muslim women.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm