ಬ್ರೇಕಿಂಗ್ ನ್ಯೂಸ್
29-10-25 03:16 pm Mangalore Correspondent ಕರಾವಳಿ
ಮಂಗಳೂರು, ಅ.29 : ಸ್ಪೀಕರ್ ಪೀಠವನ್ನು ಭ್ರಷ್ಟಾಚಾರಕ್ಕೆ ಬಳಸಿಕೊಂಡು ಕಳಂಕ ತಂದಿದ್ದಾರೆ ಎಂಬ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ಭರತ್ ಶೆಟ್ಟಿ ಆರೋಪಕ್ಕೆ ಸ್ಪೀಕರ್ ಯು.ಟಿ. ಖಾದರ್ ಉತ್ತರ ನೀಡಲು ನಿರಾಕರಿಸಿದ್ದಾರೆ. ಎಲ್ಲಿಯೋ ಕುಳಿತು ಮಾತನಾಡಿದ್ದಕ್ಕೆಲ್ಲ ಉತ್ತರ ಕೊಡಲು ಆಗಲ್ಲ. ನಾಳೆ ನಾನು ಕಚೇರಿಯಲ್ಲಿ ಇರುತ್ತೇನೆ, ಲಿಖಿತವಾಗಿ ದೂರು ಕೊಡಲಿ, ಅಗತ್ಯ ಬಿದ್ದರೆ ತನಿಖೆ ಮಾಡಿಸುತ್ತೇನೆ ಎಂದು ಹೇಳಿದ್ದಾರೆ.
ಅಮೆರಿಕದಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಖಾದರ್, ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದರು. ಆರೋಪದ ವಿಚಾರವನ್ನು ಗಮನಿಸಿದ್ದೇನೆ. ಎಲ್ಲದಕ್ಕೂ ಮದ್ದಿದೆ. ಕೆಲವರ ಅಸೂಯೆಗೆ ಮದ್ದು ಇಲ್ಲ. ಹೊಸತಾಗಿ ಮನೆ ಕಟ್ಟುವಾಗ ದೃಷ್ಟಿ ಬೀಳಬಾರದೆಂದು ದೃಷ್ಟಿ ಬೊಂಬೆ ಕಟ್ಟುತ್ತಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕ ವಿಧಾನಸಭೆಗೆ ಗೌರವ ಸಿಗುವ ಸಂದರ್ಭ ಬಂದಿದೆ. ಇವರ ಆರೋಪ ನಮ್ಮ ವಿಧಾನಸಭೆಗೆ ದೃಷ್ಟಿ ಬೊಂಬೆ ಇದ್ದಂತೆ ಎಂದು ಕಟಕಿಯಾಡಿದರು.
ಶಾಸಕರಿಗೆ ಸವಲತ್ತು ಸೌಲಭ್ಯ ಒದಗಿಸುವುದು ನನ್ನ ಜವಾಬ್ದಾರಿ. ಆ ಕೆಲಸವನ್ನು ಮಾಡಿಸಿದ್ದೇನೆ. ಯಾರೋ ಮಾತನಾಡುತ್ತಾರೆಂದು ಅದಕ್ಕೆಲ್ಲ ಉತ್ತರ ಕೊಡುತ್ತ ಕೂರುವುದಕ್ಕೆ ಆಗುವುದಿಲ್ಲ. ಯಾರಿಗಾದ್ರೂ ಸಂಶಯ ಇದ್ದರೆ ಕಚೇರಿಗೆ ಬರಲಿ, ಸಂಶಯ ನಿವಾರಿಸುತ್ತೇನೆ. ನಾನು ಸಂವಿಧಾನ ಪೀಠದಲ್ಲಿ ಇದ್ದೇನೆ. ಹಾಗಾಗಿ ಯಾರದ್ದೋ ಮಾತಿಗೆಲ್ಲ ಉತ್ತರಿಸಲು ಆಗಲ್ಲ.
ಇವರಿಗೆ ಬೇಕಾಗಿಯೇ ನಾಳೆ ನನ್ನ ಕಚೇರಿಗೆ ಹೋಗುತ್ತೇನೆ. ಅವರು ಹೇಳಿರುವ ವಿಚಾರಗಳನ್ನು ಲಿಖಿತವಾಗಿ ಕೊಟ್ಟರೆ ಅದನ್ನು ಪರಿಶೀಲಿಸುತ್ತೇನೆ. ಏನೇ ಆರೋಪ ಇದ್ದರೂ ಬರೆದು ಕೊಡಲಿ. ಯಾರೋ ಪ್ರಶ್ನೆ ಮಾಡುತ್ತಾರೆಂದು ಉತ್ತರ ಕೊಡಲು ನಾನು ಅವರ ಜನ ಅಲ್ಲ. ಹಿಂದೆ ಮುಂದೆ ಗೊತ್ತಿಲ್ಲದೆ ಮಾತನಾಡಿದ್ದಕ್ಕೆಲ್ಲ ನಾನು ರಾಜಕೀಯ ವ್ಯಕ್ತಿಯಾಗಿದ್ದರೆ ಅದೇ ರೀತಿ ಉತ್ತರ ಕೊಡಬಹುದಿತ್ತು. ಈಗ ನಾನು ರಾಜಕೀಯ ವ್ಯಕ್ತಿಯಲ್ಲ.
ಸಾಂವಿಧಾನಿಕ ಹುದ್ದೆಯಲ್ಲಿದ್ದು ಏನು ಬೇಕಾದರೂ ಮಾತನಾಡಲು ಆಗುತ್ತದಾ.. ನಮ್ಮ ಶಾಸಕರಿಗೆ ಯಾವುದೆಲ್ಲ ಸೌಕರ್ಯ, ಸವಲತ್ತು ಕೊಡಬೇಕೋ ಅದನ್ನು ಕೊಡುವುದು ನನ್ನ ಕರ್ತವ್ಯ. ಇವರಿಗೆ ನನ್ನ ಬಗ್ಗೆ ಡ್ಯಾಮೇಜ್ ಮಾಡುವುದೇ ಉದ್ದೇಶ ಆಗಿದ್ದರೆ ಇಂಥ ಹೇಳಿಕೆಯನ್ನು ದಿನವೂ ಕೊಡುತ್ತ ಇರಲಿ. ನನಗೆ ಸಂತೋಷ ಇದೆ ಎಂದು ಹೇಳುತ್ತ ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ನಿರಾಕರಿಸಿದರು.
Karnataka Legislative Assembly Speaker U.T. Khader has refused to respond to corruption allegations made by former Speaker Vishweshwar Hegde Kageri and MLA Dr. Bharath Shetty, who accused him of misusing the Speaker’s office for personal gain during the renovation of the legislators’ quarters and the Speaker’s chamber.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm