ಬ್ರೇಕಿಂಗ್ ನ್ಯೂಸ್
29-10-25 03:16 pm Mangalore Correspondent ಕರಾವಳಿ
ಮಂಗಳೂರು, ಅ.29 : ಸ್ಪೀಕರ್ ಪೀಠವನ್ನು ಭ್ರಷ್ಟಾಚಾರಕ್ಕೆ ಬಳಸಿಕೊಂಡು ಕಳಂಕ ತಂದಿದ್ದಾರೆ ಎಂಬ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ಭರತ್ ಶೆಟ್ಟಿ ಆರೋಪಕ್ಕೆ ಸ್ಪೀಕರ್ ಯು.ಟಿ. ಖಾದರ್ ಉತ್ತರ ನೀಡಲು ನಿರಾಕರಿಸಿದ್ದಾರೆ. ಎಲ್ಲಿಯೋ ಕುಳಿತು ಮಾತನಾಡಿದ್ದಕ್ಕೆಲ್ಲ ಉತ್ತರ ಕೊಡಲು ಆಗಲ್ಲ. ನಾಳೆ ನಾನು ಕಚೇರಿಯಲ್ಲಿ ಇರುತ್ತೇನೆ, ಲಿಖಿತವಾಗಿ ದೂರು ಕೊಡಲಿ, ಅಗತ್ಯ ಬಿದ್ದರೆ ತನಿಖೆ ಮಾಡಿಸುತ್ತೇನೆ ಎಂದು ಹೇಳಿದ್ದಾರೆ.
ಅಮೆರಿಕದಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಖಾದರ್, ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದರು. ಆರೋಪದ ವಿಚಾರವನ್ನು ಗಮನಿಸಿದ್ದೇನೆ. ಎಲ್ಲದಕ್ಕೂ ಮದ್ದಿದೆ. ಕೆಲವರ ಅಸೂಯೆಗೆ ಮದ್ದು ಇಲ್ಲ. ಹೊಸತಾಗಿ ಮನೆ ಕಟ್ಟುವಾಗ ದೃಷ್ಟಿ ಬೀಳಬಾರದೆಂದು ದೃಷ್ಟಿ ಬೊಂಬೆ ಕಟ್ಟುತ್ತಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕ ವಿಧಾನಸಭೆಗೆ ಗೌರವ ಸಿಗುವ ಸಂದರ್ಭ ಬಂದಿದೆ. ಇವರ ಆರೋಪ ನಮ್ಮ ವಿಧಾನಸಭೆಗೆ ದೃಷ್ಟಿ ಬೊಂಬೆ ಇದ್ದಂತೆ ಎಂದು ಕಟಕಿಯಾಡಿದರು.
ಶಾಸಕರಿಗೆ ಸವಲತ್ತು ಸೌಲಭ್ಯ ಒದಗಿಸುವುದು ನನ್ನ ಜವಾಬ್ದಾರಿ. ಆ ಕೆಲಸವನ್ನು ಮಾಡಿಸಿದ್ದೇನೆ. ಯಾರೋ ಮಾತನಾಡುತ್ತಾರೆಂದು ಅದಕ್ಕೆಲ್ಲ ಉತ್ತರ ಕೊಡುತ್ತ ಕೂರುವುದಕ್ಕೆ ಆಗುವುದಿಲ್ಲ. ಯಾರಿಗಾದ್ರೂ ಸಂಶಯ ಇದ್ದರೆ ಕಚೇರಿಗೆ ಬರಲಿ, ಸಂಶಯ ನಿವಾರಿಸುತ್ತೇನೆ. ನಾನು ಸಂವಿಧಾನ ಪೀಠದಲ್ಲಿ ಇದ್ದೇನೆ. ಹಾಗಾಗಿ ಯಾರದ್ದೋ ಮಾತಿಗೆಲ್ಲ ಉತ್ತರಿಸಲು ಆಗಲ್ಲ.
ಇವರಿಗೆ ಬೇಕಾಗಿಯೇ ನಾಳೆ ನನ್ನ ಕಚೇರಿಗೆ ಹೋಗುತ್ತೇನೆ. ಅವರು ಹೇಳಿರುವ ವಿಚಾರಗಳನ್ನು ಲಿಖಿತವಾಗಿ ಕೊಟ್ಟರೆ ಅದನ್ನು ಪರಿಶೀಲಿಸುತ್ತೇನೆ. ಏನೇ ಆರೋಪ ಇದ್ದರೂ ಬರೆದು ಕೊಡಲಿ. ಯಾರೋ ಪ್ರಶ್ನೆ ಮಾಡುತ್ತಾರೆಂದು ಉತ್ತರ ಕೊಡಲು ನಾನು ಅವರ ಜನ ಅಲ್ಲ. ಹಿಂದೆ ಮುಂದೆ ಗೊತ್ತಿಲ್ಲದೆ ಮಾತನಾಡಿದ್ದಕ್ಕೆಲ್ಲ ನಾನು ರಾಜಕೀಯ ವ್ಯಕ್ತಿಯಾಗಿದ್ದರೆ ಅದೇ ರೀತಿ ಉತ್ತರ ಕೊಡಬಹುದಿತ್ತು. ಈಗ ನಾನು ರಾಜಕೀಯ ವ್ಯಕ್ತಿಯಲ್ಲ.
ಸಾಂವಿಧಾನಿಕ ಹುದ್ದೆಯಲ್ಲಿದ್ದು ಏನು ಬೇಕಾದರೂ ಮಾತನಾಡಲು ಆಗುತ್ತದಾ.. ನಮ್ಮ ಶಾಸಕರಿಗೆ ಯಾವುದೆಲ್ಲ ಸೌಕರ್ಯ, ಸವಲತ್ತು ಕೊಡಬೇಕೋ ಅದನ್ನು ಕೊಡುವುದು ನನ್ನ ಕರ್ತವ್ಯ. ಇವರಿಗೆ ನನ್ನ ಬಗ್ಗೆ ಡ್ಯಾಮೇಜ್ ಮಾಡುವುದೇ ಉದ್ದೇಶ ಆಗಿದ್ದರೆ ಇಂಥ ಹೇಳಿಕೆಯನ್ನು ದಿನವೂ ಕೊಡುತ್ತ ಇರಲಿ. ನನಗೆ ಸಂತೋಷ ಇದೆ ಎಂದು ಹೇಳುತ್ತ ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ನಿರಾಕರಿಸಿದರು.
Karnataka Legislative Assembly Speaker U.T. Khader has refused to respond to corruption allegations made by former Speaker Vishweshwar Hegde Kageri and MLA Dr. Bharath Shetty, who accused him of misusing the Speaker’s office for personal gain during the renovation of the legislators’ quarters and the Speaker’s chamber.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm