ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ ಮೋದಿ ; ಪುತ್ತಿಗೆ ಸ್ವಾಮೀಜಿ ಆಹ್ವಾನಕ್ಕೆ ಒಪ್ಪಿಗೆ 

30-10-25 11:28 am       Udupi Correspondent   ಕರಾವಳಿ

ಪ್ರಧಾನಿ ನರೇಂದ್ರ ಮೋದಿ ಇದೇ ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ.

ಉಡುಪಿ, ಅ.30 : ಪ್ರಧಾನಿ ನರೇಂದ್ರ ಮೋದಿ ಇದೇ ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ.

ಪುತ್ತಿಗೆ ಶ್ರೀಪಾದರ ಚತುರ್ಥ ಪರ್ಯಾಯ ಅಂಗವಾಗಿ ಹಮ್ಮಿಕೊಂಡಿರುವ ಬೃಹತ್ ಗೀತೋತ್ಸವ ಸಂದರ್ಭದಲ್ಲಿ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಉಡುಪಿಗೆ ಭೇಟಿ ನೀಡಲಿದ್ದಾರೆ. 

ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಗೀತಾ ಪ್ರಚಾರ ಕಾರ್ಯ ಪ್ರಶಂಸಿಸಿದ್ದ ಪ್ರಧಾನಿ ಮೋದಿ, ಶ್ರೀಗಳು ಸಂಕಲ್ಪಿಸಿರುವ ಕೋಟಿ ಗೀತಾ ಲೇಖನ ಯಜ್ಞ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಶ್ರೀಗಳಿಗೆ ಅಭಿನಂದನ ಪತ್ರ ರವಾನಿಸಿದ್ದರು. ಈ ಸಂದರ್ಭ ಪುತ್ತಿಗೆ ಶ್ರೀಗಳು ತಮ್ಮ ಪರ್ಯಾಯ ಅವಧಿಯಲ್ಲಿ ಕೃಷ್ಣ ಮಠಕ್ಕೆ ಆಗಮಿಸುವಂತೆ ಆಹ್ವಾನ ನೀಡಿದ್ದರು.

ಈ ಹಿಂದೆ ಪುತ್ತಿಗೆ ಶ್ರೀಪಾದರ ತೃತೀಯ ಪರ್ಯಾಯ ಸಂದರ್ಭದಲ್ಲಿ ಪ್ರಧಾನಿ ಮೋದಿ ಶ್ರೀಕೃಷ್ಣ ಮಠಕ್ಕೆ ಆಗಮಿಸಿದ್ದನ್ನು ಇಲ್ಲಿ ಸ್ಮರಿಸಬಹುದು. ಆಗ ಅವರು ಗುಜರಾತ್ ಮುಖ್ಯಮಂತ್ರಿಯಾಗಿದ್ದರು.

Prime Minister Narendra Modi is scheduled to visit the Udupi Sri Krishna Math on November 28.  The visit comes in response to an invitation extended by Puthige Seer Sri Sugunendra Theertha Swamiji, who is currently observing his fourth Paryaya (two-year term of managing the temple). The Prime Minister will attend the grand “Geetotsava” being organized as part of the Paryaya celebrations.