ಬ್ರೇಕಿಂಗ್ ನ್ಯೂಸ್
30-10-25 08:06 pm Mangalore Correspondent ಕರಾವಳಿ
ಮಂಗಳೂರು, ಅ.30 : ಧರ್ಮಸ್ಥಳದಲ್ಲಿ ಶವ ಹೂತಿದ್ದಾರೆಂಬ ಪ್ರಕರಣಕ್ಕೆ ಸಂಬಂಧಿಸಿ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ತಂಡಕ್ಕೆ ಎಸ್ಐಟಿ ಮತ್ತೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದೆ. ವಿಠಲ ಗೌಡ ಅವರಿಗೆ 31ಕ್ಕೆ, ಉಳಿದಂತೆ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್ ಹಾಗೂ ಜಯಂತ್ ಟಿ ಅವರಿಗೆ ನವೆಂಬರ್ 3ರಂದು ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ.
ಮಟ್ಟೆಣ್ಣನವರ್ ಮತ್ತು ಜಯಂತ್ ಅವರ ಬೆಂಗಳೂರು ಹಾಗೂ ಬೆಳ್ತಂಗಡಿಯಲ್ಲಿರುವ ಮನೆಗಳಿಗೆ ಖುದ್ದು ತೆರಳಿ ನೋಟಿಸ್ ನೀಡಲಾಗಿದೆ. ವಾಟ್ಸಾಪ್, ಮೈಲ್ ಮೂಲಕ ನೋಟಿಸ್ ಕೊಡುತ್ತಾರೆ, ಇದನ್ನೆಲ್ಲಾ ರದ್ದು ಮಾಡಬೇಕೆಂದು ತಿಮರೋಡಿ ಗ್ಯಾಂಗ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ ಬೆನ್ನಲ್ಲೇ ಮನೆಗೇ ತೆರಳಿ ನೋಟಿಸ್ ನೀಡಲಾಗಿದೆ. ನೋಟಿಸಿನಲ್ಲಿ ಬೆಳ್ತಂಗಡಿ ಎಸ್ಐಟಿ ಕಚೇರಿಗೆ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ.
ಮೊದಲ ನೋಟಿಸ್ಗೆ ನಾಲ್ವರು ಗೈರಾದ ಕಾರಣ, ಪೊಲೀಸ್ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ. ಮೊನ್ನೆ ಸುಜಾತ ಭಟ್ ಮಾತ್ರ ವಿಚಾರಣೆಗೆ ಹಾಜರಾಗಿದ್ದರು. ಬೆಂಗಳೂರಿನ ಸಹಕಾರ ನಗರದಲ್ಲಿರುವ ಗಿರೀಶ್ ಮಟ್ಟಣ್ಣವರ್, ಬೆಂಗಳೂರು ಹಾಗೂ ಮಂಗಳೂರಿನಲ್ಲಿರುವ ಜಯಂತ್ ಟಿ ನಿವಾಸ, ಧರ್ಮಸ್ಥಳದ ವಿಠಲ ಗೌಡ ನಿವಾಸ ಹಾಗೂ ಉಜಿರೆ ಬಳಿಯ ತಿಮರೋಡಿಯ ಮಹೇಶ್ ಶೆಟ್ಟಿ ಅವರ ಮನೆಗೆ ತೆರಳಿ, ಮನೆಯಲ್ಲಿ ಇಲ್ಲದ ಕಾರಣ ಗೋಡೆಗೆ ಅಂಟಿಸಿ ತೆರಳಿದ್ದಾರೆ.
ನೊಟಿಸ್ ನಲ್ಲಿ ವಿಠಲ ಗೌಡರಿಗೆ ಅ.31 ರಂದೇ ವಿಚಾರಣೆಗೆ ಹಾಜರಾಗಲು ಷರತ್ತು ಹಾಕಲಾಗಿದೆ. ಕಳೆದ ಸೋಮವಾರ ಐವರಿಗೂ ಒಂದೇ ದಿನ ಹಾಜರಾಗುವಂತೆ ಹೇಳಲಾಗಿತ್ತು. ಆಗ ವಕೀಲರ ಮೂಲಕ ಕಾಲಾವಕಾಶ ಕೇಳಿದ್ದರು. ಆದರೆ ಈ ನಡುವೆ, ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿ ನೋಟಿಸ್ ರದ್ದು ಮಾಡುವಂತೆ ಮತ್ತು ತಮ್ಮ ಮೇಲಿನ ಪ್ರಕರಣ ರದ್ದುಪಡಿಸುವಂತೆ ಅರ್ಜಿ ಸಲ್ಲಿಸಿದ್ದಾರೆ. ಇದರ ನಡುವೆ ಮತ್ತೆ ಎಸ್ಐಟಿ 39/2025 ಕೇಸ್ ನಡಿ ವಿಚಾರಣೆಗೆ ಬರಲು ಎರಡನೇ ನೋಟಿಸ್ ನೀಡಿದೆ. ಈ ನೋಟಿಸ್ ತಪ್ಪಿಸಿದರೆ ವಶಕ್ಕೆ ಪಡೆದು ಕರೆತರುವ ಸಾಧ್ಯತೆಯಿದೆ.
In the case related to the alleged burial of a body in Dharmasthala, the Special Investigation Team (SIT) has once again issued summons to Mahesh Shetty Timarodi and his associates to appear for questioning.
30-10-25 11:00 pm
Bangalore Correspondent
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
30-10-25 11:16 pm
Mangalore Correspondent
ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm