ಬ್ರೇಕಿಂಗ್ ನ್ಯೂಸ್
30-10-25 08:06 pm Mangalore Correspondent ಕರಾವಳಿ
ಮಂಗಳೂರು, ಅ.30 : ಧರ್ಮಸ್ಥಳದಲ್ಲಿ ಶವ ಹೂತಿದ್ದಾರೆಂಬ ಪ್ರಕರಣಕ್ಕೆ ಸಂಬಂಧಿಸಿ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ತಂಡಕ್ಕೆ ಎಸ್ಐಟಿ ಮತ್ತೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದೆ. ವಿಠಲ ಗೌಡ ಅವರಿಗೆ 31ಕ್ಕೆ, ಉಳಿದಂತೆ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್ ಹಾಗೂ ಜಯಂತ್ ಟಿ ಅವರಿಗೆ ನವೆಂಬರ್ 3ರಂದು ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ.
ಮಟ್ಟೆಣ್ಣನವರ್ ಮತ್ತು ಜಯಂತ್ ಅವರ ಬೆಂಗಳೂರು ಹಾಗೂ ಬೆಳ್ತಂಗಡಿಯಲ್ಲಿರುವ ಮನೆಗಳಿಗೆ ಖುದ್ದು ತೆರಳಿ ನೋಟಿಸ್ ನೀಡಲಾಗಿದೆ. ವಾಟ್ಸಾಪ್, ಮೈಲ್ ಮೂಲಕ ನೋಟಿಸ್ ಕೊಡುತ್ತಾರೆ, ಇದನ್ನೆಲ್ಲಾ ರದ್ದು ಮಾಡಬೇಕೆಂದು ತಿಮರೋಡಿ ಗ್ಯಾಂಗ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ ಬೆನ್ನಲ್ಲೇ ಮನೆಗೇ ತೆರಳಿ ನೋಟಿಸ್ ನೀಡಲಾಗಿದೆ. ನೋಟಿಸಿನಲ್ಲಿ ಬೆಳ್ತಂಗಡಿ ಎಸ್ಐಟಿ ಕಚೇರಿಗೆ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ.
ಮೊದಲ ನೋಟಿಸ್ಗೆ ನಾಲ್ವರು ಗೈರಾದ ಕಾರಣ, ಪೊಲೀಸ್ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ. ಮೊನ್ನೆ ಸುಜಾತ ಭಟ್ ಮಾತ್ರ ವಿಚಾರಣೆಗೆ ಹಾಜರಾಗಿದ್ದರು. ಬೆಂಗಳೂರಿನ ಸಹಕಾರ ನಗರದಲ್ಲಿರುವ ಗಿರೀಶ್ ಮಟ್ಟಣ್ಣವರ್, ಬೆಂಗಳೂರು ಹಾಗೂ ಮಂಗಳೂರಿನಲ್ಲಿರುವ ಜಯಂತ್ ಟಿ ನಿವಾಸ, ಧರ್ಮಸ್ಥಳದ ವಿಠಲ ಗೌಡ ನಿವಾಸ ಹಾಗೂ ಉಜಿರೆ ಬಳಿಯ ತಿಮರೋಡಿಯ ಮಹೇಶ್ ಶೆಟ್ಟಿ ಅವರ ಮನೆಗೆ ತೆರಳಿ, ಮನೆಯಲ್ಲಿ ಇಲ್ಲದ ಕಾರಣ ಗೋಡೆಗೆ ಅಂಟಿಸಿ ತೆರಳಿದ್ದಾರೆ.
ನೊಟಿಸ್ ನಲ್ಲಿ ವಿಠಲ ಗೌಡರಿಗೆ ಅ.31 ರಂದೇ ವಿಚಾರಣೆಗೆ ಹಾಜರಾಗಲು ಷರತ್ತು ಹಾಕಲಾಗಿದೆ. ಕಳೆದ ಸೋಮವಾರ ಐವರಿಗೂ ಒಂದೇ ದಿನ ಹಾಜರಾಗುವಂತೆ ಹೇಳಲಾಗಿತ್ತು. ಆಗ ವಕೀಲರ ಮೂಲಕ ಕಾಲಾವಕಾಶ ಕೇಳಿದ್ದರು. ಆದರೆ ಈ ನಡುವೆ, ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿ ನೋಟಿಸ್ ರದ್ದು ಮಾಡುವಂತೆ ಮತ್ತು ತಮ್ಮ ಮೇಲಿನ ಪ್ರಕರಣ ರದ್ದುಪಡಿಸುವಂತೆ ಅರ್ಜಿ ಸಲ್ಲಿಸಿದ್ದಾರೆ. ಇದರ ನಡುವೆ ಮತ್ತೆ ಎಸ್ಐಟಿ 39/2025 ಕೇಸ್ ನಡಿ ವಿಚಾರಣೆಗೆ ಬರಲು ಎರಡನೇ ನೋಟಿಸ್ ನೀಡಿದೆ. ಈ ನೋಟಿಸ್ ತಪ್ಪಿಸಿದರೆ ವಶಕ್ಕೆ ಪಡೆದು ಕರೆತರುವ ಸಾಧ್ಯತೆಯಿದೆ.
In the case related to the alleged burial of a body in Dharmasthala, the Special Investigation Team (SIT) has once again issued summons to Mahesh Shetty Timarodi and his associates to appear for questioning.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm