ಬ್ರೇಕಿಂಗ್ ನ್ಯೂಸ್
02-11-25 06:57 pm Mangalore Correspondent ಕರಾವಳಿ
ಮಂಗಳೂರು, ನ.2 : ನಗರದ ನ್ಯೂ ಉರ್ವ ಇಂಡೋರ್ ಸ್ಟೇಡಿಯಂ ನಲ್ಲಿ ನಡೆದ ಯೋನೆಕ್ಸ್ - ಸನ್ ರೈಸ್ ಚೀಫ್ ಮಿನಿಸ್ಟರ್ಸ್ ಮಂಗಳೂರು ಇಂಡಿಯಾ ಇಂಟರ್ ನ್ಯಾಷನಲ್ ಚಾಲೆಂಜ್ 2025 ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಮೂರು ವಿಭಾಗದಲ್ಲಿ ಭಾರತಕ್ಕೆ ಸ್ವರ್ಣ ಸಿಕ್ಕಿದೆ.
ಮಹಿಳೆಯರ ಡಬಲ್ಸ್ ಪಂದ್ಯದಲ್ಲಿ 5ನೇ ಶ್ರೇಯಾಂಕದ ಥಾಯ್ಲೆಂಡಿನ ಆಟಗಾರರಾದ ಹತಾಯ್ತಿಪ್ ಮಿಜದ್ ಮತ್ತು ನಪಪಕೊರ್ನ್ ತುಂಗ್ಕಸತಾನ್ ಜೋಡಿ ಭಾರತದ ಶ್ರೀನಿಧಿ ನಾರಾಯಣನ್ ಮತ್ತು ರೆಶಿಕಾ ಉತಯಸೂರ್ಯನ್ ಜೋಡಿಯನ್ನು 21-7, 21-11 ಸೆಟ್ಗಳಿಂದ ಪರಾಭವಗೊಳಿಸಿ ಚಾಂಪಿಯನ್ ಪಟ್ಟಕ್ಕೇರಿತು. ಭಾರತದ ಜೋಡಿ ರನ್ನರ್ ಅಪ್ ಪಡೆಯಿತು.






ಮಹಿಳೆಯರ ಸಿಂಗಲ್ಸ್ ಪಂದ್ಯಾಟದಲ್ಲಿ 3ನೇ ಶ್ರೇಯಾಂಕದ ಭಾರತದ ಮಾನ್ಸಿ ಸಿಂಗ್ ಅವರು ಚಾಂಪಿಯನ್ ಆದರು. ಅವರ ಎದುರಾಳಿ ಆಟಗಾರ್ತಿ 4ನೇ ಶ್ರೇಯಾಂಕದ ಭಾರತದ ಅಶ್ಮಿತಾ ಚಲಿಹಾ ರನ್ನರ್ ಅಪ್ ಆಗಿ ಮಾನ್ಯತೆ ಪಡೆದರು. ಇವರ ಸ್ಕೋರ್ ವಿವರ: 21-17, 22-20. ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಅಸೋಸಿಯೇಶನ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಮತ್ತು ಕಾರ್ಯದರ್ಶಿ ಸುಪ್ರೀತ್ ಆಳ್ವ ವಿಜೇತರಿಗೆ ಪದಕ ಹಾಗೂ ಸ್ಮರಣಿಕೆ ನೀಡಿ ಗೌರವಿಸಿದರು.
ಪುರುಷರ ಸಿಂಗಲ್ಸ್ ಪಂದ್ಯದಲ್ಲಿ ಮತ್ತೆ ಭಾರತದ್ದೇ ಜೋಡಿ ಮುಖಾಮುಖಿಯಾದರು. ಅಗ್ರ ಶ್ರೇಯಾಂಕದ ರಿತ್ವಿಕ್ ಸಂಜೀವ್ ಸತೀಶ್ ಕುಮಾರ್ ಚಾಂಪಿಯನ್ ಪಟ್ಟ ಗಳಿಸಿದರು. ಎದುರಾಳಿ ಆಟಗಾರ ರೌನಕ್
ಚೌಹಾಣ್ ರನ್ನರ್ ಅಪ್ ಸ್ಥಾನ ಪಡೆದರು. ಇವರ ಸ್ಕೋರ್ ವಿವರ: 14-21, 21-19, 21-19. ಇವರಿಗೆ ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಪದಕ ಹಾಗೂ ಸ್ಮರಣಿಕೆ ನೀಡಿ ಗೌರವಿಸಿದರು.
ಮಿಕ್ಸೆಡ್ ಡಬಲ್ಸ್ನಲ್ಲಿ ಭಾರತದ ಎರಡನೇ ಶ್ರೇಯಾಂಕದ ಧ್ರುವ ರಾವತ್ ಮತ್ತು ಮನೀಷಾ ಕೆ ಜೋಡಿಯು 18-21, 21-18 ಮತ್ತು 22-20 ಸೆಟ್ಗಳಿಂದ ಎದುರಾಳಿ ಥಾಯ್ಲೆಂಡಿನ ತನಾವಿನ್ ಮ್ಯಾದೀ ಮತ್ತು ನಪಪಕೊರ್ನ್ ತುಂಗ್ಕಸತಾನ್ ಜೋಡಿಯನ್ನು ಮಣಿಸಿ ಚಾಂಪಿಯನ್ ಪಟ್ಟ ಗಳಿಸಿತು. ಈ ಪಂದ್ಯ ಕೊನೆಯ ವರೆಗೂ ರೋಚಕತೆಯನ್ನು ಕಾಯ್ದುಕೊಂಡು ಪ್ರೇಕ್ಷಕರ ಮೆಚ್ಚುಗೆ ಗಳಿಸಿತು. ಇವರಿಗೆ ಮಂಗಳೂರು ದಕ್ಷಿಣದ ಶಾಸಕ ಡಿ. ವೇದವ್ಯಾಸ ಕಾಮತ್ ಪದಕ ಹಾಗೂ ಸ್ಮರಣಿಕೆ ನಿಡಿ ಗೌರವಿಸಿದರು.
ಪುರುಷರ ಡಬಲ್ಸ್ ನಲ್ಲಿ ಸಿಂಗಾಪುರದ ಎರಡು ತಂಡಗಳು ಮುಖಾಮುಖಿಯಾದವು. ಎಂಗ್ ಕೀಟ್ ವೆಸ್ಲಿ ಕೊಹ್ ಮತ್ತು ಅಗ್ರ ಶ್ರೇಯಾಂಕದ ಜುನ್ಸ್ಯುಕೆ ಕುಬೊ ಜೋಡಿಯು ಎದುರಾಳಿ 8ನೇ ಶ್ರೇಯಾಂಕದ ಡೊನೊವನ್ ವಿಲಾರ್ಡ್ ವೀ ಮತ್ತು ಜಿಯಾ ಹವೊ ಹೊವಿನ್ ವೊಂಗ್ ಜೋಡಿಯನ್ನು 21-12, 21-17 ಅಂಕಗಳಿಂದ ಮಣಿಸಿ ಚಾಂಪಿಯನ್ ಆಗಿ ಹೊರಹೊಮ್ಮಿತು. ಇವರಿಗೆ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಪದಕ, ಸ್ಮರಣಿಕೆಗಳನ್ನು ನೀಡಿ ಗೌರವಿಸಿದರು.
The Yonex–Sunrise Chief Minister’s Mangaluru India International Challenge 2025 badminton tournament concluded at the New Urwa Indoor Stadium, with India bagging three gold medals across categories.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm