ಬ್ರೇಕಿಂಗ್ ನ್ಯೂಸ್
03-11-25 12:37 pm Mangalore Correspondent ಕರಾವಳಿ
ಮಂಗಳೂರು, ನ.3 : ಬೆಂಗಳೂರಿನ ಕುಂಬಳಗೋಡಿನ ಖಾಸಗಿ ಇಂಜಿನಿಯರಿಂಗ್ ಕಾಲೇಜಿನ 2ನೇ ವರ್ಷದ ವಿದ್ಯಾರ್ಥಿಯೊಬ್ಬರು ಭಾನುವಾರ ಸಸಿಹಿತ್ಲು ಬೀಚ್ ಬಳಿಯ ನಂದಿನಿ ನದಿ ಅಳಿವೆಯಲ್ಲಿ ಈಜಾಡಲು ಹೋಗಿ ನೀರುಪಾಲಾಗಿದ್ದಾರೆ.
ಬೆಂಗಳೂರು ಗಿರಿನಗರ 80 ಅಡ್ಡ ರಸ್ತೆ ನಿವಾಸಿ ಪ್ರಸನ್ನ ಸಿ.ಎಲ್. ಎಂಬವರ ಪುತ್ರ ಪ್ರಣವ್ ಚಂದ್ರ (24) ನೀರುಪಾಲಾದ ವಿದ್ಯಾರ್ಥಿ. ಒಟ್ಟು ಏಳು ಮಂದಿ ಗೆಳೆಯರು ಶುಕ್ರವಾರ ಮಂಗಳೂರಿಗೆ ಬಂದಿದ್ದು ಎಲ್ಲರೂ ಹೈಸ್ಕೂಲ್, ಪಿಯು ಕಾಲೇಜಿನ ಸಹಪಾಠಿಗಳಾಗಿದ್ದು ಬೇರೆ ಬೇರೆ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಾಗಿದ್ದರು ಎನ್ನಲಾಗಿದೆ.
ಮಂಗಳೂರಿಗೆ ಬಂದ ಬಳಿಕ ಶುಕ್ರವಾರ ರೂಮ್ನಲ್ಲಿ ತಂಗಿದ್ದು, ಬಳಿಕ ಪ್ರವಾಸಿ ತಾಣಗಳಿಗೆ ತೆರಳಿದ್ದರು. ಭಾನುವಾರ ಸಸಿಹಿತ್ಲು ಬೀಚ್ ಬಳಿಯ ನಂದಿನಿ ನದಿ ಅಳಿವೆಗೆ ಆಗಮಿಸಿ ನೀರಾಟದಲ್ಲಿ ತೊಡಗಿದ್ದ ಸಂದರ್ಭ ಈ ದುರಂತ ಸಂಭವಿಸಿದೆ. ಇವರು ಸಮುದ್ರಕ್ಕೆ ಇಳಿದ ಸ್ಥಳದ ಬಳಿ ನಂದಿನಿ ನದಿ ಅಳಿವೆ ಹೆಜಮಾಡಿ ನೂತನ ಬಂದರಿನ ಬ್ರೇಕ್ವಾಟರ್ ಇದೆ. ಈ ಪ್ರದೇಶದಲ್ಲಿ ಸಮುದ್ರಕ್ಕೆ ಇಳಿಯದಂತೆ ಬೀಚ್ನ ಗೃಹರಕ್ಷಕ ದಳ ಸಿಬ್ಬಂದಿ, ಲೈಫ್ ಗಾರ್ಡ್ ಗಳು ಎಚ್ಚರಿಕೆ ನೀಡಿದ್ದರೂ ಅವರ ಮಾತು ಕೇಳದೆ ದೂರದ ಸ್ಥಳಕ್ಕೆ ಬಂದು ಅಪಾಯಕಾರಿ ಅಳಿವೆ ಜಾಗದಲ್ಲಿ ಇಳಿದಿದ್ದರು. ಅಲೆಗಳಿಗೆ ಸಿಲುಕಿದ್ದ ಪ್ರಣವ್ ಮೊದಲಿಗೆ ಬಂಡೆ ಕಲ್ಲು ಹಿಡಿದುಕೊಂಡು ಪಾರಾಗಲು ಯತ್ನಿಸಿದ್ದರು. ಆದರೆ ಬಂಡೆಯಿಂದ ದೂರವಿದ್ದ ಈ ಸ್ಥಳಕ್ಕೆ ಉಳಿದವರು ಧಾವಿಸಿ ರಕ್ಷಿಸಲು ಯತ್ನಿಸುವಷ್ಟರಲ್ಲಿ ಅವರು ನೀರುಪಾಲಾಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕರಾವಳಿ ರಕ್ಷಣಾ ಪಡೆ ಸಿಬ್ಬಂದಿ, ಸ್ಥಳೀಯರು ಶೋಧ ಕಾರ್ಯ ನಡೆಸಿದ್ದಾರೆ. ಕುಟುಂಬಸ್ಥರು ರಾತ್ರಿ ವೇಳೆ ಸಸಿಹಿತ್ಲು ಕಿನಾರೆ ಬಳಿ ಆಗಮಿಸಿದ್ದಾರೆ.
ಬ್ರೇಕ್ ವಾಟರ್ ಅಪಾಯಕಾರಿ ಸ್ಥಳ
ಅಳಿವೆ ಪಕ್ಕದ ಬ್ರೇಕ್ ವಾಟರ್ ನೂತನ ಹೆಜಮಾಡಿ ಬಂದರಿಗೆ ಸೇರಿದ್ದು ಇದರ ಮೇಲೆ ಯಾರೂ ಹೊಗದಂತೆ ತಡೆಬೇಲಿಯಾಗಲಿ, ಎಚ್ಚರಿಕೆ ಫಲಕವಾಗಲೀ ಇಲ್ಲ. ಮಾತು ಕೇಳದೆ ಯುವಕರು ಬೈಕ್ ನಲ್ಲಿ ಹೋಗುತ್ತಾರೆ. ಗಾಳ ಹಾಕುವವರೂ ಹೋಗುತ್ತಾರೆ ಎನ್ನುತ್ತಾರೆ ಸ್ಥಳೀಯರು.
A 24-year-old engineering student from Bengaluru drowned while swimming near the estuary of the Nandini River at Sasihithlu Beach on Sunday. The deceased has been identified as Pranav Chandra (24), son of Prasanna C.L., a resident of Girinagar 80th Cross, Bengaluru, and a second-year student at a private engineering college in Kumbalgodu.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm