ಬ್ರೇಕಿಂಗ್ ನ್ಯೂಸ್
05-11-25 07:49 pm Mangalore Correspondent ಕರಾವಳಿ
ಮಂಗಳೂರು, ನ.5 : ಸಂಶೋಧಕಿ ಡಾ.ಇಂದಿರಾ ಹೆಗ್ಗಡೆ ಅವರು ತನ್ನ ಜಾನಪದೀಯ ಸಂಶೋಧನೆಯ ಕ್ಷೇತ್ರ ಕಾರ್ಯದ ಅನುಭವಗಳನ್ನು ದಾಖಲಿಸುವ ಮೂಲಕ ಸಂಶೋಧನಾ ಕ್ಷೇತ್ರಕ್ಕೆ ಬರುವವರಿಗೆ ಬಹುದೊಡ್ಡ ಮಾರ್ಗದರ್ಶಿ ಕೊಡುಗೆಯನ್ನು ನೀಡಿದ್ದಾರೆ, ತುಳುವಿನಲ್ಲಿ ಇದೊಂದು ಮಹತ್ವದ ಕೃತಿಯಾಗಲಿದೆ ಎಂದು ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ.ಆಶಾಲತಾ ಸುವರ್ಣ ಹೇಳಿದರು.
ತುಳು ಭವನದಲ್ಲಿ ಬುಧವಾರ ಆಯೋಜಿಸಲಾಗಿದ್ದ ಡಾ.ಇಂದಿರಾ ಹೆಗ್ಗಡೆ ಅವರ ‘ಬಾರಗೆರೆ ಬರಂಬು ತುಳುವೆರೆ ಪುಂಚ ನಾಡೊಂದು’ ತುಳು ಕೃತಿಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಜಾನಪದೀಯ ಅಧ್ಯಯನ ಕ್ಷೇತ್ರ ಕಾರ್ಯಗಳ ಸಂದರ್ಭದಲ್ಲಿ ಮಹಿಳೆಯರು ಸಾಕಷ್ಟು ಎಡರು ತೊಡಕುಗಳನ್ನು ಎದುರಿಸುವ ಸಂದರ್ಭ ಉಂಟಾಗುತ್ತಿತ್ತು. ಈ ಎಲ್ಲಾ ಸವಾಲುಗಳನ್ನು ಧೈರ್ಯದಿಂದ ಎದುರಿಸಿ ಮುನ್ನಡೆದು ಡಾ.ಇಂದಿರಾ ಹೆಗ್ಗಡೆ ಅವರು ಹಲವು ಮಹತ್ವದ ಕೃತಿಗಳನ್ನು ನೀಡಿರುವುದು ಪ್ರಶಂಸನೀಯ ಎಂದು ಡಾ.ಆಶಾಲತಾ ಸುವರ್ಣ ಅಭಿಪ್ರಾಯಪಟ್ಟರು.
ಲೇಖಕಿ ಡಾ.ಇಂದಿರಾ ಹೆಗ್ಗಡೆ ಮಾತನಾಡಿ, ತಾನು ಕನ್ನಡದಲ್ಲಿ ಹಲವು ಕೃತಿಗಳನ್ನು ಬರೆದರೂ ತುಳುವಿನಲ್ಲಿ ಬರೆದ ‘ಬಾರಗೆರೆ ಬರಂಬು ತುಳುವೆರೆ ಪುಂಚ ನಾಡೊಂದು’ ಕೃತಿ ನನಗೆ ಹೃದಯಕ್ಕೆ ಹಾಗೂ ಮನಸ್ಸಿಗೆ ತುಂಬಾ ಆಪ್ತವಾಯಿತು, ತುಳುವಿನಲ್ಲಿ ಬರೆಯುವುದು ತುಂಬಾ ಆಪ್ತವಾದ ವಿಚಾರ ಎಂದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಡಾ.ಸಮೀರ್ ಮಾಡ, ಹಿರಿಯ ಲೇಖಕಿ ಪ್ರೇಮಾ ಅಜ್ರಿ ಕಾರ್ಕಳ, ಚೇಳೈರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಡಾ.ಜ್ಯೋತಿ ಚೇಳೈರು, ನಿವೃತ್ತ ಪ್ರಾಂಶುಪಾಲ ಕೃಷ್ಣಮೂರ್ತಿ ಪಿ. ಅವರು ಕೃತಿಯ ಬಗ್ಗೆ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಮಾತನಾಡಿ, ತುಳುವಿನಲ್ಲಿ ಹೊಸದಾಗಿ ಸಂಶೋಧನೆ ಮಾಡಲು ಹೊರಟವರಲ್ಲಿ ಕ್ಷೇತ್ರ ಕಾರ್ಯದ ಅನುಭವದ ಕೊರತೆ ಇದೆ, ತಳಸ್ಪರ್ಶಿಯಾದ ಕ್ಷೇತ್ರ ಅಧ್ಯಯನದ ಮೂಲಕ ಸಂಶೋಧನೆ ನಡೆಸುವುದಕ್ಕೆ ಇಂದಿರಾ ಹೆಗ್ಗಡೆಯವರು ನಿದರ್ಶನವಾಗಿದ್ದಾರೆ ಎಂದರು. ಅಕಾಡೆಮಿಯ ಸದಸ್ಯ ಸಂತೋಷ್ ಶೆಟ್ಟಿ ಹಿರಿಯಡ್ಕ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
The release of Dr. Indira Heggade’s latest Tulu work marks a major milestone in regional research literature. Scholars described the book as a guiding light for young researchers and a rich documentation of her field experiences in folklore studies.
24-03-26 02:55 pm
HK News Staffer
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
24-03-26 04:43 pm
HK News Staffer
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
24-03-26 05:34 pm
HK News Staffer
ಸಜಿಪನಡು ತಲೆಮೊಗರು ಮಸೀದಿಯಲ್ಲಿ ಗಲಾಟೆ ; ಆಡಳಿತ ವಿಚ...
24-03-26 11:55 am
ಹರ್ಮುಜ್ ಜಲಸಂಧಿ ಬಂದ್ ; ಭಾರತದ 22 ಹಡಗು ಲಂಗರು, 20...
24-03-26 09:24 am
ಕಾಸರಗೋಡು ಅಖಾಡ ರೆಡಿ ; ಎಲ್ ಡಿಎಫ್ ನಿಂದ ಶಾನವಾಸ್ ಪ...
23-03-26 05:36 pm
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm