ಬ್ರೇಕಿಂಗ್ ನ್ಯೂಸ್
05-11-25 07:49 pm Mangalore Correspondent ಕರಾವಳಿ
ಮಂಗಳೂರು, ನ.5 : ಸಂಶೋಧಕಿ ಡಾ.ಇಂದಿರಾ ಹೆಗ್ಗಡೆ ಅವರು ತನ್ನ ಜಾನಪದೀಯ ಸಂಶೋಧನೆಯ ಕ್ಷೇತ್ರ ಕಾರ್ಯದ ಅನುಭವಗಳನ್ನು ದಾಖಲಿಸುವ ಮೂಲಕ ಸಂಶೋಧನಾ ಕ್ಷೇತ್ರಕ್ಕೆ ಬರುವವರಿಗೆ ಬಹುದೊಡ್ಡ ಮಾರ್ಗದರ್ಶಿ ಕೊಡುಗೆಯನ್ನು ನೀಡಿದ್ದಾರೆ, ತುಳುವಿನಲ್ಲಿ ಇದೊಂದು ಮಹತ್ವದ ಕೃತಿಯಾಗಲಿದೆ ಎಂದು ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ.ಆಶಾಲತಾ ಸುವರ್ಣ ಹೇಳಿದರು.
ತುಳು ಭವನದಲ್ಲಿ ಬುಧವಾರ ಆಯೋಜಿಸಲಾಗಿದ್ದ ಡಾ.ಇಂದಿರಾ ಹೆಗ್ಗಡೆ ಅವರ ‘ಬಾರಗೆರೆ ಬರಂಬು ತುಳುವೆರೆ ಪುಂಚ ನಾಡೊಂದು’ ತುಳು ಕೃತಿಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಜಾನಪದೀಯ ಅಧ್ಯಯನ ಕ್ಷೇತ್ರ ಕಾರ್ಯಗಳ ಸಂದರ್ಭದಲ್ಲಿ ಮಹಿಳೆಯರು ಸಾಕಷ್ಟು ಎಡರು ತೊಡಕುಗಳನ್ನು ಎದುರಿಸುವ ಸಂದರ್ಭ ಉಂಟಾಗುತ್ತಿತ್ತು. ಈ ಎಲ್ಲಾ ಸವಾಲುಗಳನ್ನು ಧೈರ್ಯದಿಂದ ಎದುರಿಸಿ ಮುನ್ನಡೆದು ಡಾ.ಇಂದಿರಾ ಹೆಗ್ಗಡೆ ಅವರು ಹಲವು ಮಹತ್ವದ ಕೃತಿಗಳನ್ನು ನೀಡಿರುವುದು ಪ್ರಶಂಸನೀಯ ಎಂದು ಡಾ.ಆಶಾಲತಾ ಸುವರ್ಣ ಅಭಿಪ್ರಾಯಪಟ್ಟರು.
ಲೇಖಕಿ ಡಾ.ಇಂದಿರಾ ಹೆಗ್ಗಡೆ ಮಾತನಾಡಿ, ತಾನು ಕನ್ನಡದಲ್ಲಿ ಹಲವು ಕೃತಿಗಳನ್ನು ಬರೆದರೂ ತುಳುವಿನಲ್ಲಿ ಬರೆದ ‘ಬಾರಗೆರೆ ಬರಂಬು ತುಳುವೆರೆ ಪುಂಚ ನಾಡೊಂದು’ ಕೃತಿ ನನಗೆ ಹೃದಯಕ್ಕೆ ಹಾಗೂ ಮನಸ್ಸಿಗೆ ತುಂಬಾ ಆಪ್ತವಾಯಿತು, ತುಳುವಿನಲ್ಲಿ ಬರೆಯುವುದು ತುಂಬಾ ಆಪ್ತವಾದ ವಿಚಾರ ಎಂದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಡಾ.ಸಮೀರ್ ಮಾಡ, ಹಿರಿಯ ಲೇಖಕಿ ಪ್ರೇಮಾ ಅಜ್ರಿ ಕಾರ್ಕಳ, ಚೇಳೈರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಡಾ.ಜ್ಯೋತಿ ಚೇಳೈರು, ನಿವೃತ್ತ ಪ್ರಾಂಶುಪಾಲ ಕೃಷ್ಣಮೂರ್ತಿ ಪಿ. ಅವರು ಕೃತಿಯ ಬಗ್ಗೆ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಮಾತನಾಡಿ, ತುಳುವಿನಲ್ಲಿ ಹೊಸದಾಗಿ ಸಂಶೋಧನೆ ಮಾಡಲು ಹೊರಟವರಲ್ಲಿ ಕ್ಷೇತ್ರ ಕಾರ್ಯದ ಅನುಭವದ ಕೊರತೆ ಇದೆ, ತಳಸ್ಪರ್ಶಿಯಾದ ಕ್ಷೇತ್ರ ಅಧ್ಯಯನದ ಮೂಲಕ ಸಂಶೋಧನೆ ನಡೆಸುವುದಕ್ಕೆ ಇಂದಿರಾ ಹೆಗ್ಗಡೆಯವರು ನಿದರ್ಶನವಾಗಿದ್ದಾರೆ ಎಂದರು. ಅಕಾಡೆಮಿಯ ಸದಸ್ಯ ಸಂತೋಷ್ ಶೆಟ್ಟಿ ಹಿರಿಯಡ್ಕ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
The release of Dr. Indira Heggade’s latest Tulu work marks a major milestone in regional research literature. Scholars described the book as a guiding light for young researchers and a rich documentation of her field experiences in folklore studies.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm