ಬ್ರೇಕಿಂಗ್ ನ್ಯೂಸ್
06-11-25 12:51 pm Mangalore Correspondent ಕರಾವಳಿ
ಮಂಗಳೂರು, ನ.6 : ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ಮೊಬೈಲ್ ಜಾಮರ್ ಅಳವಡಿಸಿರುವ ಹಿನ್ನೆಲೆಯಲ್ಲಿ ಸುತ್ತಲಿನ ಪ್ರದೇಶದಲ್ಲಿ ಮೊಬೈಲ್ ನೆಟ್ವರ್ಕ್ ತೊಂದರೆಯಾಗಿದೆ ಎಂಬ ವಕೀಲರ ದೂರಿಗೆ ಸಂಬಂಧಿಸಿ ಹೈಕೋರ್ಟ್, ಅಲ್ಲಿನ ಸಾಮರ್ಥ್ಯವನ್ನು ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ.
ಜಾಮರ್ ಅಳವಡಿಸಿರುವುದರಿಂದ ಕಳೆದ ಮಾರ್ಚ್ನಿಂದ ಮಂಗಳೂರಿನ ನ್ಯಾಯಾಲಯಗಳ ಸಂಕೀರ್ಣ ಸಹಿತ ಸುತ್ತಲಿನ ಪ್ರದೇಶಗಳಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆ ಉಂಟಾಗಿರುವ ಬಗ್ಗೆ ಮಂಗಳೂರಿನ ವಕೀಲರ ಸಂಘ ಹೈಕೋರ್ಟಿನಲ್ಲಿ ದಾವೆ ಹೂಡಿದ್ದು ವಿಚಾರಣೆ ಆರಂಭಗೊಂಡಿದೆ. ಸಂಘದ ಪರವಾಗಿ ಹಿರಿಯ ವಕೀಲ ಪಿ.ಪಿ. ಹೆಗ್ಡೆ ವಾದ ಮಂಡಿಸಿದರು.
ಕಾರಾಗೃಹದಲ್ಲಿರುವ ಕೈದಿಗಳು ಮೊಬೈಲ್ ಬಳಸಬಾರದೆಂಬ ಉದ್ದೇಶದಿಂದ ಜಾಮರ್ ಅಳವಡಿಸಲಾಗಿದೆ. ಆದರೆ ಕೈದಿಗಳಿಗೆ ಮೊಬೈಲ್ ನೆಟ್ವರ್ಕ್ ದೊರೆಯುತ್ತಿರುವ ಮಾಹಿತಿ ಇದೆ. ಕಾರಾಗೃಹದ ಹೊರ ಭಾಗದಲ್ಲಿ ನೆಟ್ವರ್ಕ್ ತೊಂದರೆಯಾಗುತ್ತಿದೆ ಎಂದು ವಾದಿಸಿದರು. ನೆಟ್ವರ್ಕ್ ಸಮಸ್ಯೆಯಿಂದಾಗಿ ನ್ಯಾಯವಾದಿಗಳ ಸಹಿತ ಸಾರ್ವಜನಿಕರಿಗೆ ಸಮಸ್ಯೆಯಾಗಿದೆ. ಈ ಬಗ್ಗೆ ಸಂಬಂಧಿಸಿದವರಿಗೆ ಸಾಕಷ್ಟು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ನ್ಯಾಯಾಲಯದ ಕಲಾಪಗಳಿಗೆ ಸಂಬಂಧಿಸಿದ ಕೆಲಸಗಳನ್ನು ಮಾಡುವ ಸಂದರ್ಭದಲ್ಲಿಯೂ ನ್ಯಾಯವಾದಿಗಳಿಗೆ ಅಡ್ಡಿಯಾಗುತ್ತದೆ ಎಂದು ವಾದಿಸಿದರು.
ವಾದ ಆಲಿಸಿದ ನ್ಯಾಯಾಧೀಶರು ಕಾರಾಗೃಹ, ನ್ಯಾಯಾಲಯ ಹಾಗೂ ಸುತ್ತಲಿನ ಪರಿಸರದಲ್ಲಿ ಇರುವ ಮೊಬೈಲ್ ನೆಟ್ವರ್ಕ್ ಸಾಮರ್ಥ್ಯದ ಬಗ್ಗೆ ಪರಿಶೀಲನೆ ನಡೆಸಿ ವಾರದೊಳಗೆ ತಾಂತ್ರಿಕ ವರದಿಯನ್ನು ಸಲ್ಲಿಸುವಂತೆ ಸರಕಾರಕ್ಕೆ ಸೂಚಿಸಿದರು. ಮುಂದಿನ ವಿಚಾರಣೆಯನ್ನು ನ.18ಕ್ಕೆ ನಿಗದಿಗೊಳಿಸಲಾಗಿದೆ. ಕಾರಾಗೃಹದ ಸುತ್ತಲಿನ ಕೊಡಿಯಾಲ್ ಬೈಲ್ ಪ್ರದೇಶದ ಒಂದು ಕಿ.ಮೀ.ಗೂ ಹೆಚ್ಚು ಪ್ರದೇಶದಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆ ಉಂಟಾಗಿದ್ದು ಶಿಕ್ಷಣ ಸಂಸ್ಥೆಗಳು, ವಾಣಿಜ್ಯ ಸಂಸ್ಥೆಗಳು, ನ್ಯಾಯಾಲಯ ಸಹಿತ ನಗರದ ಕೇಂದ್ರ ಭಾಗದಲ್ಲಿ ದಿನನಿತ್ಯದ ವ್ಯವಹಾರ, ಚಟುವಟಿಕೆಗಳ ಮೇಲೆ ದುಷ್ಪರಿಣಾಮ ಬೀರಿದೆ.
Following complaints from the Mangaluru Bar Association about poor mobile network coverage near the district jail and court complex, the Karnataka High Court has directed authorities to inspect the jammer’s functioning and submit a detailed technical report within a week.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm