ಬ್ರೇಕಿಂಗ್ ನ್ಯೂಸ್
08-11-25 08:31 pm Mangalore Correspondent ಕರಾವಳಿ
ಮಂಗಳೂರು, ನ.8 : ಸುರತ್ಕಲ್ ಗುಡ್ಡೆಕೊಪ್ಲ ಸಮುದ್ರ ತೀರದಲ್ಲಿ ಆರು ವರ್ಷಗಳ ಹಿಂದೆ ಮರಳಿನಲ್ಲಿ ಹೂತು ಹೋಗಿದ್ದ ಭಗವತಿ ಪ್ರೇಮ್ ಡ್ರೆಜ್ಜರ್ ಹಡಗು ಬಹುತೇಕ ಭಾಗ ಈಗ ತಳ ಸೇರಿಕೊಂಡಿದೆ. ಹಡಗನ್ನು ಇನ್ನೂ ತೆಗೆಯದೇ ಇರುವುದರಿಂದ ಸ್ಥಳೀಯವಾಗಿ ಮೀನುಗಾರಿಕೆಗೆ ಅಡಚಣೆ ಎದುರಾಗಿದೆ. ಅಲ್ಲದೆ, ಸ್ಥಳೀಯ ನಿವಾಸಿಗಳ ಆತಂಕಕ್ಕೂ ಕಾರಣವಾಗಿದೆ.
ಪಣಂಬೂರು ಬಂದರಿನಲ್ಲಿ ಹೂಳೆತ್ತುವ ಗುತ್ತಿಗೆ ಪಡೆದಿದ್ದ ಮುಂಬೈ ಮೂಲದ ಕಂಪನಿಗೆ ಈ ಡ್ರೆಜ್ಜರ್ ಸೇರಿದ್ದು ತಾಂತ್ರಿಕ ಕಾರಣಗಳಿಂದಾಗಿ ತೀರಕ್ಕೆ ಬಂದು ಮರಳಿನಲ್ಲಿ ಹೂತು ಹೋಗಿದ್ದರಿಂದ ಬಾಕಿಯಾಗಿತ್ತು. 2019ರ ಅಕ್ಟೋಬರ್ 29ರಂದು ಹಡಗನ್ನು ನಿಲ್ಲಿಸಲಾಗಿತ್ತು. ಬಳಿಕ ಬೇರೆಡೆ ಕೊಂಡೊಯ್ಯಲು ಸಾಧ್ಯವಾಗದೆ ಸ್ಥಳದಲ್ಲೇ ಹಡಗನ್ಹು ಒಡೆದು ಹೊರ ತೆಗೆಯುವ ಬಗ್ಗೆ ಹಡಗು ಕಂಪನಿ ಭರವಸೆ ನೀಡಿತ್ತು. ಆದರೆ ಹಡಗನ್ನು ಪೂರ್ತಿ ಒಡೆದು ತೆಗೆಯುವುದು ಸಾಧ್ಯವಾಗಲಿಲ್ಲ.


ಒಂದು ವರ್ಷದ ಹಿಂದೆ ಬಾರ್ಜ್ ಆಧರಿತ ಕ್ರೇನ್ ಮೂಲಕ ಹಡಗನ್ನು ಒಡೆಯುವ ಯತ್ನ ನಡೆದಿತ್ತು. ಡ್ರೆಜ್ಜರ್ನ ಒಂದು ಭಾಗದಷ್ಟು ಮಾತ್ರ ತೆರವು ಮಾಡಲಾಗಿದ್ದು, ಎರಡು ಭಾಗ ಇನ್ನೂ ಸಮುದ್ರದಲ್ಲೇ ಇದೆ. ಶಾಸಕ ಭರತ್ ಶೆಟ್ಟಿ ಮಧ್ಯಸ್ಥಿಕೆಯಲ್ಲಿ ಹಡಗು ಕಂಪನಿ ಜೊತೆಗಿನ ಮಾತುಕತೆಯಲ್ಲಿ ಶೀಘ್ರದಲ್ಲೇ ತೆರವು ಕಾರ್ಯ ಮುಗಿಸಲು ಸೂಚಿಸಲಾಗಿದ್ದರೂ, ಚಂಡಮಾರುತ ಹಾಗೂ ತಾಂತ್ರಿಕ ತೊಂದರೆಗಳಿಂದ ವಿಳಂಬವಾಗಿದೆ.
ಬಾರ್ಜ್ ಆಧರಿತ ಕ್ರೇನ್ ಮತ್ತೆ ಸುರತ್ಕಲ್ ಬರಲಿದೆ ಎನ್ನಲಾಗುತ್ತಿದ್ದು ಮುಂಬೈನಿಂದ ಕಟ್ಟರ್ಸ್ ಹಾಗೂ ಕಾರ್ಮಿಕರ ತಂಡ ಆಗಮಿಸಲಿದೆ ಅಂತೆ. ಡ್ರೆಜ್ಜರ್ ಹಡಗು ನಿಂತಿರುವ ಜಾಗ ಮೀನುಗಾರಿಕೆಯ ಪ್ರಮುಖ ವಲಯ. ಆದರೆ ಡ್ರೆಜ್ಜರ್ ಅವಶೇಷದಿಂದಾಗಿ ಈ ಭಾಗದಲ್ಲಿ ಮೀನುಗಾರಿಕೆ ನಡೆಸಿದರೆ ಬಲೆಗಳಿಗೆ ಹಾನಿಯಾಗುತ್ತಿದೆ. ಮೀನುಗಾರರು ಅಸಹಾಯಕರಾಗಿದ್ದಾರೆ ಎಂದು ಗುಡ್ಡೆಕೊಪ್ಲ ಮೊಗವೀರ ಸಭಾದ ಅಧ್ಯಕ್ಷ ಕೇಶವ ಕುಂದರ್ ಹೇಳಿದ್ದಾರೆ. ಒಂದೆಡೆ ಡ್ರೆಜ್ಜರ್ನ ಅವಶೇಷದಿಂದ ಮೀನುಗಾರರು ಸಂಕಷ್ಟದಲ್ಲಿದ್ದರೆ, ಪ್ರವಾಸಿಗರಿಗೆ ಮಾತ್ರ ಕುತೂಹಲದ ಕೇಂದ್ರವಾಗಿದೆ. ಡ್ರೆಜ್ಜರ್ ವೀಕ್ಷಣೆಗೆ ಹೊರ ಜಿಲ್ಲೆಗಳಿಂದಲೂ ಜನರು ಬರುತ್ತಿದ್ದಾರೆ. ಈಗ ಪ್ರೀವೆಡ್ಡಿಂಗ್ ಫೋಟೋ ಶೂಟ್ ತಾಣವಾಗಿಯೂ ಪ್ರಸಿದ್ಧಿ ಪಡೆದಿದೆ ಎಂದು ಸ್ಥಳೀಯರು ಹೇಳುತ್ತಾರೆ.
The Bhagwati Prem dredger ship, which got stuck in the sand at Surathkal’s Gudddekopla beach nearly six years ago, is now almost completely buried under the sand. However, the stranded vessel continues to disrupt fishing activities and has become a cause of concern for local fishermen and residents.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm