Bomb blast in New Delhi, High Alert in Dakshina Kannada: ದೆಹಲಿ ಸ್ಫೋಟ ಘಟನೆ ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸ್ ಅಲರ್ಟ್, ಗಸ್ತು ಹೆಚ್ಚಳ, ಆಯಕಟ್ಟಿನ ಜಾಗಗಳಲ್ಲಿ ತಪಾಸಣೆ, ಪ್ರವಾಸಿ ತಾಣಗಳಲ್ಲಿ ಬಿಗು ಭದ್ರತೆ 

11-11-25 10:15 pm       Mangalore Correspondent   ಕರಾವಳಿ

ರಾಜಧಾನಿ ದೆಹಲಿಯಲ್ಲಿ ನಡೆದ ಬಾಂಬ್ ಸ್ಫೋಟ ಘಟನೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆ ಅಲರ್ಟ್ ಆಗಿದ್ದು ಹೆಚ್ಚುವರಿ ತಪಾಸಣೆಗೆ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಮಂಗಳೂರು, ನ.11: ರಾಜಧಾನಿ ದೆಹಲಿಯಲ್ಲಿ ನಡೆದ ಬಾಂಬ್ ಸ್ಫೋಟ ಘಟನೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆ ಅಲರ್ಟ್ ಆಗಿದ್ದು ಹೆಚ್ಚುವರಿ ತಪಾಸಣೆಗೆ ಕ್ರಮಗಳನ್ನು ಕೈಗೊಳ್ಳಲಾಗಿದೆ. 

ಇದರಂತೆ, ಜಿಲ್ಲೆಯಾದ್ಯಂತ ರಾತ್ರಿ ವೇಳೆ ಪೊಲೀಸ್ ಅಧಿಕಾರಿಗಳು ಕಟ್ಟುನಿಟ್ಟಾದ ಗಸ್ತು ನಿರ್ವಹಿಸುವಂತೆ ಇಲಾಖೆಯಿಂದ ಸ್ಪಷ್ಟ ಸೂಚನೆ ನೀಡಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಅಧಿಕಾರಿ/ಸಿಬ್ಬಂದಿಗಳನ್ನು picketing point ಕರ್ತವ್ಯದಲ್ಲಿ ನಿಯೋಜಿಸಿ ನಿಗಾ ವಹಿಸಲಾಗುತ್ತದೆ. 

ಜಿಲ್ಲೆಯ ಮುಖ್ಯ ಸ್ಥಳಗಳಲ್ಲಿ ನಾಕಾಬಂದಿಗಳನ್ನು ಅಳವಡಿಸಿ ಕಟ್ಟುನಿಟ್ಟಾಗಿ ತಪಾಸಣೆ ನಡೆಸಲಾಗುತ್ತಿದೆ. ಜಿಲ್ಲೆಯ ಪ್ರವಾಸಿ ತಾಣಗಳು, ಧಾರ್ಮಿಕ ಸ್ಥಳಗಳು, ಮುಖ್ಯ ಸರ್ಕಾರಿ ಕಟ್ಟಡಗಳು ಸೇರಿದಂತೆ ಜನದಟ್ಟಣೆ ಇರುವ ಜಾಗಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಿ ನಿಗಾ ವಹಿಸಲಾಗುತ್ತಿದೆ ಎಂದು ಪೊಲೀಸ್ ಇಲಾಖೆ ಪ್ರಕಟಣೆ ತಿಳಿಸಿದೆ. 

ಯಾವುದೇ ಸಂಶಯಾಸ್ಪದ ವ್ಯಕ್ತಿಗಳು ಅಥವಾ ಸಂಶಯಾಸ್ಪದ ಕೃತ್ಯಗಳು ಕಂಡುಬಂದಲ್ಲಿ ಸಾರ್ವಜನಿಕರು ತಕ್ಷಣ ಜಿಲ್ಲಾ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಬೇಕಾಗಿ ಪೊಲೀಸರು ವಿನಂತಿಸಿದ್ದಾರೆ.‌

Following the bomb blast in New Delhi, police in Dakshina Kannada district have been placed on high alert. Night patrols have been strengthened, and strict security checks and barricades have been set up across key locations. Authorities have deployed officers at sensitive points for continuous surveillance.