ಬ್ರೇಕಿಂಗ್ ನ್ಯೂಸ್
15-11-25 07:42 pm Mangalore Correspondent ಕರಾವಳಿ
ಮಂಗಳೂರು, ನ.15 : ಉಳ್ಳಾಲ ಠಾಣೆ ವ್ಯಾಪ್ತಿಯ ಕುಂಪಲದಲ್ಲಿ ವ್ಯಕ್ತಿಯೊಬ್ಬರು ಬೀದಿ ನಾಯಿಗಳ ದಾಳಿಗೆ ತುತ್ತಾಗಿ ಮೃತಪಟ್ಟ ಘಟನೆ ಹಿನ್ನೆಲೆಯಲ್ಲಿ ಎಚ್ಚತ್ತುಕೊಂಡ ಮಂಗಳೂರು ಮಹಾನಗರ ಪಾಲಿಕೆಯು ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯಲ್ಲಿನ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು, ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳ ಮುಖ್ಯಸ್ಥರು ತಮ್ಮ ಸಂಸ್ಥೆಯ ಆವರಣದಲ್ಲಿ ಯಾವುದೇ ಬೀದಿ ನಾಯಿಗಳು ವಾಸವಿದ್ದಲ್ಲಿ ಅದನ್ನು ಪರಿಶೀಲಿಸಿ ಮುಂದಿನ 5 ದಿನಗಳೊಳಗಾಗಿ ಅದರ ಸಂಖ್ಯೆಯನ್ನು ಲೆಕ್ಕ ಮಾಡಿ ಆಯಾ ಭಾಗದ ಸ್ಥಳೀಯಾಡಳಿತಕ್ಕೆ ತಿಳಿಸಬೇಕು ಎಂದು ಸೂಚನೆ ನೀಡಿದೆ.
ತಮ್ಮ ಸಂಸ್ಥೆಯ ಆವರಣದಲ್ಲಿ ಬೀದಿ ನಾಯಿಗಳ ಉಪಟಳ ತಡೆಯಲು ಹಾಗೂ ಅವುಗಳ ಪ್ರದೇಶ ನಿಯಂತ್ರಿಸಲು ಕ್ರಮ ವಹಿಸಬೇಕು. ನಗರ ಸ್ಥಳೀಯ ಸಂಸ್ಥೆಯಿಂದ ಬೀದಿ ನಾಯಿಗಳನ್ನು ಸ್ಥಳಾಂತರಿಸಲು ಸಹಕರಿಸಲು ಹಾಗೂ ಅವುಗಳ ಪ್ರವೇಶ ನಿರ್ಬಂಧಿಸುವುದನ್ನು ಮೇಲ್ವಿಚಾರಣೆ ಮಾಡಲು ಸಂಸ್ಥೆ ವತಿಯಿಂದ ಒಬ್ಬ ಜವಾಬ್ದಾರಿಯುತ ನೌಕರರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಬೇಕು. ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ಪುನಃ ನಾಯಿಗಳು ವಾಸ ಮಾಡಲು ಅವಕಾಶ ಕೊಟ್ಟಲ್ಲಿ ಅವನ್ನು ಸ್ಥಳಾಂತರಿಸುವ ವೆಚ್ಚವನ್ನು ತಮ್ಮ ಸಂಸ್ಥೆಯಿಂದಲೇ ವಸೂಲಿ ಮಾಡಲಾಗುತ್ತದೆ.
ಸರ್ವೋಚ್ಚ ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿದ್ದಲ್ಲಿ ನ್ಯಾಯಾಲಯದ ಆದೇಶದಂತೆ ತಮ್ಮ ವಿರುದ್ದ ಕಾನೂನು ಕ್ರಮ ವಹಿಸಲಾಗುತ್ತದೆ ಎಂದು ಮಹಾನಗರಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದಲ್ಲದೆ, ಬೀದಿ ನಾಯಿಗಳಿಗೆ ಆಹಾರ ನೀಡುವ ತಾಣ ಗುರುತಿಸುವುದು, ಸುಪ್ರೀಂ ಕೋರ್ಟ್ ಕಾನೂನು ಪಾಲನೆ ಕುರಿತಾಗಿ ಚರ್ಚಿಸಲು ಮಹಾನಗರ ಪಾಲಿಕೆಯಲ್ಲಿ ನ.23ರಂದು ಬೆಳಗ್ಗೆ 11 ಗಂಟೆಗೆ ಸಭೆ ಕರೆದಿದ್ದು ನಾಯಿಗಳಿಗೆ ಆಹಾರ ನೀಡುವವರು, ಪ್ರಾಣಿ ಪ್ರಿಯರು ಭಾಗವಹಿಸಲು ಪಾಲಿಕೆ ಆಯುಕ್ತರು ಕೋರಿದ್ದಾರೆ.
ಟ್ರಾನ್ಸ್ ಜೆಂಡರ್ ಸಮೀಕ್ಷೆ ; ಕಡ್ಡಾಯ ಮಾಹಿತಿ ಒದಗಿಸಲು ಸೂಚನೆ
ಲಿಂಗತ್ವ ಅಲ್ಪಸಂಖ್ಯಾತ (ಟ್ರಾನ್ಸ್ಜೆಂಡರ್) ಸಮೀಕ್ಷೆಗೆ ಈಗಾಗಲೇ ಚಾಲನೆ ನೀಡಿದ್ದು, ನವೆಂಬರ್ 21ರ ವರೆಗೆ (ರಜಾದಿನ ಹೊರತುಪಡಿಸಿ) ಬೆಳಗ್ಗೆ 9ರಿಂದ ಸಂಜೆ 6 ರ ವರೆಗೆ ಜಿಲ್ಲೆಯ ವೆನ್ಲಾಕ್ ಆಸ್ಪತ್ರೆ, ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರ, ಬಂಟ್ವಾಳ ಸಮುದಾಯ ಆರೋಗ್ಯ ಕೇಂದ್ರ, ಪುತ್ತೂರು/ಬೆಳ್ತಂಗಡಿ/ಸುಳ್ಯ ತಾಲೂಕು ಆಸ್ಪತ್ರೆಗಳಲ್ಲಿ ಸಮೀಕ್ಷೆ ನಡೆಸಲಾಗುತ್ತಿದೆ.
ಟ್ರಾನ್ಸ್ಜೆಂಡರ್ಸ್ ಸಂಖ್ಯೆ, ಶೈಕ್ಷಣಿಕ ಮಟ್ಟ, ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿಗಳ ಮಾಹಿತಿ ಅಗತ್ಯವಾಗಿರುವುದರಿಂದ ಸಮೀಕ್ಷೆ ಪೂರ್ಣಗೊಳ್ಳಲು ಕೇವಲ 9 ದಿನ ಬಾಕಿ ಉಳಿದಿರುವುದರಿಂದ ಸಮೀಕ್ಷೆಗೆ ಒಳಗಾಗದ ಲಿಂಗತ್ವ ಅಲ್ಪಸಂಖ್ಯಾತ (ಟ್ರಾನ್ಸ್ಜೆಂಡರ್) ಸಮುದಾಯದ ವ್ಯಕ್ತಿಗಳು ಕಡ್ಡಾಯವಾಗಿ ತಮ್ಮ ಆಧಾರ್ ಕಾರ್ಡ್ನೊಂದಿಗೆ ಹಾಜರಾಗಿ ಮಾಹಿತಿಗಳನ್ನು ಒದಗಿಸಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ 9480155501 ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Following the death of a man in a street dog attack at Kumpala under Ullal Police Station limits, the Mangaluru City Corporation has issued strict directions to all private and government educational institutions, hospitals, sports complexes, bus stands, and railway stations.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am