ಬ್ರೇಕಿಂಗ್ ನ್ಯೂಸ್
15-11-25 10:47 pm Mangalore Correspondent ಕರಾವಳಿ
ಬೆಳ್ತಂಗಡಿ, ನ.15 : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಮೃತದೇಹಗಳನ್ನು ಹೂತಿಟ್ಟ ಆರೋಪದ ಕುರಿತು ಮತ್ತು 20 ವರ್ಷಗಳಿಂದ ನಡೆದಿರುವ ಅಸಹಜ ಪ್ರಕರಣದ ತನಿಖೆಗಾಗಿ ರಚನೆಗೊಂಡಿರುವ ಎಸ್ಐಟಿ ಅಧಿಕಾರಿಗಳ ವಿರುದ್ಧವೇ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಾಗಿದೆ.
ಸೌಜನ್ಯಾ ಪರ ಹೋರಾಟಗಾರ ಟಿ. ಜಯಂತ್ ಅವರು ಎಸ್ಐಟಿ ಅಧಿಕಾರಿಗಳ ವಿರುದ್ಧ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದಾರೆ. ಎಸ್ಐಟಿ ಅಧಿಕಾರಿಗಳಾದ ಎಸ್ಪಿ ಜಿತೇಂದ್ರ ದಯಾಮ, ಎಸ್ಪಿ ಸೈಮನ್, ಡಿವೈಎಸ್ಪಿ ಆರ್ ಜಿ. ಮಂಜುನಾಥ, ಇನ್ಸ್ ಸ್ಪೆಕ್ಟರ್ ಮಂಜುನಾಥ ಗೌಡ, ಸಬ್ ಇನ್ಸ್ಪೆಕ್ಟರ್ ಗುಣಪಾಲ್ ಅವರು ಉದ್ದೇಶಿತ ತನಿಖೆ ಮಾಡುವ ಬದಲು ಹೋರಾಟಗಾರರ ಮೇಲೆ ಕಿರುಕುಳ ನೀಡಿದ್ದಾರೆ, ಸೆ.5ರಿಂದ 13ರ ವರೆಗೆ ಗಿರೀಶ್ ಮಟ್ಟೆಣ್ಣವರ್, ಅಭಿಷೇಕ್, ವಿಠಲ ಗೌಡ ಮತ್ತು ತನಗೆ 8-10 ನೋಟಿಸ್ ನೀಡಿ ಠಾಣೆಗೆ ಕರೆಸಿ ವಿನಾಕಾರಣ ಕಿರುಕುಳ ನೀಡಿದ್ದಾರೆ, ಚಿನ್ನಯ್ಯನ ಮೂಲಕ ತನ್ನ ಮೇಲೆ ಬಟ್ಟೆ ಬಿಚ್ಚಿಸಿ ಹಲ್ಲೆ ನಡೆಸಿದ್ದಾರೆ, ಸಿಸಿಟಿವಿ ಇಲ್ಲದ ಕೋಣೆಗೆ ಕರೆದೊಯ್ದು ಬೂಟು ಕಾಲಿನಿಂದ ಒದ್ದು ಹಲ್ಲೆ ನಡೆಸಿದ್ದಾರೆ, ದೊಡ್ಡವರ ವಿರುದ್ಧ ದೂರು ಕೊಟ್ಟಿದ್ದೀಯಾ, ನಿನ್ನನ್ನು ಜೈಲಿಗೆ ಕಳಿಸದೇ ಬಿಡುವುದಿಲ್ಲ ಎಂದು ಪದೇ ಪದೇ ಹೇಳಿ ಬೆದರಿಕೆ ಹಾಕಿದ್ದಾರೆ, ರಾತ್ರಿ ವರೆಗೂ ತನ್ನ ಪತ್ನಿ, ಮಕ್ಕಳನ್ನು ಕರೆಸಿ ಠಾಣೆಯಲ್ಲಿ ಕೂರಿಸಿ ಸುಳ್ಳು ಹೇಳಿಕೆ ಪಡೆದಿದ್ದಾರೆ ಇತ್ಯಾದಿ ಆರೋಪಗಳನ್ನು ಹೊರಿಸಿ ದೂರು ನೀಡಿದ್ದಾರೆ.
ವಿಚಾರಣೆ ಸಂದರ್ಭದಲ್ಲಿ ದೈಹಿಕ ಹಲ್ಲೆ, ಪ್ರಾಣ ಬೆದರಿಕೆ, ಅಪರಾಧಿಕ ಪಿತೂರಿ, ಸುಳ್ಳು ಸಾಕ್ಷಿ ಹೇಳುವಂತೆ ಒತ್ತಾಯ ಹೇರಿದ್ದಾಗಿ ಪೊಲೀಸ್ ಅಧಿಕಾರಿಗಳ ವಿರುದ್ಧ ದೂರು ನೀಡಿದ್ದಾರೆ. ಅಲ್ಲದೆ ಕಾನೂನುಬಾಹಿರ ಕೃತ್ಯಗಳು, ಸರಕಾರಿ ಆದೇಶ ಪಾಲನೆ ಮಾಡದೆ ಕರ್ತವ್ಯ ನಿರ್ಲಕ್ಷ್ಯ ಆರೋಪ ಮಾಡಿದ್ದಾರೆ.
A complaint has been filed at the Dharmasthala Police Station against officers of the Special Investigation Team (SIT), which was formed to probe the alleged burial of hundreds of bodies and the 20-year-old mysterious incidents in Dharmasthala village.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 11:12 pm
HK News Desk
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
15-11-25 10:47 pm
Mangalore Correspondent
ಬೀದಿ ನಾಯಿಗಳಿಗೆ ವ್ಯಕ್ತಿ ಬಲಿ ; ಕಡೆಗೂ ಎಚ್ಚತ್ತುಕೊ...
15-11-25 07:42 pm
Panambur Accident, Mangalore, Three dead: ಪಣಂ...
15-11-25 02:47 pm
ಬಿಹಾರದಲ್ಲಿ ಚುನಾವಣೆ ಮುನ್ನ ಹತ್ತು ಸಾವಿರ ಕೊಟ್ಟು ಮ...
15-11-25 01:51 pm
ಬಿ.ಸಿ. ರೋಡ್ ಬಳಿ ಭೀಕರ ಅಪಘಾತ ; ಉಡುಪಿ ಕೃಷ್ಣ ಮಠಕ್...
15-11-25 12:12 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm