ಬ್ರೇಕಿಂಗ್ ನ್ಯೂಸ್
15-11-25 10:47 pm Mangalore Correspondent ಕರಾವಳಿ
ಬೆಳ್ತಂಗಡಿ, ನ.15 : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಮೃತದೇಹಗಳನ್ನು ಹೂತಿಟ್ಟ ಆರೋಪದ ಕುರಿತು ಮತ್ತು 20 ವರ್ಷಗಳಿಂದ ನಡೆದಿರುವ ಅಸಹಜ ಪ್ರಕರಣದ ತನಿಖೆಗಾಗಿ ರಚನೆಗೊಂಡಿರುವ ಎಸ್ಐಟಿ ಅಧಿಕಾರಿಗಳ ವಿರುದ್ಧವೇ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಾಗಿದೆ.
ಸೌಜನ್ಯಾ ಪರ ಹೋರಾಟಗಾರ ಟಿ. ಜಯಂತ್ ಅವರು ಎಸ್ಐಟಿ ಅಧಿಕಾರಿಗಳ ವಿರುದ್ಧ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದಾರೆ. ಎಸ್ಐಟಿ ಅಧಿಕಾರಿಗಳಾದ ಎಸ್ಪಿ ಜಿತೇಂದ್ರ ದಯಾಮ, ಎಸ್ಪಿ ಸೈಮನ್, ಡಿವೈಎಸ್ಪಿ ಆರ್ ಜಿ. ಮಂಜುನಾಥ, ಇನ್ಸ್ ಸ್ಪೆಕ್ಟರ್ ಮಂಜುನಾಥ ಗೌಡ, ಸಬ್ ಇನ್ಸ್ಪೆಕ್ಟರ್ ಗುಣಪಾಲ್ ಅವರು ಉದ್ದೇಶಿತ ತನಿಖೆ ಮಾಡುವ ಬದಲು ಹೋರಾಟಗಾರರ ಮೇಲೆ ಕಿರುಕುಳ ನೀಡಿದ್ದಾರೆ, ಸೆ.5ರಿಂದ 13ರ ವರೆಗೆ ಗಿರೀಶ್ ಮಟ್ಟೆಣ್ಣವರ್, ಅಭಿಷೇಕ್, ವಿಠಲ ಗೌಡ ಮತ್ತು ತನಗೆ 8-10 ನೋಟಿಸ್ ನೀಡಿ ಠಾಣೆಗೆ ಕರೆಸಿ ವಿನಾಕಾರಣ ಕಿರುಕುಳ ನೀಡಿದ್ದಾರೆ, ಚಿನ್ನಯ್ಯನ ಮೂಲಕ ತನ್ನ ಮೇಲೆ ಬಟ್ಟೆ ಬಿಚ್ಚಿಸಿ ಹಲ್ಲೆ ನಡೆಸಿದ್ದಾರೆ, ಸಿಸಿಟಿವಿ ಇಲ್ಲದ ಕೋಣೆಗೆ ಕರೆದೊಯ್ದು ಬೂಟು ಕಾಲಿನಿಂದ ಒದ್ದು ಹಲ್ಲೆ ನಡೆಸಿದ್ದಾರೆ, ದೊಡ್ಡವರ ವಿರುದ್ಧ ದೂರು ಕೊಟ್ಟಿದ್ದೀಯಾ, ನಿನ್ನನ್ನು ಜೈಲಿಗೆ ಕಳಿಸದೇ ಬಿಡುವುದಿಲ್ಲ ಎಂದು ಪದೇ ಪದೇ ಹೇಳಿ ಬೆದರಿಕೆ ಹಾಕಿದ್ದಾರೆ, ರಾತ್ರಿ ವರೆಗೂ ತನ್ನ ಪತ್ನಿ, ಮಕ್ಕಳನ್ನು ಕರೆಸಿ ಠಾಣೆಯಲ್ಲಿ ಕೂರಿಸಿ ಸುಳ್ಳು ಹೇಳಿಕೆ ಪಡೆದಿದ್ದಾರೆ ಇತ್ಯಾದಿ ಆರೋಪಗಳನ್ನು ಹೊರಿಸಿ ದೂರು ನೀಡಿದ್ದಾರೆ.
ವಿಚಾರಣೆ ಸಂದರ್ಭದಲ್ಲಿ ದೈಹಿಕ ಹಲ್ಲೆ, ಪ್ರಾಣ ಬೆದರಿಕೆ, ಅಪರಾಧಿಕ ಪಿತೂರಿ, ಸುಳ್ಳು ಸಾಕ್ಷಿ ಹೇಳುವಂತೆ ಒತ್ತಾಯ ಹೇರಿದ್ದಾಗಿ ಪೊಲೀಸ್ ಅಧಿಕಾರಿಗಳ ವಿರುದ್ಧ ದೂರು ನೀಡಿದ್ದಾರೆ. ಅಲ್ಲದೆ ಕಾನೂನುಬಾಹಿರ ಕೃತ್ಯಗಳು, ಸರಕಾರಿ ಆದೇಶ ಪಾಲನೆ ಮಾಡದೆ ಕರ್ತವ್ಯ ನಿರ್ಲಕ್ಷ್ಯ ಆರೋಪ ಮಾಡಿದ್ದಾರೆ.
A complaint has been filed at the Dharmasthala Police Station against officers of the Special Investigation Team (SIT), which was formed to probe the alleged burial of hundreds of bodies and the 20-year-old mysterious incidents in Dharmasthala village.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am