ಬ್ರೇಕಿಂಗ್ ನ್ಯೂಸ್
15-11-25 10:47 pm Mangalore Correspondent ಕರಾವಳಿ
ಬೆಳ್ತಂಗಡಿ, ನ.15 : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಮೃತದೇಹಗಳನ್ನು ಹೂತಿಟ್ಟ ಆರೋಪದ ಕುರಿತು ಮತ್ತು 20 ವರ್ಷಗಳಿಂದ ನಡೆದಿರುವ ಅಸಹಜ ಪ್ರಕರಣದ ತನಿಖೆಗಾಗಿ ರಚನೆಗೊಂಡಿರುವ ಎಸ್ಐಟಿ ಅಧಿಕಾರಿಗಳ ವಿರುದ್ಧವೇ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಾಗಿದೆ.
ಸೌಜನ್ಯಾ ಪರ ಹೋರಾಟಗಾರ ಟಿ. ಜಯಂತ್ ಅವರು ಎಸ್ಐಟಿ ಅಧಿಕಾರಿಗಳ ವಿರುದ್ಧ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದಾರೆ. ಎಸ್ಐಟಿ ಅಧಿಕಾರಿಗಳಾದ ಎಸ್ಪಿ ಜಿತೇಂದ್ರ ದಯಾಮ, ಎಸ್ಪಿ ಸೈಮನ್, ಡಿವೈಎಸ್ಪಿ ಆರ್ ಜಿ. ಮಂಜುನಾಥ, ಇನ್ಸ್ ಸ್ಪೆಕ್ಟರ್ ಮಂಜುನಾಥ ಗೌಡ, ಸಬ್ ಇನ್ಸ್ಪೆಕ್ಟರ್ ಗುಣಪಾಲ್ ಅವರು ಉದ್ದೇಶಿತ ತನಿಖೆ ಮಾಡುವ ಬದಲು ಹೋರಾಟಗಾರರ ಮೇಲೆ ಕಿರುಕುಳ ನೀಡಿದ್ದಾರೆ, ಸೆ.5ರಿಂದ 13ರ ವರೆಗೆ ಗಿರೀಶ್ ಮಟ್ಟೆಣ್ಣವರ್, ಅಭಿಷೇಕ್, ವಿಠಲ ಗೌಡ ಮತ್ತು ತನಗೆ 8-10 ನೋಟಿಸ್ ನೀಡಿ ಠಾಣೆಗೆ ಕರೆಸಿ ವಿನಾಕಾರಣ ಕಿರುಕುಳ ನೀಡಿದ್ದಾರೆ, ಚಿನ್ನಯ್ಯನ ಮೂಲಕ ತನ್ನ ಮೇಲೆ ಬಟ್ಟೆ ಬಿಚ್ಚಿಸಿ ಹಲ್ಲೆ ನಡೆಸಿದ್ದಾರೆ, ಸಿಸಿಟಿವಿ ಇಲ್ಲದ ಕೋಣೆಗೆ ಕರೆದೊಯ್ದು ಬೂಟು ಕಾಲಿನಿಂದ ಒದ್ದು ಹಲ್ಲೆ ನಡೆಸಿದ್ದಾರೆ, ದೊಡ್ಡವರ ವಿರುದ್ಧ ದೂರು ಕೊಟ್ಟಿದ್ದೀಯಾ, ನಿನ್ನನ್ನು ಜೈಲಿಗೆ ಕಳಿಸದೇ ಬಿಡುವುದಿಲ್ಲ ಎಂದು ಪದೇ ಪದೇ ಹೇಳಿ ಬೆದರಿಕೆ ಹಾಕಿದ್ದಾರೆ, ರಾತ್ರಿ ವರೆಗೂ ತನ್ನ ಪತ್ನಿ, ಮಕ್ಕಳನ್ನು ಕರೆಸಿ ಠಾಣೆಯಲ್ಲಿ ಕೂರಿಸಿ ಸುಳ್ಳು ಹೇಳಿಕೆ ಪಡೆದಿದ್ದಾರೆ ಇತ್ಯಾದಿ ಆರೋಪಗಳನ್ನು ಹೊರಿಸಿ ದೂರು ನೀಡಿದ್ದಾರೆ.
ವಿಚಾರಣೆ ಸಂದರ್ಭದಲ್ಲಿ ದೈಹಿಕ ಹಲ್ಲೆ, ಪ್ರಾಣ ಬೆದರಿಕೆ, ಅಪರಾಧಿಕ ಪಿತೂರಿ, ಸುಳ್ಳು ಸಾಕ್ಷಿ ಹೇಳುವಂತೆ ಒತ್ತಾಯ ಹೇರಿದ್ದಾಗಿ ಪೊಲೀಸ್ ಅಧಿಕಾರಿಗಳ ವಿರುದ್ಧ ದೂರು ನೀಡಿದ್ದಾರೆ. ಅಲ್ಲದೆ ಕಾನೂನುಬಾಹಿರ ಕೃತ್ಯಗಳು, ಸರಕಾರಿ ಆದೇಶ ಪಾಲನೆ ಮಾಡದೆ ಕರ್ತವ್ಯ ನಿರ್ಲಕ್ಷ್ಯ ಆರೋಪ ಮಾಡಿದ್ದಾರೆ.
A complaint has been filed at the Dharmasthala Police Station against officers of the Special Investigation Team (SIT), which was formed to probe the alleged burial of hundreds of bodies and the 20-year-old mysterious incidents in Dharmasthala village.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm