ಬ್ರೇಕಿಂಗ್ ನ್ಯೂಸ್
11-08-20 04:59 am Mangalore Reporter ಕರಾವಳಿ
ಪುತ್ತೂರು, ಆಗಸ್ಟ್ 11: ತುಂಡಾಗಿ ರಸ್ತೆಯಲ್ಲಿ ಬಿದ್ದಿದ್ದ ಹೈಟೆನ್ಶನ್ ವಿದ್ಯುತ್ ತಂತಿ ತಗಲಿ ಬೈಕ್ ಸಮೇತ ಸವಾರ ಸ್ಥಳದಲ್ಲೇ ಸುಟ್ಟು ಕರಕಲಾದ ಘಟನೆ ಸುಳ್ಯ ತಾಲೂಕಿನ ಪಡ್ಪಿನಂಗಡಿಯಲ್ಲಿ ನಡೆದಿದೆ.
ಮೃತರನ್ನು ಮಂಡೆಕೋಲು ನಿವಾಸಿ ಉಮೇಶ್ ಗೌಡ (44) ಎಂದು ಗುರುತಿಸಲಾಗಿದೆ. ಸುಬ್ರಹ್ಮಣ್ಯ ಬಳಿಯ ಬಳ್ಪದಲ್ಲಿ ಆತನ ಹೆಂಡ್ತಿ ಮನೆಯಿದ್ದು ನಿನ್ನೆ ಸಂಜೆ ಬಂದಿದ್ದ ಉಮೇಶ್, ಇಂದು ನಸುಕಿನಲ್ಲಿ 4.30ಕ್ಕೆ ಮನೆಯತ್ತ ಹೊರಟಿದ್ದ. ಮನೆಯಲ್ಲಿ ಹಾಲು ಕರೆಯಲು ಇದೆಯೆಂದು ಬೈಕಿನಲ್ಲಿ ಬೇಗ ಹೊರಟಿದ್ದ ಉಮೇಶ್ ಅರ್ಧ ದಾರಿಯಲ್ಲೇ ಬಾರದ ಲೋಕಕ್ಕೆ ಹೋಗಿದ್ದಾರೆ. ನಿಂತಿಕಲ್ಲು ಬಳಿಯ ಪಡ್ಪಿನಂಗಡಿ ಎಂಬಲ್ಲಿ ರಸ್ತೆಯಲ್ಲಿ ಬಿದ್ದಿದ್ದ ವಿದ್ಯುತ್ ತಂತಿ ಮಳೆಯಿಂದ ಒದ್ದೆಯಾಗಿದ್ದ ಬೈಕಿಗೆ ಸುಲಭದಲ್ಲಿ ಪ್ರವಹಿಸಿದ್ದು ಬೆಂಕಿ ಹತ್ತಿಕೊಂಡಿದೆ. ಬೈಕ್ ಮತ್ತು ಸವಾರ ಸ್ಥಳದಲ್ಲಿಯೇ ಹೊತ್ತಿ ಉರಿದಿದ್ದು ಜೀವಂತ ದಹನವಾಗಿದ್ದಾರೆ. 5 ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಈ ಸಮಯದಲ್ಲಿ ರಸ್ತೆಯಲ್ಲಿ ಜನರ ಸಂಚಾರ ಇಲ್ಲದೇ ಇದ್ದುದರಿಂದ 6 ಗಂಟೆ ಬಳಿಕವೇ ಘಟನೆ ಸ್ಥಳೀಯರಿಗೆ ತಿಳಿದುಬಂದಿದೆ.

ಪುತ್ತೂರು - ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ವಿದ್ಯುತ್ ತಂತಿ ಹೈವೇ ರಸ್ತೆಗೆ ಅಡ್ಡಲಾಗಿ ಬಿದ್ದಿರುವುದು ಹೇಗೆ ಎನ್ನುವುದು ತಿಳಿದುಬಂದಿಲ್ಲ. ಘಟನೆ ನೋಡಿದರೆ ಬೆಚ್ಚಿ ಬೀಳುವ ರೀತಿಯಿದೆ. ಬೈಕ್ ಮತ್ತು ಅದರಲ್ಲಿನ ಸವಾರ ಬಿದ್ದಿರುವ ಜಾಗದಲ್ಲೇ ಧಗ ಧಗನೆ ಉರಿಯುವ ದೃಶ್ಯ ಮನ ಕಲಕುವಂತಿದೆ.
Video:
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm