ಬ್ರೇಕಿಂಗ್ ನ್ಯೂಸ್
11-08-20 04:59 am Mangalore Reporter ಕರಾವಳಿ
ಪುತ್ತೂರು, ಆಗಸ್ಟ್ 11: ತುಂಡಾಗಿ ರಸ್ತೆಯಲ್ಲಿ ಬಿದ್ದಿದ್ದ ಹೈಟೆನ್ಶನ್ ವಿದ್ಯುತ್ ತಂತಿ ತಗಲಿ ಬೈಕ್ ಸಮೇತ ಸವಾರ ಸ್ಥಳದಲ್ಲೇ ಸುಟ್ಟು ಕರಕಲಾದ ಘಟನೆ ಸುಳ್ಯ ತಾಲೂಕಿನ ಪಡ್ಪಿನಂಗಡಿಯಲ್ಲಿ ನಡೆದಿದೆ.
ಮೃತರನ್ನು ಮಂಡೆಕೋಲು ನಿವಾಸಿ ಉಮೇಶ್ ಗೌಡ (44) ಎಂದು ಗುರುತಿಸಲಾಗಿದೆ. ಸುಬ್ರಹ್ಮಣ್ಯ ಬಳಿಯ ಬಳ್ಪದಲ್ಲಿ ಆತನ ಹೆಂಡ್ತಿ ಮನೆಯಿದ್ದು ನಿನ್ನೆ ಸಂಜೆ ಬಂದಿದ್ದ ಉಮೇಶ್, ಇಂದು ನಸುಕಿನಲ್ಲಿ 4.30ಕ್ಕೆ ಮನೆಯತ್ತ ಹೊರಟಿದ್ದ. ಮನೆಯಲ್ಲಿ ಹಾಲು ಕರೆಯಲು ಇದೆಯೆಂದು ಬೈಕಿನಲ್ಲಿ ಬೇಗ ಹೊರಟಿದ್ದ ಉಮೇಶ್ ಅರ್ಧ ದಾರಿಯಲ್ಲೇ ಬಾರದ ಲೋಕಕ್ಕೆ ಹೋಗಿದ್ದಾರೆ. ನಿಂತಿಕಲ್ಲು ಬಳಿಯ ಪಡ್ಪಿನಂಗಡಿ ಎಂಬಲ್ಲಿ ರಸ್ತೆಯಲ್ಲಿ ಬಿದ್ದಿದ್ದ ವಿದ್ಯುತ್ ತಂತಿ ಮಳೆಯಿಂದ ಒದ್ದೆಯಾಗಿದ್ದ ಬೈಕಿಗೆ ಸುಲಭದಲ್ಲಿ ಪ್ರವಹಿಸಿದ್ದು ಬೆಂಕಿ ಹತ್ತಿಕೊಂಡಿದೆ. ಬೈಕ್ ಮತ್ತು ಸವಾರ ಸ್ಥಳದಲ್ಲಿಯೇ ಹೊತ್ತಿ ಉರಿದಿದ್ದು ಜೀವಂತ ದಹನವಾಗಿದ್ದಾರೆ. 5 ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಈ ಸಮಯದಲ್ಲಿ ರಸ್ತೆಯಲ್ಲಿ ಜನರ ಸಂಚಾರ ಇಲ್ಲದೇ ಇದ್ದುದರಿಂದ 6 ಗಂಟೆ ಬಳಿಕವೇ ಘಟನೆ ಸ್ಥಳೀಯರಿಗೆ ತಿಳಿದುಬಂದಿದೆ.

ಪುತ್ತೂರು - ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ವಿದ್ಯುತ್ ತಂತಿ ಹೈವೇ ರಸ್ತೆಗೆ ಅಡ್ಡಲಾಗಿ ಬಿದ್ದಿರುವುದು ಹೇಗೆ ಎನ್ನುವುದು ತಿಳಿದುಬಂದಿಲ್ಲ. ಘಟನೆ ನೋಡಿದರೆ ಬೆಚ್ಚಿ ಬೀಳುವ ರೀತಿಯಿದೆ. ಬೈಕ್ ಮತ್ತು ಅದರಲ್ಲಿನ ಸವಾರ ಬಿದ್ದಿರುವ ಜಾಗದಲ್ಲೇ ಧಗ ಧಗನೆ ಉರಿಯುವ ದೃಶ್ಯ ಮನ ಕಲಕುವಂತಿದೆ.
Video:
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 05:20 pm
Mangalore Correspondent
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm