ಬ್ರೇಕಿಂಗ್ ನ್ಯೂಸ್
16-11-25 10:48 pm Mangalore Correspondent ಕರಾವಳಿ
ಉಳ್ಳಾಲ, ನ.16 : ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿಯೋರ್ವ ತಾನು ನೆಲೆಸಿದ್ದ ಪಿಜಿಯಿಂದ ನಾಪತ್ತೆಯಾಗಿದ್ದು, ಆನ್ ಲೈನ್ ಗೇಮಿಂಗ್ ಆ್ಯಪಲ್ಲಿ ಲಕ್ಷಾಂತರ ರೂಪಾಯಿ ಕಳಕೊಂಡ ಹಿನ್ನಲೆಯಲ್ಲಿ ಮನನೊಂದು ನಾಪತ್ತೆಯಾಗಿರುವ ಬಗ್ಗೆ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಮಾಹಿತಿ ತಿಳಿದುಬಂದಿದೆ.
ಕೇರಳ ರಾಜ್ಯದ ಪಾಲಕ್ಕಾಡ್ ನಿವಾಸಿ ರಾಬಿಯಾ- ಅಬೂಬಕರ್ ದಂಪತಿಯ ಪುತ್ರ ಮಾಲೀಕ್ ಅಬೂಬಕರ್(19)ನಾಪತ್ತೆಯಾದ ವಿದ್ಯಾರ್ಥಿ. ಮಾಲೀಕ್ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಶಿಕ್ಷಣ ಪಡೆಯುತ್ತಿದ್ದು, ಅಲ್ಲೇ ಸಮೀಪದ ಶರೀಫ್ ಎಂಬವರ ಪಿಜಿಯಲ್ಲಿ ವಾಸವಾಗಿದ್ದ. ನ.13ರಂದು ರಾತ್ರಿ ಡಿನ್ನರ್ ಮಾಡಿ ಬರುತ್ತೇನೆಂದು ಹೇಳಿ ಪಿಜಿಯಿಂದ ಸ್ಕೂಟರಲ್ಲಿ ತೆರಳಿದ ಮಾಲೀಕ್ ಮತ್ತೆ ಹಿಂತಿರುಗದೆ ನಾಪತ್ತೆ ಆಗಿದ್ದಾನೆ. ಈ ಬಗ್ಗೆ ಮಾಲೀಕ್ ಮಾವ (ತಾಯಿಯ ತಮ್ಮ) ಫಿಸಿಯೋಥೆರಫಿ ವೈದ್ಯ ಅಝ್ಮಲ್ ಟಿ.ಎ ನೀಡಿದ ದೂರಿನಂತೆ ಉಳ್ಳಾಲ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.
ಮಾಲೀಕ್ ನ ಸ್ಕೂಟರ್ ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣದಲ್ಲಿ ಪತ್ತೆಯಾಗಿದ್ದು, ದೆಹಲಿಗೆ ತೆರಳುವ ಮಂಗಳಾ ಎಕ್ಸ್ ಪ್ರೆಸ್ ರೈಲಿನಲ್ಲಿ ಪ್ರಯಾಣಿಸಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಮಾಲೀಕ್ ಆನ್ ಲೈನ್ ಗೇಮಿಂಗ್ ಆ್ಯಪಲ್ಲಿ ಮೂರು ಲಕ್ಷ ಹಣವನ್ನು ಕಳೆದುಕೊಂಡಿದ್ದು ಆ ಕಾರಣದಿಂದಲೇ ಮನನೊಂದು ನಾಪತ್ತೆಯಾಗಿದ್ದಾನೆಂದು ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ.
A Kerala-origin student studying at a private medical college in Deralakatte has gone missing from his PG accommodation. Preliminary police investigation has revealed that he had reportedly lost several lakhs of rupees through an online gaming app and was mentally disturbed before disappearing.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am