ಬ್ರೇಕಿಂಗ್ ನ್ಯೂಸ್
29-12-20 01:11 pm Mangalore Correspondent ಕರಾವಳಿ
ಬಂಟ್ವಾಳ, ಡಿ.29 : ಬಾಯಿ ಹುಣ್ಣಿಗೆ ತೆಗೆದುಕೊಳ್ಳುತ್ತಿದ್ದ ಔಷಧಿಯ ಬದಲಾಗಿ ಖಾಲಿಯಾದ ಔಷಧಿ ಬಾಟಲಲ್ಲಿಟ್ಟಿದ್ದ ಕಳೆನಾಶಕ ಸೇವಿಸಿ ಗ್ರಾಪಂ ಚುನಾವಣೆ ಅಭ್ಯರ್ಥಿಯೊಬ್ಬರು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕಾವಳಮುಡೂರು ಗ್ರಾಮದಲ್ಲಿ ನಡೆದಿದೆ.
ಕಾವಳಮುಡೂರು ಗ್ರಾಮದ, ಅರ್ಗತ್ಯಾರು ನಿವಾಸಿ ಜಯಂತ ಪ್ರಭು(58) ಮೃತಪಟ್ಟವರು. ಡಿ.21ರಂದು ರಾತ್ರಿ 11 ಗಂಟೆಯ ವೇಳೆ ತನ್ನ ಬಾಯಿ ಹುಣ್ಣಿಗೆಂದು ತೆಗೆದುಕೊಳ್ಳುತ್ತಿದ್ದ ಔಷಧಿಯ ಬದಲಾಗಿ ಖಾಲಿಯಾಗಿದ್ದ ಔಷಧಿ ಬಾಟಲಿಯಲ್ಲಿ ಶೇಖರಿಸಿಟ್ಟಿದ್ದ ಟ್ರೈಕಾಟ್ ಎಂಬ ಹುಲ್ಲಿಗೆ ಸಿಂಪಡಣೆ ಮಾಡುವ ಕಳೆನಾಶಕ ಔಷಧಿಯನ್ನು ಸಿರಪ್ ಎಂದು ತಪ್ಪಾಗಿ ಭಾವಿಸಿ ಅಲ್ಪ ಪ್ರಮಾಣದಲ್ಲಿ ಸೇವಿಸಿದ್ದರು.
ಮರುದಿನ ಗ್ರಾ.ಪಂ. ಚುನಾವಣೆಯಲ್ಲಿ ಮತದಾನ ಮಾಡಿದ್ದರಲ್ಲದೆ ಮತಗಟ್ಟೆಯಲ್ಲೂ ಒಂದಷ್ಟು ಹೊತ್ತು ಕಳೆದು, ಕೊನೆಕ್ಷಣದ ವರೆಗೂ ಮತದಾರರ ಮನವೊಲಿಸುವಲ್ಲಿಯೂ ತೊಡಗಿದ್ದರು. ಬಳಿಕ ರಾತ್ರಿ ವೇಳೆಗೆ ದಿಢೀರ್ ಅಸ್ವಸ್ಥರಾಗಿದ್ದರೆನ್ನಲಾಗಿದ್ದು ಕೂಡಲೇ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಅವರು ಸೋಮವಾರ ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ.
ಈ ಬಗ್ಗೆ ಅವರ ಪುತ್ರ ನೀಡಿರುವ ದೂರಿನಂತೆ ಪುಂಜಾಲಕಟ್ಟೆ ಪೊಲೀಸರು ಕೇಸು ದಾಖಲಿಸಿದ್ದಾರೆ. ಜಯಂತ ಪ್ರಭು ಅವರು ಡಿ.22 ರಂದು ನಡೆದ ಗ್ರಾ.ಪಂ. ಚುನಾವಣೆಗೆ ಕಾವಳಮೂಡೂರು ಪಂಚಾಯಿತಿ ವಾರ್ಡ್ 3ರಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿದ್ದರು.
Jayanth Prabhu (58) from Bantwal lost his life on Monday, December 28 after mistakenly consuming insecticide meant to be sprayed on grass. He thought it to be a medicine he was taking for mouth ulcers.
20-03-25 10:48 pm
Bangalore Correspondent
Honey Trapped, Minister, Probe: ಅಧಿವೇಶನದಲ್ಲಿ...
20-03-25 09:52 pm
Bangalore Marriage case, Srikanth Bindushree:...
20-03-25 01:07 pm
Kalaburagi police suspended, playing cards: ಇ...
20-03-25 12:18 pm
Raichur Accident, Bike Lorry: ಬೈಕ್ಗೆ ಡಿಕ್ಕಿ...
19-03-25 04:42 pm
20-03-25 10:40 pm
HK News Desk
ಹೆದ್ದಾರಿ ಬಳಕೆದಾರರಿಗೆ ಸಿಹಿಸುದ್ದಿ ; ಟೋಲ್ ಶುಲ್ಕ...
20-03-25 07:19 pm
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
20-03-25 05:29 pm
HK News Staff
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm