ಬ್ರೇಕಿಂಗ್ ನ್ಯೂಸ್
29-12-20 01:11 pm Mangalore Correspondent ಕರಾವಳಿ
ಬಂಟ್ವಾಳ, ಡಿ.29 : ಬಾಯಿ ಹುಣ್ಣಿಗೆ ತೆಗೆದುಕೊಳ್ಳುತ್ತಿದ್ದ ಔಷಧಿಯ ಬದಲಾಗಿ ಖಾಲಿಯಾದ ಔಷಧಿ ಬಾಟಲಲ್ಲಿಟ್ಟಿದ್ದ ಕಳೆನಾಶಕ ಸೇವಿಸಿ ಗ್ರಾಪಂ ಚುನಾವಣೆ ಅಭ್ಯರ್ಥಿಯೊಬ್ಬರು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕಾವಳಮುಡೂರು ಗ್ರಾಮದಲ್ಲಿ ನಡೆದಿದೆ.
ಕಾವಳಮುಡೂರು ಗ್ರಾಮದ, ಅರ್ಗತ್ಯಾರು ನಿವಾಸಿ ಜಯಂತ ಪ್ರಭು(58) ಮೃತಪಟ್ಟವರು. ಡಿ.21ರಂದು ರಾತ್ರಿ 11 ಗಂಟೆಯ ವೇಳೆ ತನ್ನ ಬಾಯಿ ಹುಣ್ಣಿಗೆಂದು ತೆಗೆದುಕೊಳ್ಳುತ್ತಿದ್ದ ಔಷಧಿಯ ಬದಲಾಗಿ ಖಾಲಿಯಾಗಿದ್ದ ಔಷಧಿ ಬಾಟಲಿಯಲ್ಲಿ ಶೇಖರಿಸಿಟ್ಟಿದ್ದ ಟ್ರೈಕಾಟ್ ಎಂಬ ಹುಲ್ಲಿಗೆ ಸಿಂಪಡಣೆ ಮಾಡುವ ಕಳೆನಾಶಕ ಔಷಧಿಯನ್ನು ಸಿರಪ್ ಎಂದು ತಪ್ಪಾಗಿ ಭಾವಿಸಿ ಅಲ್ಪ ಪ್ರಮಾಣದಲ್ಲಿ ಸೇವಿಸಿದ್ದರು.
ಮರುದಿನ ಗ್ರಾ.ಪಂ. ಚುನಾವಣೆಯಲ್ಲಿ ಮತದಾನ ಮಾಡಿದ್ದರಲ್ಲದೆ ಮತಗಟ್ಟೆಯಲ್ಲೂ ಒಂದಷ್ಟು ಹೊತ್ತು ಕಳೆದು, ಕೊನೆಕ್ಷಣದ ವರೆಗೂ ಮತದಾರರ ಮನವೊಲಿಸುವಲ್ಲಿಯೂ ತೊಡಗಿದ್ದರು. ಬಳಿಕ ರಾತ್ರಿ ವೇಳೆಗೆ ದಿಢೀರ್ ಅಸ್ವಸ್ಥರಾಗಿದ್ದರೆನ್ನಲಾಗಿದ್ದು ಕೂಡಲೇ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಅವರು ಸೋಮವಾರ ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ.
ಈ ಬಗ್ಗೆ ಅವರ ಪುತ್ರ ನೀಡಿರುವ ದೂರಿನಂತೆ ಪುಂಜಾಲಕಟ್ಟೆ ಪೊಲೀಸರು ಕೇಸು ದಾಖಲಿಸಿದ್ದಾರೆ. ಜಯಂತ ಪ್ರಭು ಅವರು ಡಿ.22 ರಂದು ನಡೆದ ಗ್ರಾ.ಪಂ. ಚುನಾವಣೆಗೆ ಕಾವಳಮೂಡೂರು ಪಂಚಾಯಿತಿ ವಾರ್ಡ್ 3ರಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿದ್ದರು.
Jayanth Prabhu (58) from Bantwal lost his life on Monday, December 28 after mistakenly consuming insecticide meant to be sprayed on grass. He thought it to be a medicine he was taking for mouth ulcers.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
21-12-25 11:04 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
21-12-25 09:36 pm
Mangalore Correspondent
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am