ಬ್ರೇಕಿಂಗ್ ನ್ಯೂಸ್
29-12-20 03:02 pm Mangalore Correspondent ಕರಾವಳಿ
ಮಂಗಳೂರು, ಡಿ.29: ಜನವರಿ 1ರಂದು ತೊಕ್ಕೊಟ್ಟಿನಲ್ಲಿ ನಡೆಸಲು ಉದ್ದೇಶಿಸಿದ್ದ ನೂತನ ಬ್ಯಾರಿ ಅಕಾಡಮಿಯ ಕಚೇರಿ ಹಾಗೂ ಸಾಂಸ್ಕೃತಿಕ ಭವನದ ಶಿಲಾನ್ಯಾಸ ಕಾರ್ಯಕ್ರಮವನ್ನು ಕಾರಣಾಂತರದಿಂದ ಮುಂದೂಡಲಾಗಿದೆ ಎಂದು ಅಕಾಡಮಿಯ ಅಧ್ಯಕ್ಷ ರಹೀಂ ಉಚ್ಚಿಲ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಅಬ್ಬಕ್ಕ ಭವನಕ್ಕೆ ಮೀಸಲಾದ ಜಾಗದಲ್ಲೇ ಬ್ಯಾರಿ ಅಕಾಡೆಮಿ ಸಾಂಸ್ಕೃತಿಕ ಭವನ ನಿರ್ಮಾಣವಾಗಲಿದೆ ಎಂದು ಸ್ಥಳೀಯ ಶಾಸಕ ಯು.ಟಿ.ಖಾದರ್ ಪತ್ರಿಕೆಯೊಂದಕ್ಕೆ ನೀಡಿದ ಹೇಳಿಕೆಯಿಂದಾಗಿ ಗೊಂದಲ ಸೃಷ್ಟಿಯಾಗಿದೆ. ಇದರಿಂದ ಅಸಮಾಧಾನಗೊಂಡ ಅಬ್ಬಕ್ಕ ಅಭಿಮಾನಿಗಳು ಭವನ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಬ್ಯಾರಿ ಭವನಕ್ಕೆ ನೀಡಿರುವ ಜಾಗಕ್ಕೂ ಅಬ್ಬಕ್ಕ ಭವನಕ್ಕೆ ನೀಡಿರುವ ಜಾಗಕ್ಕೂ ವ್ಯತ್ಯಾಸ ಇದೆ. ಶಾಸಕರು ಜನರಲ್ಲಿ ಗೊಂದಲ ಎಬ್ಬಿಸಿದ್ದಾರೆ ಎಂದರು.
ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಬಿ.ಎ.ಮುಹಮ್ಮದ್ ಹನೀಫ್ ಹೇಳಿಕೆ ನೀಡಿ, ಬೆಂಗಳೂರಿನಲ್ಲಿ ಭವನ ನಿರ್ಮಾಣವಾಗಿರುವ ಬಗ್ಗೆ ತಿಳಿಸಿದ್ದಾರೆ. ಆದರೆ, ಬೆಂಗಳೂರಿನಲ್ಲಿರುವ ಭವನ 25 ವರ್ಷಗಳಿಂದ ನನೆಗುದ್ದಿಗೆ ಬಿದ್ದಿದ್ದು ಅದು ಬ್ಯಾರೀಸ್ ವೆಲ್ಫೇರ್ ಅಸೋಸಿಯೇಶನ್ ಗೆ ಸೇರಿದ ಖಾಸಗಿ ಭವನ. ನಾವು ಮಾಡಲು ಹೊರಟಿರುವುದು ಸರಕಾರದ ಭವನ. ಸರಕಾರದ ವತಿಯಿಂದ ಅಕಾಡೆಮಿ ನಿರ್ಮಿಸುವುದಕ್ಕೂ ಖಾಸಗಿಯ ಭವನಕ್ಕೂ ವ್ಯತ್ಯಾಸ ಇಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ.

ಅಬ್ಬಕ್ಕ ಭವನಕ್ಕೆ ಮೀಸಲಾದ 42 ಸೆಂಟ್ಸ್ ಸ್ಥಳ ಪ್ರತ್ಯೇಕ ಇದೆ. ಬ್ಯಾರಿ ಭವನಕ್ಕೆ ಮೀಸಲಾದ ಜಮೀನಿಗೆ ಯಾವುದೇ ಸಂಬಂಧವಿಲ್ಲ. ಪಕ್ಕದಲ್ಲೇ ಇರುವ ಗ್ರಾಮಕರಣಿಕರು ಮತ್ತು ಸರ್ವೇಯರ್ ಕಚೇರಿಗೆ ಮೀಸಲಿರಿಸಿದ್ದ 25 ಸೆಂಟ್ ಸ್ಥಳದಲ್ಲಿ ಅಕಾಡಮಿಯ ಕಚೇರಿ ಹಾಗೂ ಸಾಂಸ್ಕೃತಿಕ ಭವನ ನಿರ್ಮಿಸಲು ಯೋಜನೆ ಹಾಕಿದ್ದು, ಇದೇ ಕಟ್ಟಡದಲ್ಲಿ ಗ್ರಾಮಕರಣಿಕರ ಹಾಗೂ ಸರ್ವೇಯರ್ ಕಚೇರಿ ತಲೆ ಎತ್ತಲಿದೆ. ಇದನ್ನು ಅಬ್ಬಕ್ಕ ಉತ್ಸವ ಸಮಿತಿಗೆ ಮನವರಿಕೆ ಮಾಡಿದ್ದೇವೆ ಎಂದರು.
ಯಾವುದೇ ಸಮಾಜಕ್ಕೆ ನೋವನ್ನುಂಟು ಮಾಡಿ ಶಿಲಾನ್ಯಾಸ ಕಾರ್ಯಕ್ರಮ ನಡೆಸುವುದು ಸಮಂಜಸವಲ್ಲ ಎಂದು ಭಾವಿಸಿ ಎಲ್ಲರ ಮನ ಒಲಿಸಿ ಅಬ್ಬಕ್ಕ ಭವನಕ್ಕೂ ನ್ಯಾಯ ಒದಗಿಸುವಂತೆ ಸರಕಾರಕ್ಕೆ ಮನವಿ ಸಲ್ಲಿಸಿ ಅಕಾಡೆಮಿಯ ಶಿಲಾನ್ಯಾಸ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ರಹೀಂ ಉಚ್ಚಿಲ್ ಸ್ಪಷ್ಟಪಡಿಸಿದರು.
ಕೆಲವರು ಇದು ಒಂದು ಧರ್ಮೀಯರಿಗೆ ಸೇರಿದ ಭವನವಾಗಲಿದೆ ಎಂಬ ಅಪಪ್ರಚಾರ ನಡೆಸುತ್ತಿದ್ದು, ಇದು ಸತ್ಯಕ್ಜೆ ದೂರವಾಗಿದೆ. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಸೇರಿದಂತೆ ಹಲವು ಅಕಾಡೆಮಿಗಳು ಕನ್ನಡ ಸಂಸ್ಕೃತಿ ಇಲಾಖೆಯ ಅಧೀನದಲ್ಲಿವೆ. ಭಾಷೆ ಕಲೆ ಸಾಹಿತ್ಯದ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡುತ್ತಿದ್ದು ಯಾವುದೇ ಧಾರ್ಮಿಕ ಕೆಲಸ ಕಾರ್ಯಗಳಿಗೆ ಉತ್ತೇಜನ ನೀಡುತ್ತಿಲ್ಲ. ಮೂರನೇ ಅಂತಸ್ತಿನಲ್ಲಿ ಗ್ರಾಮಕರಣಿಕರ ಹಾಗೂ ಸರ್ವೇಯರ್ ಕಚೇರಿ ಕಾರ್ಯನಿರ್ವಹಿಸಲಿದ್ದು, ಸಾರ್ವಜನಿಕರು ನೀಲ ನಕ್ಷೆಯನ್ನು ವೀಕ್ಷಿಸ ಬಹುದಾಗಿದೆ ಎಂದು ರಹೀಂ ಉಚ್ಚಿಲ್ ತಿಳಿಸಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಅಕಾಡಮಿಯ ರಿಜಿಸ್ಟ್ರಾರ್ ಪೂರ್ಣಿಮಾ, ಸದಸ್ಯರಾದ ರೂಪಾಶ್ರೀ ವರ್ಕಾಡಿ, ರೂಪೇಶ್ ಉಪಸ್ಥಿತರಿದ್ದರು.
The plan for Beary Bhavana in Thokottu has received large Opposition and hence the foundation laying ceremony has been postponed states president Rahim Uchil.
09-05-26 10:41 pm
HK News Desk
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am