ಬ್ರೇಕಿಂಗ್ ನ್ಯೂಸ್
03-12-25 11:54 am Mangaluru Staffer ಕರಾವಳಿ
ಮಂಗಳೂರು, ಡಿ.3: ರಾಜ್ಯದಲ್ಲಿ ಅಧಿಕಾರ ಹಂಚಿಕೆ, ಸಿಎಂ ಬದಲಾವಣೆ ಕೂಗು ಜೋರಾಗಿರುವ ಹೊತ್ತಲ್ಲೇ ಸಿಎಂ ಸಿದ್ದರಾಮಯ್ಯ ಮತ್ತು ಎಐಸಿಸಿ ಸೆಕ್ರೆಟರಿ ಕೆ.ಸಿ ವೇಣುಗೋಪಾಲ್ ಮಂಗಳೂರು ಏರ್ಪೋರ್ಟ್ ಆಗಮಿಸಿದ ವೇಳೆ ಬೆಂಬಲಿಗರು ಪ್ರತ್ಯೇಕವಾಗಿ ಡಿಕೆಶಿ ಮತ್ತು ಸಿದ್ದರಾಮಯ್ಯ ಪರವಾಗಿ ಘೋಷಣೆ ಕೂಗಿದ್ದಾರೆ.
ಮಂಗಳೂರಿನ ಕೋಣಾಜೆಯಲ್ಲಿ ಗಾಂಧಿ- ನಾರಾಯಣ ಗುರು ಸಂವಾದ ಶತಮಾನ ಕಾರ್ಯಕ್ರಮಕ್ಕಾಗಿ ಸಿಎಂ ಸಿದ್ದರಾಮಯ್ಯ ಮತ್ತು ಕೆ.ಸಿ ವೇಣುಗೋಪಾಲ್ ಮಂಗಳೂರಿಗೆ ಆಗಮಿಸಿದ್ದಾರೆ. ಮೊದಲಿಗೆ, ಬೆಳಗ್ಗೆ 10.30ರ ವೇಳೆಗೆ ವೇಣುಗೋಪಾಲ್ ಏರ್ಪೋರ್ಟ್ ಆಗಮಿಸಿದ್ದು ವಿಮಾನ ನಿಲ್ದಾಣದಿಂದ ಹೊರ ಬರುತ್ತಿದ್ದಂತೆ ಕಾಂಗ್ರೆಸ್ ಮುಖಂಡ ಮಿಥುನ್ ರೈ ಶಾಲು ಹೊದಿಸಿ ಸ್ವಾಗತಿಸಿದ್ದು ಈ ವೇಳೆ, ಡಿಕೆ ಡಿಕೆ ಎಂದು ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ.



ವೇಣುಗೋಪಾಲ್ ಹೊರಗೆ ಬಂದು ಕಾರು ಹತ್ತುವಾಗಲೂ ಸುತ್ತುವರಿದ ಕಾರ್ಯಕರ್ತರು ಡಿಕೆಶಿ ಸಿಎಂ ಆಗಬೇಕೆಂದು ಮಿಥುನ್ ರೈ ನೇತೃತ್ವದಲ್ಲಿ ಘೋಷಣೆ ಹಾಕಿದ್ದಾರೆ. ಇದೇ ವೇಳೆ, ಮಾತನಾಡಿದ ಮಿಥುನ್ ರೈ, ಸಿದ್ದರಾಮಯ್ಯ ಅವರು ನಾಡು ಕಂಡ ಅದ್ಭುತ ವ್ಯಕ್ತಿ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ಅಧಿಕಾರ ಹಂಚಿಕೆಯಾಗಿ ಡಿಕೆಶಿ ಸಿಎಂ ಆಗೋದಾದರೆ ನಾವು ಅತಿ ಹೆಚ್ಚು ಸಂತೋಷ ಪಡುತ್ತೇವೆ. ಇದಕ್ಕಾಗಿ ಡಿಕೆ ಪರವಾಗಿ ಘೋಷಣೆ ಕೂಗಿದ್ದೇವೆ ಎಂದು ಹೇಳಿದರು.
ಆನಂತರ, 11 ಗಂಟೆ ವೇಳೆಗೆ ಸಿಎಂ ಸಿದ್ದರಾಮಯ್ಯ ಮಂಗಳೂರು ಏರ್ಪೋರ್ಟ್ ಬಂದಿದ್ದು ವಿಮಾನ ನಿಲ್ದಾಣದಿಂದ ಹೊರ ಬರುತ್ತಿದ್ದಂತೆ ಸಿದ್ದರಾಮಯ್ಯ ಪರವಾಗಿಯೂ ಘೋಷಣೆ ಕೇಳಿಬಂದಿದೆ. ಮಾಜಿ ಎಂಎಲ್ಲಿ ಐವಾನ್ ಡಿಸೋಜ ನೇತೃತ್ವದಲ್ಲಿ ಬೆಂಬಲಿಗರು ಘೋಷಣೆ ಹಾಕಿದ್ದು ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಸಿಎಂ ಆಗಬೇಕೆಂದು ಜೈಕಾರ ಹಾಕಿದ್ದಾರೆ. ಸಿದ್ದರಾಮಯ್ಯ ಅವರು ಕೈ ಸನ್ನೆ ಮೂಲಕ ಘೋಷಣೆ ಬೇಡವೆಂದರೂ ಘೋಷಣೆ ಹಾಕಿದ್ದಾರೆ. ಆಮೂಲಕ ಡಿಕೆ ಪರ ಘೋಷಣೆಗೆ ಪ್ರತಿಯಾಗಿ ಸಿದ್ದು ಸಿದ್ದು ಎಂದು ಘೋಷಣೆ ಕೂಗಿದ್ದಲ್ಲದೆ, ಸಿಎಂ ಮತ್ತು ಡಿಸಿಎಂ ಡಿನ್ನರ್ ಮೀಟಿಂಗ್ ಆದ್ರೂ ಅಧಿಕಾರ ಹಂಚಿಕೆ ವಿಷಯ ಇತ್ಯರ್ಥ ಆಗಿಲ್ಲ ಎನ್ನುವುದನ್ನು ತೋರಿಸಿದಂತಾಗಿದೆ.
Power showdown in Karnataka: As K.C. #Venugopal landed in #Mangaluru, crowds erupted in “DK! DK!” chants — a clear show of strength behind D. K. Shivakumar demanding the top job. Meanwhile, Siddaramaiah arrives with ministers by his side. #Karnataka #CongressCrisis #DKShivakumar pic.twitter.com/LEQ24bOEQl
— Headline Karnataka (@hknewsonline) December 3, 2025
At a time when debates over power-sharing and a possible change in the Chief Ministership are intensifying in Karnataka, the arrival of Chief Minister Siddaramaiah and AICC General Secretary KC Venugopal at the Mangaluru International Airport today witnessed dramatic scenes. Supporters raised competing slogans favouring both Deputy Chief Minister DK Shivakumar and Chief Minister Siddaramaiah.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am