ಬ್ರೇಕಿಂಗ್ ನ್ಯೂಸ್
06-12-25 06:12 pm Mangalore Correspondent ಕರಾವಳಿ
ಪುತ್ತೂರು, ಡಿ.6 : ತಡರಾತ್ರಿ ವೇಳೆ ಅಕ್ರಮವಾಗಿ ಮನೆಯೊಂದಕ್ಕೆ ನುಗ್ಗಿ ಮನೆಯ ಸದಸ್ಯರಿಗೆ ಹಲ್ಲೆ ನಡೆಸಿದ ಆರೋಪದಲ್ಲಿ ಕಡಬ ಠಾಣೆಯ ಹೆಡ್ ಕಾನ್ಸ್ಟೇಬಲ್ ರಾಜು ನಾಯ್ಕ ಎಂಬಾತನನ್ನು ಅದೇ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ, ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ಸದ್ರಿ ವ್ಯಕ್ತಿಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಕಡಬ ತಾಲೂಕು ಕೊಯಿಲ ನಿವಾಸಿ ಬಾಬು ಗೌಡ ಎಂಬವರ ದೂರಿನಂತೆ, ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮನೆಯ ಸಮೀಪದ ಸಹೋದರ ಹರೀಶ ಗೌಡರ ಮನೆಗೆ ತಡರಾತ್ರಿ ಅಪರಿಚಿತ ವ್ಯಕ್ತಿಯೊಬ್ಬ ಅಕ್ರಮ ಪ್ರವೇಶಿಸಿದ್ದು ಈ ವೇಳೆ ಮನೆಯ ಸದಸ್ಯರು ಆತನನ್ನು ಹಿಡಿದುಕೊಂಡಿದ್ದರು. ಆದರೆ ಆತ ತಪ್ಪಿಸಿಕೊಳ್ಳುವ ಉದ್ದೇಶದಿಂದ ಮನೆಯ ಸದಸ್ಯ ಚೇತನ್ ಎಂಬಾತನಿಗೆ ಕೈಯಿಂದ ಹಲ್ಲೆ ಮಾಡಿದ್ದಾನೆ.
ಈ ವೇಳೆ ವ್ಯಕ್ತಿಯನ್ನು ಉಳಿದವರ ಸಹಾಯದಿಂದ ಹಿಡಿದು ವಿಚಾರಿಸಿದಾಗ ಅಪರಿಚಿತ ವ್ಯಕ್ತಿ ಕಡಬ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ರಾಜು ನಾಯ್ಕ ಎಂಬುದಾಗಿ ತಿಳಿದು ಬಂದಿತ್ತು. ರಾಜು ನಾಯ್ಕ ತಡರಾತ್ರಿ ಮನೆಯೊಳಗೆ ಅಕ್ರಮವಾಗಿ ಪ್ರವೇಶ ಮಾಡಿ, ಮನೆಯ ಸದಸ್ಯರಿಗೆ ಕೈಯಿಂದ ಹಲ್ಲೆ ನಡೆಸಿದ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ. ಆರೋಪಿ ರಾಜು ನಾಯ್ಕ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ತಕ್ಷಣದಿಂದಲೇ ಕರ್ತವ್ಯದಿಂದ ಅಮಾನತುಗೊಳಿಸಲಾಗಿರುತ್ತದೆ ಎಂದು ದ.ಕ. ಜಿಲ್ಲಾ ಪೊಲೀಸ್ ಪ್ರಕಟಣೆ ತಿಳಿಸಿದೆ.
A head constable from the Kadaba Police Station, Raju Naik, was arrested after he allegedly illegally entered a house late at night and assaulted a family member. The incident took place in Koyila, Kadaba taluk.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am