ಬ್ರೇಕಿಂಗ್ ನ್ಯೂಸ್
07-12-25 03:02 pm Mangalore Correspondent ಕರಾವಳಿ
ಮಂಗಳೂರು, ಡಿ.7 : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಬಳಿಕ ದೆಹಲಿ ಆರ್ಥಿಕ ಅಪರಾಧ ಪೊಲೀಸರು ಡಿಕೆಶಿ ಆಪ್ತ ಮಂಗಳೂರಿನ ಕಾಂಗ್ರೆಸ್ ಮುಖಂಡ ಇನಾಯತ್ ಆಲಿ ಅವರಿಗೂ ನೊಟೀಸ್ ಜಾರಿ ಮಾಡಿದ್ದಾರೆ.
ಕೆಪಿಸಿಸಿ ಸೆಕ್ರೆಟರಿ ಆಗಿರುವ ಇನಾಯತ್ ಆಲಿಗೆ ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗದಿಂದ ತನಿಖೆಗೆ ಹಾಜರಾಗುವಂತೆ ನೊಟೀಸ್ ಜಾರಿಯಾಗಿದೆ. ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ನೀಡಿರುವ ದೂರಿನ ಮೇರೆಗೆ ದಿಲ್ಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗ ಎಫ್ಐಆರ್ ದಾಖಲಿಸಿತ್ತು. ಅ.3ರಂದು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಮೇಲೆ ಪ್ರಕರಣ ದಾಖಲಿಸಿಕೊಂಡಿತ್ತು. ಅದೇ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಅವರ ಸೋದರ ಡಿಕೆ ಸುರೇಶ್ ಗೆ ನೊಟೀಸ್ ಜಾರಿಯಾಗಿತ್ತು.
ಸದ್ಯ ಡಿಕೆಶಿ ಜೊತೆಗೆ ವ್ಯವಹಾರ ಪಾಲುದಾರಿಕೆ ಹೊಂದಿರುವ ಇನಾಯತ್ ಅಲಿಗೂ ದೆಹಲಿ ಪೊಲೀಸರು ತನಿಖೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ. ಒಂದು ವಾರದದೊಳಗೆ ತನಿಖೆಗೆ ಹಾಜರಾಗುವಂತೆ ಮಂಗಳೂರಿನ ಮನೆಗೆ ಬಂದು ದೆಹಲಿ ಪೊಲೀಸರು ನೋಟಿಸ್ ನೀಡಿ ಹೋಗಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಇಡಿ ಸಂಸ್ಥೆಯಿಂದ ಕಳೆದ ಹಲವು ವರ್ಷಗಳಿಂದ ಇನಾಯತ್ ಅಲಿ ತನಿಖೆಯಾಗಿತ್ತು. ಅದರ ಮುಂದುವರಿದ ಭಾಗವಾಗಿ ಇದೀಗ ದೆಹಲಿ ಆರ್ಥಿಕ ಅಪರಾಧ ವಿಭಾಗದ ಪೊಲೀಸರು ತನಿಖೆಗೆ ಕರೆದಿದ್ದಾರೆ. ನ್ಯಾಷನಲ್ ಹೆರಾಲ್ಡ್ ಸಂಸ್ಥೆಗೆ ಇನಾಯತ್ ಅಲಿ ಕೂಡಾ ಆರ್ಥಿಕ ಸಹಾಯ ಒದಗಿಸಿದ್ದರು ಎಂಬ ಮಾಹಿತಿ ಇದ್ದು ಈಗ ಸಂಕಷ್ಟ ಎದುರಾಗಿದೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಮಂಗಳೂರು ಉತ್ತರ ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿ ಕಾಂಗ್ರೆಸಿನಿಂದ ಸ್ಪರ್ಧಿಸಿ ಇನಾಯತ್ ಆಲಿ ಪರಾಜಿತರಾಗಿದ್ದರು. ವೈಯಕ್ತಿಕ ಹಿನ್ನೆಲೆ, ಕಾಂಗ್ರೆಸ್ ಪಕ್ಷದೊಂದಿಗಿನ ಸಂಬಂಧ, ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ನೀಡಿದ ದೇಣಿಗೆ ಬಗ್ಗೆ ಪ್ರಮಾಣಪತ್ರ ನೀಡುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಯಾವ ರೀತಿಯಲ್ಲಿ ದೇಣಿಗೆ ಕೊಡಲಾಗಿದೆ ಮತ್ತು ಈ ಹಣ ಯಾವುದಕ್ಕೆ ಬಳಕೆಯಾಗಿದೆ ಎಂಬುದು ಗೊತ್ತಿದೆಯೇ ಎಂಬ ವಿವರಗಳನ್ನು ಕೇಳಿ ನೊಟೀಸ್ ನೀಡಿದ್ದಾರೆ.
In the ongoing National Herald case, the Delhi Police’s Economic Offences Wing (EOW) has now issued a notice to Inayat Ali, a close associate of Karnataka Deputy Chief Minister DK Shivakumar and KPCC Secretary. The notice was personally delivered to Ali at his Mangaluru residence, directing him to appear before investigators within a week.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am