ಬ್ರೇಕಿಂಗ್ ನ್ಯೂಸ್
08-12-25 11:23 am Mangalore Correspondent ಕರಾವಳಿ
ಮಂಗಳೂರು, ಡಿ.8 : ಇಂಡಿಗೋ ವಿಮಾನ ಸೇವೆಯ ಬಿಕ್ಕಟ್ಟು ಮುಂದುವರೆದಿದ್ದು, ಮಂಗಳೂರು ಏರ್ಪೋರ್ಟ್ ನಿಂದ ಬೆಂಗಳೂರು, ಮುಂಬೈಗೆ ಹೋಗಬೇಕಿದ್ದ ಬಹುತೇಕ ವಿಮಾನಗಳನ್ನು ಡಿ.13ರ ವರೆಗೆ ರದ್ದುಪಡಿಸಲಾಗಿದೆ. ಡಿಸೆಂಬರ್ 8 ರಿಂದ 13ರ ವರೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮತ್ತು ಹೊರಡುವ ಒಟ್ಟು 44 ವಿಮಾನಗಳು ರದ್ದಾಗಿವೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮಂಗಳೂರು-ಬೆಂಗಳೂರು, ಬೆಂಗಳೂರು-ಮಂಗಳೂರು, ಮಂಗಳೂರು-ಮುಂಬೈ, ಮುಂಬೈ-ಮಂಗಳೂರು ನಡುವೆ ಇಂಡಿಗೋ ವಿಮಾನ ಸಂಚಾರ ಇರುವುದಿಲ್ಲ ಎಂದು ವಿಮಾನ ನಿಲ್ದಾಣ ಮೂಲಗಳು ತಿಳಿಸಿವೆ. ಮಂಗಳೂರಿನಿಂದ ಹೊರ ರಾಷ್ಟ್ರಗಳಿಗೂ ಇಂಡಿಗೋ ವಿಮಾನ ಸಂಚಾರ ಇಲ್ಲ. ಕೇವಲ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನಗಳು ದೇಶೀಯ ಹಾಗೂ ಅಂತಾರಾಷ್ಟ್ರೀಯ ಸಂಚಾರ ನಡೆಸುತ್ತಿವೆ.
ಕಳೆದ ಮೂರು ದಿನಗಳಿಂದ ಇಂಡಿಗೋ ವಿಮಾನ ಸಂಚಾರ ರದ್ದತಿಯಿಂದಾಗಿ ದೇಶೀಯ ಪ್ರಯಾಣಕ್ಕೆ ಭಾರೀ ತೊಂದರೆಯಾಗಿದ್ದು ಪ್ರಯಾಣಿಕರು ಸಂಕಷ್ಟಕ್ಕೀಡಾಗಿದ್ದಾರೆ. ಈ ನಡುವೆ, ಕೇಂದ್ರ ಸರ್ಕಾರ ಇಂಡಿಗೋ ಸಂಸ್ಥೆಗೆ ಚಾಟಿ ಬೀಸಿದ ಬಳಿಕ ಟಿಕೆಟ್ ಬುಕ್ಕಿಂಗ್ ಹಣವನ್ನು ಮರಳಿಸಲಾಗುತ್ತಿದೆ. ಮೂರು ದಿನಗಳಲ್ಲಿ ದೇಶಾದ್ಯಂತ 650 ವಿಮಾನಗಳು ರದ್ದುಗೊಂಡಿದ್ದು ದೆಹಲಿ, ಮುಂಬೈ, ಹೈದ್ರಾಬಾದ್, ಬೆಂಗಳೂರಿನಲ್ಲಿ ತೀವ್ರ ಬಿಕ್ಕಟ್ಟು ಎದುರಾಗಿದೆ. ಇದೇ ವೇಳೆ, 610 ಕೋಟಿ ರೂಪಾಯಿ ಟಿಕೆಟ್ ಬುಕ್ಕಿಂಗ್ ಹಣವನ್ನು ಮರಳಿಸಲಾಗಿದೆ ಎಂದು ಇಂಡಿಗೋ ಮಾಹಿತಿ ನೀಡಿದೆ.
ಇಂಡಿಗೋ ವಿಮಾನ ಸಂಸ್ಥೆಯಲ್ಲಾದ ತೊಂದರೆ ಬಗ್ಗೆ ಪೈಲಟ್ಗಳು ಪತ್ರ ಬರೆದಿದ್ದು ಇಂದಿನ ಬಿಕ್ಕಟ್ಟಿಗೆ ಆಡಳಿತ ಮಂಡಳಿ ಮತ್ತು ಸಿಇಓ ಕಾರಣ ಎಂದು ದೂರಿದೆ. ದೇಶದ ನಾಗರಿಕರು ಮತ್ತು ಆಡಳಿತ ಮಂಡಳಿಗೆ ಬರೆದ ಪತ್ರದಲ್ಲಿ ಕಾರ್ಯಾಚರಣೆ ವೈಫಲ್ಯಕ್ಕೆ ಸಿಇಓ ಪೀಟರ್ ಎಲ್ಬರ್ಟ್ ನಿರ್ಧಾರಗಳು ಕಾರಣ. ಕಳೆದ ಒಂದು ವರ್ಷದಿಂದ ಹೊಂದಾಣಿಕೆ ಇಲ್ಲದ ಪಾಳಿಗಳು, ನಿದ್ದೆಯಿಲ್ಲದ ರಾತ್ರಿಗಳು, ಸೂಕ್ತ ವೇತನ ನೀಡದ ನಿಯಮಗಳು, ಸಿಬಂದಿಯನ್ನು ಅವಮಾನಿಸಿದ ನಡೆಗಳಿಂದಾಗಿ ಸಂಸ್ಥೆಗೆ ಈ ಸ್ಥಿತಿ ಬಂದಿದೆ ಎಂದು ಹೇಳಿದ್ದಾರೆ.
ಇದೇ ವೇಳೆ, ಇಂಡಿಗೋ ಸಂಸ್ಥೆಯ ಮೂಲ ಕಂಪನಿ ಇಂಟರ್ ಗ್ಲೋಬ್ ಏವಿಯೇಷನ್, ಅವ್ಯವಸ್ಥೆ ಸರಿಪಡಿಸಲು ತುರ್ತು ನಿರ್ವಹಣಾ ತಂಡವನ್ನು ರಚಿಸಿದೆ. ಕೇಂದ್ರದಿಂದ 24 ಗಂಟೆ ಕಾರ್ಯಾಚರಣೆ ಸಲುವಾಗಿ ಸಮನ್ವಯ ಕೇಂದ್ರ ರಚಿಸಲಾಗಿದೆ. ಅಲ್ಲದೆ, ವಿಮಾನ ರದ್ದುಪಡಿಸುವ ಬಗ್ಗೆ ಎರಡು ದಿನ ಮೊದಲೇ ಮಾಹಿತಿ ನೀಡಲು ಖಡಕ್ ಸೂಚನೆಗಳನ್ನು ನೀಡಿದೆ. ಇದರಂತೆ, ಏರ್ಪೋರ್ಟ್ ನಲ್ಲಿ ಪ್ರಯಾಣಿಕರ ದಟ್ಟಣೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ.
The ongoing IndiGo crisis has led to the cancellation of 44 flights to and from Mangaluru International Airport until December 13. Pilots have accused the airline’s management and CEO of operational failures, citing poor scheduling, lack of rest, and staff mistreatment. The central government has directed IndiGo to refund ticket fares, with ₹610 crore already refunded nationwide.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm