ಬ್ರೇಕಿಂಗ್ ನ್ಯೂಸ್
09-12-25 11:55 am Udupi Correspondent ಕರಾವಳಿ
ಉಡುಪಿ, ಡಿ.9 : ಉದ್ಯಾವರದಲ್ಲಿ ಅಸ್ವಸ್ಥಗೊಂಡ ರೋಗಿಯೊಬ್ಬರಿಗೆ ರಾತ್ರಿ 7 ಗಂಟೆಯಿಂದ 9.30ರ ವರೆಗು ಯಾವುದೇ ಆಂಬ್ಯುಲೆನ್ಸ್ ಸಿಗದೆ ಬೇಸತ್ತ ಸಾಮಾಜಿಕ ಕಾರ್ಯಕರ್ತರೊಬ್ಬರು ತನ್ನ ಗೂಡ್ಸ್ ಟೆಂಪೋದಲ್ಲಿ ಮಂಚ ಇಟ್ಟು ರೋಗಿಯನ್ನು ಆಸ್ಪತ್ರೆಗೆ ದಾಖಲಿಸಿದ ಘಟನೆ ನಡೆದಿದೆ.
ರೋಗಿಯ ಸಂಬಂಧಪಟ್ಟವರು 108 ಆಂಬ್ಯು ಲೆನ್ಸ್ಗೆ ಕರೆ ಮಾಡಿದಾಗ ಆಂಬ್ಯುಲೆನ್ಸ್ ಲಭ್ಯವಿರಲಿಲ್ಲ. ಖಾಸಗಿ ಆಂಬ್ಯುಲೆನ್ಸ್ಗಳು ಕೂಡ ಲಭ್ಯವಿಲ್ಲದಿರುವುದರಿಂದ ರೋಗಿಯ ಕಡೆಯವರು ಸಾಮಾಜಿಕ ಕಾರ್ಯಕರ್ತ ವಿಶು ಶೆಟ್ಟಿ ಅಂಬಲಪಾಡಿ ಅವರನ್ನು ಸಂಪರ್ಕಿಸಿದ್ದರು. .
ವಿಶು ಶೆಟ್ಟಿ ಕೂಡ ಖಾಸಗಿ ಆಂಬ್ಯುಲೆನ್ಸ್ ಸಂಪರ್ಕಿಸಿದ್ದು, ಆಂಬ್ಯುಲೆನ್ಸ್ ಸಿಗದೇ ಇರುವುದರಿಂದ ರೋಗಿ ತೀರಾ ಚಿಂತಾಜನಕ ಸ್ಥಿತಿಗೆ ತಲುಪಿದ್ದರು. ಬೇರೆ ದಾರಿ ಕಾಣದೇ ತನ್ನ ಗೂಡ್ಸ್ ಟೆಂಪೋಗೆ ಮಂಚ ಇಟ್ಟು ಅದರಲ್ಲಿ ರೋಗಿಯನ್ನು ಮಲಗಿಸಿ ಜಿಲ್ಲಾಸ್ಪತ್ರೆಗೆ ತಲುಪಿಸಿದ್ದಾರೆ.
ಕಳೆದೊಂದು ವರ್ಷದಿಂದ 108 ಆಂಬ್ಯುಲೆನ್ಸ್ ಸರಿಯಾಗಿ ಲಭ್ಯ ಇಲ್ಲದಿರುವುದರಿಂದ ನೂರಾರು ರೋಗಿಗಳು ಸರಿಯಾದ ಸಮಯದಲ್ಲಿ ಚಿಕಿತ್ಸೆ ಸಿಗದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಕಳೆದ ಒಂದು ವರ್ಷದಿಂದ ಸರಕಾರದ ಗಮನಕ್ಕೆ ತಂದರೂ ಯಾವುದೇ ಪ್ರಯೋಜನ ಆಗಿರಲಿಲ್ಲ. ಈ ಘಟನೆಯಲ್ಲಿ ಎರಡೂವರೆ ಗಂಟೆ ಆಂಬ್ಯುಲೆನ್ಸ್ ಸಿಗದೆ ರೋಗಿ ಚಿಂತಾಜನಕ ಪರಿಸ್ಥಿತಿ ತಲುಪಿದ್ದು, ವಿಧಿ ಇಲ್ಲದೇ ಗೂಡ್ಸ್ ಟೆಂಪೋದಲ್ಲಿ ರೋಗಿಯನ್ನು ಕರೆದುಕೊಂಡು ಹೋಗಬೇಕಾಯಿತು. ಇನ್ನಾದರೂ ಜಿಲ್ಲಾಡಳಿತ ಈ ಬಗ್ಗೆ ತುರ್ತು ಕ್ರಮ ತೆಗೆದುಕೊಳ್ಳಬೇಕು ಎಂದು ವಿಶು ಶೆಟ್ಟಿ ಅಂಬಲಪಾಡಿ ಆಗ್ರಹಿಸಿದ್ದಾರೆ.
A shocking incident unfolded in Udyavara, Udupi, where a critically ill patient had to be transported to the hospital in a goods tempo fitted with a cot, after waiting two and a half hours for an ambulance that never arrived.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm