ಬ್ರೇಕಿಂಗ್ ನ್ಯೂಸ್
09-12-25 05:21 pm Mangalore Correspondent ಕರಾವಳಿ
ಮಂಗಳೂರು, ಡಿ.9 : ಕಾಂತಾರ ಚಿತ್ರದ ಮೂಲಕ ದೈವಾರಾಧನೆಯನ್ನು ಮಾರ್ಕೆಟ್ ಮಾಡುತ್ತಿದ್ದಾರೆಂದು ನಟ, ನಿರ್ದೇಶಕ ರಿಷಬ್ ಶೆಟ್ಟಿ ಬಗ್ಗೆ ತೀವ್ರ ಟೀಕೆ ಕೇಳಿಬಂದಿತ್ತು. ಚಿತ್ರದ ಯಶಸ್ಸಿನ ಕಾರಣಕ್ಕೆ ವಾರದ ಹಿಂದೆ ಚಿತ್ರ ತಂಡವು ಮಂಗಳೂರಿನಲ್ಲಿ ವಾರಾಹಿ ಪಂಜುರ್ಲಿ ದೈವಕ್ಕೆ ಹರಕೆ ನೇಮವನ್ನು ಅರ್ಪಿಸಿತ್ತು. ಈ ವೇಳೆ, ದೈವದ ಪಾತ್ರಧಾರಿಯ ವರ್ತನೆ, ರಿಷಬ್ ಶೆಟ್ಟಿಯನ್ನು ಹಾರೈಸಿದ ಪರಿಯ ಬಗ್ಗೆ ಮತ್ತೆ ಟೀಕೆ, ಟಿಪ್ಪಣಿ ಕೇಳಿಬಂದಿದೆ.
ಕಾಂತಾರ ಚಿತ್ರದ ಚಿತ್ರೀಕರಣ ಸಂದರ್ಭದಲ್ಲಿ ಎಡವಟ್ಟು ಎದುರಾದ ಸಂದರ್ಭದಲ್ಲಿ ಮಂಗಳೂರಿನ ಕದ್ರಿ ಬಾರೆಬೈಲ್ ವಾರಾಹಿ ಪಂಜುರ್ಲಿ ದೈವಸ್ಥಾನದ ವಾರ್ಷಿಕ ಉತ್ಸವಕ್ಕೆ ಆಗಮಿಸಿದ್ದ ರಿಷಬ್ ಶೆಟ್ಟಿ ದಂಪತಿ ಹರಕೆ ನೇಮ ಅರ್ಪಿಸುವ ಬಗ್ಗೆ ಹೇಳಿಕೊಂಡಿದ್ದರು. ಅದರಂತೆ, ಚಿತ್ರೀಕರಣ ಪೂರೈಸಿ ಚಿತ್ರ ಬಿಡುಗಡೆಗೊಂಡು ಭಾರೀ ಯಶಸ್ಸನ್ನೂ ಪಡೆದಿತ್ತು. ಮೊನ್ನೆ ಬಾರೆಬೈಲ್ ದೈವಸ್ಥಾನದಲ್ಲಿ ಇಡೀ ಚಿತ್ರ ತಂಡವೇ ಆಗಮಿಸಿ ದೈವಕ್ಕೆ ಹರಕೆ ನೇಮ ಅರ್ಪಿಸಿತ್ತು.






ಈ ವೇಳೆ, ದೈವದ ಪಾತ್ರಧಾರಿಯಾಗಿದ್ದ ಮುಕೇಶ್ ಗಂಧಕಾಡು ಅವರು ನಟ ರಿಷಬ್ ಶೆಟ್ಟಿ ಕುಳಿತುಕೊಂಡಿದ್ದ ಜಾಗಕ್ಕೆ ತೆರಳಿ ತೊಡೆಯಲ್ಲಿ ಮಲಗಿದ್ದ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರು, ದೈವಾರಾಧಕರು ಟೀಕೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ದೈವದ ಸಹಜ ವೇಷವಿಲ್ಲದೆ ಸೊಂಟಕ್ಕೆ ಕೆಂಪು ಬಟ್ಟೆ ಮತ್ತು ಬರಿ ಮೈಯಲ್ಲಿ ನರ್ತಿಸುತ್ತ ಪಲ್ಟಿ ಹೊಡೆದಿರುವುದೂ ಸರಿಯಲ್ಲ ಎಂದು ದೈವ ನರ್ತಕನ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ದೈವಾರಾಧಕ ತಮ್ಮಣ್ಣ ಶೆಟ್ಟಿ, ರಿಷಬ್ ಶೆಟ್ಟಿ ಕುಂದಾಪುರದವರಾಗಿದ್ದು ತುಳುನಾಡಿನ ದೈವಾರಾಧನೆ ಬಗ್ಗೆ ತಿಳಿದಿರಲಿಕ್ಕಿಲ್ಲ. ಆದರೆ ದೈವದ ಆರಾಧನೆ ಮಾಡುವವರು ಈ ರೀತಿ ತಪ್ಪು ಮಾಡಬಾರದಿತ್ತು. ರಾಜನ್ ದೈವ ಪಂಜುರ್ಲಿ ಹೇಗಿರಬೇಕೋ ಹಾಗೆಯೇ ಇರಬೇಕು, ಬರಿಮೈಯಲ್ಲಿ ನರ್ತಿಸುವುದು, ಪಲ್ಟಿ ಹೊಡೆಯುವುದೆಲ್ಲ ಪಂಜುರ್ಲಿ ಕೋಲದಲ್ಲಿ ಇಲ್ಲ. ದೈವಾರಾಧನೆ ಕರಾವಳಿ ಜನರ ಆರಾಧನಾ ಕಲೆಯಾಗಿದ್ದು, ಇದನ್ನು ಮಾರ್ಕೆಟ್ ಮಾಡಬೇಕಿಲ್ಲ. ಅದರ ನೆಪದಲ್ಲಿ ರಿಷಬ್ ಶೆಟ್ಟಿ ಬಿಸಿನೆಸ್ ಮಾಡುವುದೂ ಬೇಕಿಲ್ಲ.
ಇದಲ್ಲದೆ, ರಾಜನ್ ದೈವಗಳಿಗೆ ಹರಕೆ ನೇಮ ಎನ್ನುವುದೇ ಇಲ್ಲ. ರಿಷಬ್ ಶೆಟ್ಟಿ ಹೆಸರಲ್ಲಿ ಹರಕೆ ನೇಮ ಮಾಡಿದ್ದೇ ತಪ್ಪು. ಇದಕ್ಕೆಲ್ಲ ದೈವವೇ ಉತ್ತರ ನೀಡಬೇಕು. ರಾಜನ್ ದೈವಗಳಿಗೆ ವಾರ್ಷಿಕ ಉತ್ಸವ ಬಿಟ್ಟರೆ ಗುತ್ತಿನವರು ಧರ್ಮನೇಮ ಎಂದಷ್ಟೇ ಮಾಡುವುದು ವಾಡಿಕೆ. ಇನ್ಯಾರೋ ಬಂದು ಹರಕೆ ನೇಮ ಮಾಡುವ ಸಂಪ್ರದಾಯ ಇಲ್ಲ. ರಿಷಬ್ ಶೆಟ್ಟಿ ಬೇಕಾದರೆ ತನ್ನ ಮನೆಯಲ್ಲಿ ದೈವಾರಾಧನೆ ಇದ್ದರೆ ಅವುಗಳಿಗೆ ಕೋಲ ಕೊಟ್ಟು ಹರಕೆ ತೀರಿಸಲಿ ಎಂದು ಖಡಕ್ಕಾಗಿ ಉತ್ತರ ನೀಡಿದ್ದಾರೆ.
ಜಾಲತಾಣದಲ್ಲಿ ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ವರ್ತನೆ ಬಗ್ಗೆ ಭಾರೀ ಟೀಕೆ ಕೇಳಿಬಂದಿದ್ದು, ಅದು ದೈವ ಮಲಗಿದ್ದಲ್ಲ, ದೈವ ನರ್ತಕ ಎಂದು ಟೀಕಿಸಿದ್ದಾರೆ. ಕಾಂತಾರ ಚಿತ್ರದಲ್ಲಿ ಇದು ದೈವ ಆಡಿದ್ದೋ, ದೈವ ನರ್ತಕನ ಮಾತಾಡಿದ್ದೋ ಎನ್ನುವ ರೀತಿಯ ಡೈಲಾಗ್ ಇತ್ತು. ಅದೇ ರೀತಿಯಲ್ಲಿ ಇದು ದೈವ ನರ್ತಕನ ಕಿತಾಪತಿ. ಹಣಕ್ಕಾಗಿ ಏನು ಬೇಕಾದರೂ ಮಾಡುತ್ತಾರೆ ಎಂದು ದೈವಾರಾಧಕರು ಜಾಲತಾಣದಲ್ಲಿ ಟೀಕಿಸಿದ್ದಾರೆ.
A major controversy has erupted in Mangaluru after a video of a Daiva performer lying on actor-director Rishab Shetty’s lap during a ritual visit at the Kadri-Barebail Varahi Panjurli Daivasthana went viral online. The Kantara film team had recently visited the shrine to fulfill a “harake” (vow) they claimed to have made during the film’s shooting.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am