ಬ್ರೇಕಿಂಗ್ ನ್ಯೂಸ್
12-12-25 02:02 pm Mangalore Correspondent ಕರಾವಳಿ
ಮಂಗಳೂರು, ಡಿ.12 : ಮಂಗಳೂರಿನ ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ಮಾಡಿ ರೋಗಿಗಳ ಜೀವದೊಂದಿಗೆ ಚೆಲ್ಲಾಟವಾಡಿದ ಅಧಿಕಾರಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿರುವ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ಬೆಳಗಾವಿ ಅಧಿವೇಶನದಲ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.
ಈ ಅಕ್ರಮದ ಬಗ್ಗೆ ತಿಳಿದ ಕೂಡಲೇ ಆಡಿಯೋ-ವೀಡಿಯೋ ಮಾತ್ರವಲ್ಲದೇ ಅವಧಿ ಮೀರಿದ ಔಷಧಿಗಳ ರಾಶಿಯ ದಾಖಲೆಗಳ ಸಮೇತ ಉನ್ನತ ಅಧಿಕಾರಿಗಳಿಗೆ ದೂರು ನೀಡಲಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆದ ಕೆಡಿಪಿ ಸಭೆಯಲ್ಲೂ ಪ್ರಸ್ತಾಪಿಸಲಾಗಿದೆ. ಹಾಸನ, ಚಿಕ್ಕಮಗಳೂರು ಸೇರಿದಂತೆ ವಿವಿಧ ಭಾಗದ ಅವಧಿ ಮೀರಿದ ಔಷಧಿಗಳನ್ನು ಏಜೆಂಟರ ಮುಖಾಂತರ ಮಂಗಳೂರಿಗೆ ತರುವ ವ್ಯವಸ್ಥಿತ ಜಾಲವಿದೆ. ಈ ಬಗ್ಗೆ ಲೋಕಾಯುಕ್ತ ದಾಳಿ ನಡೆದಿದ್ದರೂ ಯಾಕೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಿಲ್ಲ? ಸರ್ಕಾರವೇ ಇವರ ರಕ್ಷಣೆಗೆ ನಿಂತಿದೆಯಾ? ಪೂರೈಕೆ ಮಾಡಿದ್ದು ಯಾರು? ಈ ಅಕ್ರಮದ ಹಿಂದಿರುವವರು ಯಾರು ಎಂಬುದು ಬಹಿರಂಗವಾಗಬೇಕು ಎಂದು ಆಗ್ರಹಿಸಿದರು.
ಅಲ್ಲದೇ ಮಂಗಳೂರಿನ ಆಯುಷ್ ಸಂಯುಕ್ತ ಆಸ್ಪತ್ರೆಯಲ್ಲಿ ಎಂ.ಆರ್.ಪಿ.ಎಲ್ ಕಂಪೆನಿಯವರು ಸಿ.ಎಸ್.ಆರ್ ಅನುದಾನದಡಿ ನೀಡಿದ 38.50 ಲಕ್ಷದಲ್ಲಿ ಅಕ್ರಮವಾಗಿರುವುದನ್ನು ಸರ್ಕಾರವೇ ಒಪ್ಪಿಕೊಂಡಿದೆ. ಇಂತಹ ಅಕ್ರಮ ಎಸಗಲು ಅಧಿಕಾರಿಗಳಿಗೆ ಧೈರ್ಯ ಬರಲು ಹೇಗೆ ಸಾಧ್ಯ? ಅವರ ಹಿಂದೆ ಯಾರಿದ್ದಾರೆ? ಮಂತ್ರಿಗಳು ಹಾಗೂ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಯಾಕೆ ಕ್ರಮವಾಗಿಲ್ಲ? ಹೀಗಾದರೆ ಇನ್ನು ಮೇಲೆ ಯಾವ ಕಂಪೆನಿ ತಾನೇ ಇಂತಹ ಸರ್ಕಾರಿ ಸಂಸ್ಥೆಗಳಿಗೆ ಸಿ.ಎಸ್.ಆರ್ ಅನುದಾನವನ್ನು ನೀಡಲು ಮುಂದೆ ಬರುತ್ತದೆ ಎಂದು ಪ್ರಶ್ನಿಸಿದರು.
MLA Vedavyas Kamath strongly objected in the Belagavi Assembly session to the government’s failure to take action against officials of the Mangaluru AYUSH Department who allegedly supplied expired medicines, endangering the lives of patients.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am