ಬ್ರೇಕಿಂಗ್ ನ್ಯೂಸ್
12-12-25 10:28 pm Mangalore Correspondent ಕರಾವಳಿ
ಮಂಗಳೂರು, ಡಿ.12 : ನಗರದ ಸಂತ ಆಗ್ನೇಸ್ ಕಾಲೇಜಿನ (ಸ್ವಾಯತ್ತ) ದ್ವಿತೀಯ ಬಿಎಸ್ಸಿ ವಿದ್ಯಾರ್ಥಿನಿ ಸುಶ್ರಾವ್ಯಾ ನಿರಂತರ ನಾಲ್ಕು ಗಂಟೆಗಳ ಕಾಲ ಸ್ಕೇಟಿಂಗ್ ನೃತ್ಯದ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಮಾಡಿದ್ದಾರೆ. ಡಿ.12ರಂದು ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 12 ಗಂಟೆಯ ವರೆಗೆ ನಿರಂತರ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ನೃತ್ಯ ಪ್ರದರ್ಶನ ನೀಡಿ ತಮ್ಮ ಹೆಸರನ್ನು ವಿಶ್ವ ದಾಖಲೆಗೆ ಸೇರಿಸಿದ್ದಾರೆ.
ಮಂಗಳೂರು ಚಿಲಿಂಬಿಯ ಉದಯ್ ಕುಮಾರ್ ಮತ್ತು ಶಶಿರೇಖಾ ಎಸ್ ಅವರ ಪುತ್ರಿಯಾಗಿರುವ ಸುಶ್ರಾವ್ಯ, ಪ್ರಸುತ್ತ ಸಂತ ಆಗ್ನೆಸ್ ಕಾಲೇಜು (ಸ್ವಾಯತ್ತ) ಮಂಗಳೂರಿನ ದ್ವಿತೀಯ ಬಿ.ಎಸ್ಸಿ ವಿದ್ಯಾರ್ಥಿನಿ. ಸತತ ಪರಿಶ್ರಮ ಮತ್ತು ನಿರಂತರ ಸಾಧನೆಗೆ ಈಗ ಜಾಗತಿಕ ಮನ್ನಣೆ ಲಭಿಸಿದೆ.


ಸುಶ್ರಾವ್ಯ ಅವರು ಕಳೆದ 14 ವರ್ಷಗಳಿಂದ ಸ್ಕೇಟಿಂಗ್ ಕ್ಷೇತ್ರದಲ್ಲಿ ಸುಮನ್ ಶ್ರೀಕಾಂತ್ ಇವರ ಮಾರ್ಗದರ್ಶನದಲ್ಲಿ ಅಭ್ಯಾಸ ಮಾಡುತ್ತಿದ್ದು, ಅದೇ ರೀತಿಯಲ್ಲಿ ಭಾರತೀಯ ಶಾಸ್ತ್ರೀಯ ನೃತ್ಯದ ಜೂನಿಯರ್ ಪರೀಕ್ಷೆಯನ್ನು ಪ್ರತಿಮಾ ಶ್ರೀಧರ್ ಅವರ ಮಾರ್ಗದರ್ಶನದಲ್ಲಿ ಹಾಗೂ ಸೀನಿಯರ್ ಪರೀಕ್ಷೆಯನ್ನು ಸುರೇಶ್ ಅತ್ತಾವರ ಅವರ ಮಾರ್ಗದರ್ಶನದಲ್ಲಿ ಪೂರೈಸಿದ್ದಾರೆ. ಕಳೆದ ಎರಡು ವರ್ಷಗಳಿಂದ ಕಲಾತ್ಮಕ ಸ್ಕೇಟಿಂಗ್ ಅನ್ನು ಸ್ವತಃ ಕಲಿತು ಅಭ್ಯಾಸ ಮಾಡುತ್ತಿದ್ದಾರೆ.
ಇವರು ತಾಲೂಕು ಮಟ್ಟದ ವಿದ್ಯಾ ಭಾರತೀ ಸ್ಪರ್ಧೆಯಲ್ಲಿ ಮೊದಲ ಸ್ಥಾನದಲ್ಲಿ ವಿಜೇತರಾಗಿದ್ದು, ರಾಜ್ಯ ಮಟ್ಟಕ್ಕೆ ಆಯ್ಕೆಗೊಂಡಿದ್ದರು. ಮೀರತ್ ನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಎರಡು ಚಿನ್ನ ಹಾಗೂ ಎರಡು ಬೆಳ್ಳಿ ಪದಕಗಳನ್ನು ತಮ್ಮದಾಗಿಸಿದ್ದಾರೆ. ಜೊತೆಗೆ SGFI (School Games Federation of India) ಮಟ್ಟಕ್ಕೂ ಆಯ್ಕೆಯಾಗಿರುವುದು ಇವರ ಸಾಧನೆ.
ಇದೇ ರೀತಿಯಲ್ಲಿ, RSFI ಜಿಲ್ಲಾ ಮಟ್ಟದ ಅನೇಕ ಸ್ಪರ್ಧೆಗಳಲ್ಲಿ ಬಹುಮಾನ ಹಾಗೂ ಪ್ರಶಂಸೆಗಳನ್ನು ಪಡೆದು, ರಾಜ್ಯ ಮಟ್ಟಕ್ಕೂ ಆಯ್ಕೆಯಾಗಿದ್ದಾರೆ. ಹಲವಾರು ಕಾರ್ಯಕ್ರಮಗಳಲ್ಲಿ ಇವರನ್ನು ಸನ್ಮಾನಿಸಲಾಗಿದೆ. ಸಂತ ಆಗ್ನೆಸ್ (ಸ್ವಯತ್ತ) ಪದವಿ ಕಾಲೇಜಿನಲ್ಲಿ ನಡೆದ “Agnes Got Talent” ಸ್ಪರ್ಧೆಯಲ್ಲೂ ಸುಶ್ರಾವ್ಯ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.
Sushravya, a second-year B.Sc student of St. Agnes College (Autonomous), Mangaluru, has made her way into the Golden Book of World Records by performing continuous classical dance on skates for four hours.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm