ಬ್ರೇಕಿಂಗ್ ನ್ಯೂಸ್
13-12-25 04:36 pm Mangalore Correspondent ಕರಾವಳಿ
ಮಂಗಳೂರು, ಡಿ.13 : ಬಜ್ಪೆ ಠಾಣೆ ವ್ಯಾಪ್ತಿಯ ಕೆಂಜಾರು ಬಳಿಯ ಪೊದೆಗಳ ಎಡೆಯಲ್ಲಿ ಹಲವಾರು ಗೋವುಗಳನ್ನು ಕಡಿದು ಹತ್ಯೆ ಮಾಡಿರುವುದು ಪತ್ತೆಯಾಗಿದ್ದು, ಬಜರಂಗದಳ ಕಾರ್ಯಕರ್ತರು ಸ್ಥಳಕ್ಕೆ ತೆರಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೆಂಜಾರಿನ ಕಪಿಲಾ ಗೋಶಾಲೆಯಿಂದ ಕಳೆದ 15 ದಿನಗಳಲ್ಲಿ ಎಂಟು ಗೋವುಗಳನ್ನು ಕಳವು ಮಾಡಿರುವ ಬಗ್ಗೆ ಗೋಶಾಲೆಯ ಸಂಚಾಲಕ ಪ್ರಕಾಶ್ ಶೆಟ್ಟಿ ಬಜ್ಪೆ ಠಾಣೆಗೆ ದೂರು ನೀಡಿದ್ದರು. ಇದರಂತೆ, ಹುಡುಕಾಟ ನಡೆಸಿದಾಗ ಕೆಂಜಾರಿನಲ್ಲಿ ಕೋಸ್ಟ್ ಗಾರ್ಡ್ ಅಕಾಡೆಮಿಗೆ ಮೀಸಲಾದ ಖಾಲಿ ಜಾಗದಲ್ಲಿ ಗೋವುಗಳನ್ನು ಹತ್ಯೆ ಮಾಡಿರುವ ಜಾಗ ಪತ್ತೆಯಾಗಿದೆ.



ಸ್ಥಳದಲ್ಲಿ ಇಪ್ಪತ್ತಕ್ಕೂ ಹೆಚ್ಚು ಗೋವುಗಳನ್ನು ಕಡಿದು ಹತ್ಯೆ ಮಾಡಿರುವ ಕುರುಹು ಪತ್ತೆಯಾಗಿದೆ. ಗೋವಿನ ಕೈಕಾಲುಗಳು, ಚರ್ಮ, ಇನ್ನಿತರ ತ್ಯಾಜ್ಯಗಳನ್ನು ಪೊದೆಗಳ ಎಡೆಯಲ್ಲಿ ಎಸೆಯಲಾಗಿದ್ದು, ಸ್ಥಳದಲ್ಲಿ ಹಸಿ ಹಸಿ ರಕ್ತ ಚೆಲ್ಲಿರುವುದು ಕಂಡುಬಂದಿದೆ. ಅಲ್ಲದೆ, ಒಂದು ದನ ಮತ್ತು ಇನ್ನೊಂದು ಹೋರಿಯನ್ನು ಸ್ಥಳದಲ್ಲಿ ಕಟ್ಟಿ ಹಾಕಿರುವುದು ಪತ್ತೆಯಾಗಿದ್ದು ಪ್ರಕಾಶ್ ಶೆಟ್ಟಿ ಅದು ತಮ್ಮ ಗೋಶಾಲೆಯದ್ದೆಂದು ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ಆಗಮಿಸಿರುವ ಬಜ್ಪೆ ಠಾಣೆ ಪೊಲೀಸರು ಪ್ರಕಾಶ್ ಶೆಟ್ಟಿ ದೂರಿನಂತೆ ಕೇಸು ದಾಖಲಿಸಿದ್ದಾರೆ. ಸ್ಥಳದಲ್ಲಿ ಕಟುಕರು ಗೋವುಗಳನ್ನು ಕದ್ದು ತಂದು ಹತ್ಯೆಗೈದು ಮಾಂಸ ಮಾಡಿ ಒಯ್ದಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಬಜರಂಗದಳ ಕಾರ್ಯಕರ್ತರು ತಿಳಿಸಿದ್ದಾರೆ.
The alleged slaughter of several cattle has come to light near Kenjaru, under the jurisdiction of Bajpe Police Station, after remains of cows were found dumped in nearby bushes. Following the discovery, Bajrang Dal activists visited the spot and staged protests, expressing outrage over the incident.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 08:47 pm
HK News Desk
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
06-02-26 10:42 pm
Mangalore Correspondent
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm