ಬ್ರೇಕಿಂಗ್ ನ್ಯೂಸ್
20-12-25 01:09 pm Mangalore Correspondent ಕರಾವಳಿ
ಉಳ್ಳಾಲ, ಡಿ.20 : ನರಿಂಗಾನ ಗ್ರಾಮದ ಕಲ್ಲರಕೋಡಿ ಸರ್ಕಾರಿ ಶಾಲೆಯ ದೈಹಿಕ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರಭಾಕರ್ ಜೋಗಿ(51) ಎಂಬವರು ಕೋಟೆಕಾರು ಪಟ್ಟಣ ವ್ಯಾಪ್ತಿಯ ಕೊಂಡಾಣದ ತನ್ನ ಮನೆ ಆವರಣ ಬಾವಿಯಲ್ಲಿ ಶುಕ್ರವಾರ ಸಂಜೆ ಶವವಾಗಿ ಪತ್ತೆಯಾಗಿದ್ದು, ಅನಾರೋಗ್ಯದಿಂದ ಆತ್ಮಹತ್ಯೆಗೈದಿರುವುದಾಗಿ ಶಂಕಿಸಲಾಗಿದೆ.
ನಿನ್ನೆ ಸಂಜೆ ಪ್ರಭಾಕರ್ ಅವರು ತನ್ನ ಮಗಳನ್ನ ಉಚ್ಚಿಲದ ಶಾಲೆಗೆ ಶಾಲಾ ವಾರ್ಷಿಕೋತ್ಸವಕ್ಕೆಂದು ಬಿಟ್ಟು ಮನೆಗೆ ಬಂದಿದ್ದರು. ಬಳಿಕ ಪತ್ನಿ ಮತ್ತು ಮಗನ ಜೊತೆ ಮಗಳ ಶಾಲಾ ವಾರ್ಷಿಕೋತ್ಸವಕ್ಕೆ ತೆರಳಲು ಸಿದ್ಧತೆ ನಡೆಸಿದ್ದರು. ಈ ವೇಳೆ ಪತ್ನಿ ಪ್ರಭಾಕರ್ ಅವರನ್ನ ಹುಡುಕಾಡಿದಾಗ ಅವರ ಶವ ಮನೆ ಆವರಣದ ಬಾವಿಯಲ್ಲಿ ಪತ್ತೆಯಾಗಿದೆ.
ಮೃತ ಪ್ರಭಾಕರ ಜೋಗಿಯವರು ನರ ದೌರ್ಬಲ್ಯದ ಸಮಸ್ಯೆಯಿಂದ ಬಳಲುತ್ತಿದ್ದರೆನ್ನಲಾಗಿದೆ. ಶುಕ್ರವಾರ ಬೆಳಗ್ಗಿನಿಂದಲೇ ಅವರು ಮಂಕಾಗಿದ್ದು ಆರೋಗ್ಯ ಸಮಸ್ಯೆಯಿಂದಲೇ ಆತ್ಮಹತ್ಯೆಗೈದಿರೋದಾಗಿ ಶಂಕಿಸಲಾಗಿದೆ.
ಪ್ರಭಾಕರ ಅವರು ಈ ಹಿಂದೆಯೂ ಒಮ್ಮೆ ಮನೆಯಿಂದ ನಾಪತ್ತೆಯಾಗಿದ್ದು ಬಳಿಕ ಮನೆಗೆ ಹಿಂದಿರುಗಿದ್ದರು. ಅವರು ಉಳ್ಳಾಲ ತಾಲೂಕಿನ ಹಲವು ಶಾಲೆಗಳಲ್ಲಿ ದೈಹಿಕ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿದ್ದರು. ದೈಹಿಕ ಶಿಕ್ಷಕರ ಸಂಘಟನೆಗಳಲ್ಲಿಯೂ ಸಕ್ರಿಯರಾಗಿದ್ದರು. ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿ ಯುಡಿಆರ್ ಪ್ರಕರಣ ದಾಖಲಿಸಿದ್ದಾರೆ.
In a tragic incident, Prabhakar Jogi (51), a physical education teacher at the Government School in Kallarakkodi, Naringana village, was found dead in the well of his house in Kondana, under the Kotekar town limits on Friday evening. Police suspect suicide due to health-related distress.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am