ಬ್ರೇಕಿಂಗ್ ನ್ಯೂಸ್
20-12-25 08:44 pm Mangalore Correspondent ಕರಾವಳಿ
ಮಂಗಳೂರು, ಡಿ.20 : ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದಲ್ಲಿ ಪೊಲೀಸರು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿಲ್ಲ ಎಂಬ ನೆಪದಲ್ಲಿ ಎಸ್ಡಿಪಿಐ ಕಾರ್ಯಕರ್ತರು ನಗರದ ಕ್ಲಾಕ್ ಟವರ್ ಮುಂದೆ ಪ್ರತಿಭಟನೆ ನಡೆಸಿದ್ದು, ಈ ವೇಳೆ ಎಸ್ಪಿ ಮತ್ತು ಪೊಲೀಸ್ ಕಮಿಷನರ್ ವಿರುದ್ಧ ಆರೋಪಗಳನ್ನು ಮಾಡಿದ್ದರು. ಕಾಂಗ್ರೆಸ್ ಸರಕಾರ ಇದ್ದರೂ ಪೊಲೀಸರು ಸಂಘ ಪರಿವಾರದ ಪರ ಕೆಲಸ ಮಾಡುತ್ತಿದ್ದಾರೆಂದು ಆರೋಪಗಳನ್ನು ಮಾಡಿದ್ದಕ್ಕೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ರಾಂಗ್ ಆಗಿದ್ದು, ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ.
ಎಸ್ಡಿಪಿಐ ಪ್ರತಿಭಟನೆಯಲ್ಲಿ ಆರ್ಟಿಐ ಮೂಲಕ ಜಿಲ್ಲೆಯ ಪೊಲೀಸರ ಕ್ರಮದ ಬಗ್ಗೆ ಮಾಹಿತಿ ಪಡೆಯುತ್ತೇವೆ ಎಂದು ಹೇಳಿದ್ದರು. ಇದಕ್ಕೆ ಕೌಂಟರ್ ನೀಡಿರುವ ಸುಧೀರ್ ರೆಡ್ಡಿ, ನೀವು ಆರ್ಟಿಐ ಕೇಳಿ ಒಂದು ತಿಂಗಳು ವೇಸ್ಟ್ ಮಾಡೋದು ಬೇಡ. ಈ ಕೂಡಲೇ ಹಿಂದು- ಮುಸ್ಲಿಂ ಅಪರಾಧಿಗಳ ಸಂಖ್ಯೆ ಮತ್ತು ಎಷ್ಟು ಏಕ್ಷನ್ ಆಗಿದೆ ಎಂದು ವಿವರ ಕೊಡುತ್ತೇನೆಂದು ಹೇಳಿ ಅದರ ಲಿಸ್ಟನ್ನು ಹಾಕಿದ್ದಾರೆ. ಈ ಭಾಗದಲ್ಲಿ ಯಾವುದೋ ವಿಚಾರದಲ್ಲಿ ಸಂತ್ರಸ್ತನಾಗಿ ನಟಿಸಿ ಇನ್ಯಾರೋ ಅಮಾಯಕರನ್ನು ಬಲಿಪಶು ಮಾಡುವುದು ಕಾಮನ್ ಎನ್ನುವಂತಾಗಿದೆ ಎಂದು ಟೀಕಿಸಿದ್ದಾರೆ.

ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಒಟ್ಟು 807 ರೌಡಿಶೀಟರ್ ಗಳಿದ್ದು ಅದರಲ್ಲಿ 474 ಹಿಂದುಗಳು, 321 ಮುಸ್ಲಿಮರಿದ್ದಾರೆ. 12 ಮಂದಿ ಇತರರು ಇದ್ದಾರೆ. ಬಾಂಡ್ ಕೊಟ್ಟು ಉಲ್ಲಂಘಿಸಿದ್ದ ಪ್ರಕರಣದಲ್ಲಿ 39 ಹಿಂದುಗಳಿದ್ದು ಅವರಿಂದ 7.40 ಲಕ್ಷ ದಂಡ ಕಟ್ಟಿಸಲಾಗಿದೆ. 13 ಮಂದಿ ಮುಸ್ಲಿಮರಿದ್ದು 2.40 ಲಕ್ಷ ದಂಡ ತೆತ್ತಿದ್ದಾರೆ. ಬಜ್ಪೆಯಲ್ಲಿ ಕೊಲೆ ಸರಣಿಯ ಬಳಿಕ ಬಜರಂಗದಳ ಮತ್ತು ಎಸ್ಡಿಪಿಐ ಪ್ರತಿಭಟನಾ ಸಭೆಗೂ ಮುನ್ನ ಯಾವುದೇ ತೊಂದರೆಯಾದರೆ ನೀವೇ ಹೊಣೆಯೆಂದು ಬರೆಸಿಕೊಂಡು ತಲಾ ಎರಡು ಲಕ್ಷ ಬಾಂಡ್ ಪಡೆಯಲಾಗಿತ್ತು ಎಂದು ಕಮಿಷನರ್ ಮಾಹಿತಿ ನೀಡಿದ್ದಾರೆ.
ನಾವು ಯಾವುದೇ ಪ್ರಕರಣದಲ್ಲಿ ಸಾಕ್ಷಿಗಳನ್ನು ಆಧರಿಸಿ ಕ್ರಮ ಕೈಗೊಳ್ಳುತ್ತೇವೆ ವಿನಾ ಸಮುದಾಯಗಳನ್ನು ಟಾರ್ಗೆಟ್ ಮಾಡಿಕೊಂಡಿಲ್ಲ. ಶಾಂತಿ ಕದಡುವ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರಿಗೆ ಅಧಿಕಾರ ಇದೆ, ಇದನ್ನು ಮುಂದೆಯೂ ಚಲಾಯಿಸುತ್ತಾರೆ. ನಾವು ನೀಡಿರುವ ಅಂಕಿ ಅಂಶಗಳು ವಾಸ್ತವ ಏನಿದೆ ಅನ್ನುವುದನ್ನು ತೋರಿಸುತ್ತವೆ. ಬಾಂಡ್ ಪ್ರಕಾರ ನಡೆದುಕೊಳ್ಳದಿದ್ದರೆ ಬಾಂಡ್ ಮೊತ್ತವನ್ನು ಮುಟ್ಟುಗೋಲು ಹಾಕುತ್ತೇವೆ. ಕಳೆದ ಆರು ತಿಂಗಳಲ್ಲಿ ಹಿಂದು- ಮುಸ್ಲಿಂ ಸಂಘಟನೆಗಳನ್ನು ಸಮಾನವಾಗಿ ನೋಡಿದ್ದೇವೆ. ಶಾರದೋತ್ಸವ ಮೆರವಣಿಗೆಗೂ ಅವಕಾಶ ನೀಡಿದ್ದು, ಎಸ್ಡಿಪಿಐ ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸುವುದಕ್ಕೂ ಅವಕಾಶ ನೀಡಿದ್ದೇವೆ.
ಆದರೆ ಕೆಲವರು ಸತ್ಯವನ್ನು ಮುಚ್ಚಿಟ್ಟು ಅರ್ಧ ಮಾಹಿತಿಗಳನ್ನು ಹಂಚಿಕೊಂಡು ಅಮಾಯಕರ ಮನಸ್ಸನ್ನು ಕೆಡಿಸುತ್ತಾರೆ. ಹೀಗಾಗಿ ಇರುವ ಸತ್ಯವನ್ನು ಹೊರಗಿಟ್ಟಿದ್ದೇನೆ. ಆದರೆ, ಯಾವುದೇ ಅಪರಾಧ ವಿಚಾರದಲ್ಲಿ ಪೊಲೀಸರಿಗೆ ಬ್ಯಾಲೆನ್ಸ್ ಮಾಡಿಕೊಂಡು ಕ್ರಮ ಜರುಗಿಸುವುದಕ್ಕೆ ಆಗುವುದಿಲ್ಲ. ಆಯಾ ಸಮುದಾಯದವರೇ ತಮ್ಮವರನ್ನು ಅಪರಾಧ ಲೋಕದಿಂದ ವಿಮುಖರನ್ನಾಗಿಸಿದರೆ ಅಪರಾಧ ಸಂಖ್ಯೆಯಲ್ಲು ಇಳಿಕೆಯಾಗುತ್ತದೆ. ಪೊಲೀಸರ ಏಕ್ಷನ್ ಕೂಡ ಹಾಗೆಯೇ ಇರುತ್ತದೆ ಎಂದು ಪೊಲೀಸ್ ಕಮಿಷನರ್ ಪ್ರತಿಕ್ರಿಯಿಸಿದ್ದಾರೆ.
Mangaluru Police Commissioner Sudheer Reddy has issued a strong counter to the SDPI after its workers staged a protest at the Clock Tower alleging that the police were showing leniency in the Abdul Rahiman murder case and acting in favour of right-wing groups despite a Congress government being in power.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm