ಬ್ರೇಕಿಂಗ್ ನ್ಯೂಸ್
21-12-25 11:04 pm Mangalore Correspondent ಕರಾವಳಿ
ಬಂಟ್ವಾಳ, ಡಿ.21 : ಕೇಪು ಜಾತ್ರೆಯ ನಿಮಿತ್ತ ಎರಡನೇ ದಿನ ಭಾನುವಾರವೂ ವಿಟ್ಲ ಪೊಲೀಸರು ದಾಳಿ ನಡೆಸಿದ್ದು 20 ಕೋಳಿಗಳನ್ನು ಸ್ವಾಧೀನಪಡಿಸಿ, 27 ಜನರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.
ಭಾನುವಾರ ಬೆಳಗ್ಗೆ ಮುರಳೀಧರ ರೈ ಎಂಬವರಿಗೆ ಸೇರಿದ ಗದ್ದೆಯಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿರುವ ಬಗ್ಗೆ, ವಿಟ್ಲ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರು, ಠಾಣಾ ಅಧಿಕಾರಿ/ಸಿಬ್ಬಂದಿಗಳೊಂದಿಗೆ ಸದ್ರಿ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಹಲವಾರು ಜನ ಸೇರಿ ಹಿಂಸಾತ್ಮಕವಾಗಿ ಕೋಳಿ ಅಂಕ ಆಡುತ್ತಿರುವುದು ಕಂಡುಬಂದಿರುತ್ತದೆ. ಅಲ್ಲಿ ನೆರೆದಿದ್ದ ಜನರಿಗೆ ಅಕ್ರಮ ಕೋಳಿ ಅಂಕದ ಬಗ್ಗೆ ಕಾನೂನು ತಿಳುವಳಿಕೆ ನೀಡಿದರೂ, ಸೇರಿದ್ದ ಜನರು ಸ್ಥಳದಿಂದ ತೆರಳದೇ ನಿಂತುಕೊಂಡಿರುತ್ತಾರೆ
ಅಲ್ಲದೆ, ಸ್ಥಳದಲ್ಲಿ ಹಾಜರಿದ್ದ ಬಿಜೆಪಿ ಮುಖಂಡರಾದ ಸಂಜೀವ ಮಠಂದೂರು, ಮುರಳೀಧರ ರೈ, ಸತೀಶ ಕುಂಪಲ, ದಯಾನಂದ ಉಜಿರೆಮಾರು, ಹರಿಪ್ರಸಾದ್ ಯಾದವ್, ಅಶೋಕ ಶೆಟ್ಟಿ ವಿಟ್ಲ, ರಾಜೇಶ್ ಬಾಳೆಕಲ್ಲು ಎಂಬವರುಗಳು ಅಲ್ಲಿ ಸೇರಿದ್ದ ಜನರಿಗೆ ಕಾನೂನು ಬಾಹಿರ ಕೋಳಿ ಅಂಕವನ್ನು ಮುಂದುವರಿಸುವಂತೆ ಪ್ರಚೋದನೆ ಮತ್ತು ದುಷ್ಪ್ರೇರಣೆಯನ್ನು ನೀಡಿರುತ್ತಾರೆ. ಬಳಿಕ ಅಗತ್ಯ ಪೊಲೀಸ್ ಭದ್ರತೆಯನ್ನು ಏರ್ಪಡಿಸಿ, ಕೃತ್ಯದಲ್ಲಿ ತೊಡಗಿಸಿಕೊಂಡಿದ್ದ 20 ಜನರನ್ನು ವಶಕ್ಕೆ ಪಡೆದು, ಸ್ಥಳದಲ್ಲಿದ್ದ 20 ಹುಂಜ ಕೋಳಿಗಳನ್ನು ಹಾಗೂ ಕೋಳಿ ಅಂಕಕ್ಕೆ ಬಳಸುವ ಕತ್ತಿ (ಬಾಲು)ಗಳನ್ನು ಸ್ವಾಧೀನಪಡಿಸಲಾಗಿದ್ದು, ಸದ್ರಿ ಕಾನೂನು ಬಾಹಿರ ಕೃತ್ಯಕ್ಕೆ ಪ್ರಚೋದನೆ ಮತ್ತು ದುಷ್ಪ್ರೇರಣೆ ನೀಡಿದವರು ಹಾಗೂ ಕಾನೂನು ಬಾಹಿರ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದವರು ಸೇರಿ ಒಟ್ಟು 27 ಜನರ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 191/2025, ಕಲಂ: 189(2), 49, 221, 223, 190 BNS 2023 ಮತ್ತು 3, 11 PREVENTION OF CRUELTY TO ANIMALS ACT ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
For the second consecutive day, Vitla Police conducted a raid at the annual Kepu Ullalthi Jatre, seized 20 roosters, and registered a case against 27 individuals, including several BJP leaders, for organising and promoting illegal cockfighting.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am