ಬ್ರೇಕಿಂಗ್ ನ್ಯೂಸ್
30-12-20 03:33 pm Mangalore Correspondent ಕರಾವಳಿ
ಮಂಗಳೂರು, ಡಿ.30: ಅಂಗಡಿ ಮುಂದೆ ಬೈಕ್ ನಿಲ್ಲಿಸಿದ ಕಾರಣಕ್ಕಾಗಿ ಬೈಕ್ ಸವಾರನ ಮೇಲೆ ವ್ಯಾಪಾರಿಗಳಿಬ್ಬರು ಸೇರಿ ದೊಣ್ಣೆಯಲ್ಲಿ ಹಲ್ಲೆ ನಡೆಸಿದ ಘಟನೆ ಕಿನ್ನಿಗೋಳಿಯಲ್ಲಿ ನಡೆದಿದೆ.
ಬೈಕ್ ಪಾರ್ಕ್ ಮಾಡಿದ ವಿಚಾರದಲ್ಲಿ ವಾಗ್ವಾದ ನಡೆದಿದೆ. ಬೈಕ್ ಸವಾರ ಯಾಕೆ ಇಲ್ಲಿ ಪಾರ್ಕ್ ಮಾಡಬಾರದಾ.. ಇದು ಸರಕಾರಿ ಜಾಗ. ನಿಮ್ಮ ಖಾಸಗಿ ಜಾಗ ಅಲ್ಲ. ರಸ್ತೆ ಬದಿಯ ಸರಕಾರಿ ಜಾಗದಲ್ಲಿ ಪಾರ್ಕ್ ಮಾಡಿದರೆ ನಿಮ್ಮ ಅಡ್ಡಿಯೇನು ಎಂದು ಪ್ರಶ್ನೆ ಮಾಡಿದ್ದಾರೆ. ಇದರಿಂದ ಕ್ರುದ್ಧರಾದ ಅಂಗಡಿಯ ಮಾಲಕರಿಬ್ವರು ಉದ್ದಗಿನ ಬೆತ್ತದಲ್ಲಿ ಹಲ್ಲೆ ನಡೆಸಿದ್ದಾರೆ. ಹೀಗೆ ಹಲ್ಲೆ ನಡೆಸಿದ್ದನ್ನು ಸಾರ್ವಜನಿಕರು ಮೊಬೈಲಿನಲ್ಲಿ ವಿಡಿಯೋ ಮಾಡಿದ್ದಾರೆ. ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. ]
ಘಟನೆ ನಡೆಯುತ್ತಿದ್ದಂತೆ ಜನ ಸೇರಿದ್ದು ಸಾರ್ವಜನಿಕರು ಅಂಗಡಿ ಮುಂದೆ ಜಮಾಯಿಸಿ ಹಲ್ಲೆ ನಡೆಸಿದ್ದ ವ್ಯಾಪಾರಿಗಳ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದೇ ಜಾಗದಲ್ಲಿ ಅನೇಕ ಬಾರಿ ಪಾರ್ಕ್ ವಿಚಾರದಲ್ಲಿ ಹಲ್ಲೆ ಮಾಡಲು ಮುಂದಾಗಿರುವ ಘಟನೆಗಳು ಈ ಹಿಂದೆಯೂ ನಡೆದಿದ್ದು ಬೈಕ್ ಚಾಲಕರಿಗೆ ಹಲ್ಲೆ, ನಿಲ್ಲಿಸಿದ್ದ ಬೈಕ್ ಗಳ ಚಕ್ರಕ್ಕೆ ಹಾನಿಗೊಳಿಸುವುದು, ಹಲ್ಲೆಯತ್ನ ಘಟನೆಗಳು ನಡೆದಿದೆ ಎಂದು ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಜಾಗ ಸರ್ಕಾರದಲ್ಲ. ನಮ್ಮ ಖಾಸಗಿ ಜಾಗ ಎಂದು ವ್ಯಾಪಾರಿಗಳು ವಾದಿಸುತ್ತಿದ್ದು ಹೊರಗಿನ ಯಾವುದೇ ವ್ಯಕ್ತಿಗಳು ಬಂದು ಪಾರ್ಕ್ ಮಾಡಿದ್ರೂ ತಕರಾರು ಸಾಮಾನ್ಯ ಅನ್ನುವಂತಾಗಿದೆ. ಘಟನೆ ಹಿನ್ನೆಲೆಯಲ್ಲಿ ಭಾರೀ ಜನ ಸೇರಿದ್ದು ಮೂಲ್ಕಿ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ದೂರು ದಾಖಲಿಸಿದ್ದಾರೆ.
ಪೆಟ್ಟು ತಿಂದ ವ್ಯಕ್ತಿ ಬಿಜೆಪಿ ಕಾರ್ಯಕರ್ತ ಎನ್ನಲಾಗುತ್ತಿದ್ದು ಮೂಲ್ಕಿ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ.
Video:
A BJP Member was assaulted by Duo for Parking Bike in front of the shop in Kinnigoli, Mangalore. Mulki police have registered the case. A video of this has gone viral on social media.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
08-06-25 02:58 pm
Mangalore Correspondent
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm