ಬ್ರೇಕಿಂಗ್ ನ್ಯೂಸ್
23-12-25 10:02 pm Mangaluru Correspondent ಕರಾವಳಿ
ಮಂಗಳೂರು, ಡಿ.23: ಇತ್ತೀಚೆಗೆ ಕೈದಿಗಳ ಗಲಾಟೆಯಿಂದ ಸುದ್ದಿಯಾಗಿದ್ದ ಮಂಗಳೂರು ಸಬ್ ಜೈಲಿಗೆ ಕಾರಾಗೃಹ ಇಲಾಖೆ ಡಿಜಿಪಿ ಅಲೋಕ್ ಕುಮಾರ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಒಳಗಡೆ ಪರಿಶೀಲನೆ ನಡೆಸಿ ಜೈಲು ಅಧಿಕಾರಿಗಳ ಜೊತೆಗೆ ಸಭೆ ನಡೆಸಿ ರೈಟ್ ಲೆಫ್ಟ್ ತೆಗೆದುಕೊಂಡಿದ್ದಾರೆ.
ಇದೇ ವೇಳೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮಂಗಳೂರು ಕಾರಾಗೃಹಕ್ಕೆ ಔಪಚಾರಿಕವಾಗಿ ಭೇಟಿ ಕೊಟ್ಟಿದ್ದೇನೆ. ರಾಜ್ಯದಲ್ಲಿ 54 ಕಾರಾಗೃಹಗಳು ಇದ್ದು ಎಲ್ಲಾ ಕಾರಾಗೃಹವನ್ನು ಆಗಿಂದಾಗ್ಗೆ ಪರಿಶೀಲನೆ ನಡೆಸಬೇಕು. ಮಂಗಳೂರಿನದ್ದು ಸೂಕ್ಷ್ಮ ಕಾರಾಗೃಹ. ಈಗಾಗಲೇ ಇಲ್ಲಿ ಹಲವು ಬಾರಿ ಪೊಲೀಸರು ರೈಡ್ ಗಳನ್ನು ಮಾಡಿದ್ದಾರೆ. ಒಳಗಡೆ ಗಲಾಟೆ ಮಾಡಿದ ಖೈದಿಗಳನ್ನು ಬೇರೆ ಕಡೆ ಸ್ಥಳಾಂತರ ಮಾಡಿದ್ದಾರೆ.
ಇನ್ನೊಂದಿಷ್ಟು ಖೈದಿಗಳನ್ನು ಬೇರೆ ಜಾಗಕ್ಕೆ ಕಳುಹಿಸುತ್ತೇವೆ. ಒಳ್ಳೆಯ ನಡತೆ ಹೊಂದಿರುವವರಿಗೆ ಸಹಕಾರ ಕೊಡ್ತೇವೆ. ಅಧಿಕಾರಿಗಳ ಜೊತೆಯೂ ಚರ್ಚೆ ಮಾಡ್ತೇನೆ. ಜೈಲಿನ ಒಳಗೆ ಯಾವ ರೀತಿ ನಿಷೇಧಿತ ವಸ್ತುಗಳು ಬರ್ತಿದೆ ಎಂದು ಮಾಹಿತಿ ಪಡೆಯುತ್ತೇನೆ ಎಂದು ಹೇಳಿದರು.



ಟ್ರಯಲ್ ಬೇಸಿಸ್ ಮೇಲೆ ಜೈಲಿನಲ್ಲಿ ಎಐ ಟೆಕ್ನಾಲಜಿ ಕ್ಯಾಮರಾ ಬಳಕೆ ಮಾಡ್ತಿದ್ದೇವೆ. ಇದು ಎಷ್ಟು ಪರಿಣಾಮಕಾರಿ ಆಗುತ್ತೆ ಎಂದು ನೋಡಿ ಅಳವಡಿಕೆ ಮಾಡ್ತೇವೆ. ಪರಪ್ಪನ ಅಗ್ರಹಾರ, ಮೈಸೂರು ಜೈಲಿನಲ್ಲಿ ಕ್ಯಾಮರಾ ಟ್ರಯಲ್ ಆಗಿದೆ. ಮಂಗಳೂರು ಜೈಲಿನಲ್ಲಿಯೂ ಬೇಕಾದ್ರೆ ಟ್ರಯಲ್ ಮಾಡ್ತೀವಿ ಎಂದು ಆ ಕುರಿತ ಪ್ರಶ್ನೆಗೆ ಉತ್ತರಿಸಿದರು.
ಜೈಲಿನಲ್ಲಿ ಜಾಮರ್ ಸಮಸ್ಯೆಯನ್ನು ಹದಿನೈದು ವರ್ಷದಿಂದ ಕೇಳ್ತಾ ಇದ್ದೇನೆ. ಕಾಲ ಕಾಲಕ್ಕೆ ಬದಲಾವಣೆ ಆಗ್ತಾ ಬಂದಿದೆ. ಆದ್ರೆ ಇನ್ನೂ ಸಹ ಕೆಲ ಸಮಸ್ಯೆಗಳು ಇದೆ. ನಿನ್ನೆ ಶೋಧ ನಡೆಸಿದ ಸಂದರ್ಭ ಒಂದು ಮೊಬೈಲ್ ಫೋನ್ ಜೈಲಿನಲ್ಲಿ ಸಿಕ್ಕಿದೆ. ಮುಂದೆಯು ಪೊಲೀಸರು ಸಹ ಪರಿಶೀಲನೆ ಮಾಡ್ತಾರೆ. ಜೈಲಿನಲ್ಲಿ ಕಂಟ್ರೋಲ್ ಮಾಡಿದ್ರೆ 60% ಕಾನೂನು ಸುವ್ಯವಸ್ಥೆ ನಿಯಂತ್ರಣಕ್ಕೆ ಬರುತ್ತೆ. ದೊಡ್ಡ ದೊಡ್ಡ ತರ್ಲೆ ಮಾಡೋರು ಇಲ್ಲಿಗೆ ಬರ್ತಾರೆ. ಒಮ್ಮೆ ಜೈಲಿಗೆ ಬಂದು ಜಾಮೀನು ಮೇಲೆ ಹೊರಗೆ ಬರ್ತಾರೆ. ಇಲ್ಲಿ ನಾವು ಕಂಟ್ರೋಲಲ್ಲಿ ಇಟ್ಟರೆ ಸರಿ ಆಗುತ್ತೆ ಎಂದು ಜೈಲು ಕೈದಿಗಳ ಬಗ್ಗೆ ಡಿಜಿಪಿ ಅಲೋಕ್ ಕುಮಾರ್ ಹೇಳಿದರು.
Following recent incidents of unrest among inmates, Director General of Police (Prisons) Alok Kumar made a surprise visit to the Mangaluru Sub-Jail and conducted a detailed inspection. He reviewed the internal arrangements of the prison, held a meeting with jail officials, and issued strict instructions to ensure discipline and security.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am