ಬ್ರೇಕಿಂಗ್ ನ್ಯೂಸ್
25-12-25 10:54 pm Mangalore Correspondent ಕರಾವಳಿ
ಮಂಗಳೂರು, ಡಿ.25 : ಎಂಆರ್ ಜಿ ಸಮೂಹ ಸಂಸ್ಥೆಗಳ ಚೇರ್ಮನ್ ಪ್ರಕಾಶ್ ಶೆಟ್ಟಿ ಸತತ ಏಳನೇ ವರ್ಷದಲ್ಲಿ ಸಾವಿರಾರು ಮಂದಿಗೆ ಸಹಾಯ ಹಸ್ತ ಚಾಚಿದ್ದು, ಈ ಬಾರಿ 4 ಸಾವಿರಕ್ಕೂ ಹೆಚ್ಚು ಬಡವರಿಗೆ ಶಿಕ್ಷಣ ಮತ್ತು ಆರೋಗ್ಯಕ್ಕಾಗಿ 9.5 ಕೋಟಿ ರೂಪಾಯಿ ನೆರವು ಯೋಜನೆ ನೀಡಿದ್ದಾರೆ.
ಗುರುವಾರ ಸಂಜೆ ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ನಡೆದ ಆಶಾ ಪ್ರಕಾಶ್ ಶೆಟ್ಟಿ ನೆರವು ಕಾರ್ಯಕ್ರಮದಲ್ಲಿ ಎಲ್ಲ ಫಲಾನುಭವಿಗಳಿಗೂ ನೇರವಾಗಿ ಚೆಕ್ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಡಾ.ಪ್ರಕಾಶ್ ಶೆಟ್ಟಿ, ಸಾಮಾನ್ಯ ಕುಟುಂಬದಲ್ಲಿ ಜನಿಸಿ ಬದುಕಿನ ಎಲ್ಲ ರೀತಿಯ ಕಷ್ಟಗಳನ್ನು ಉಂಡು 1983ರಲ್ಲಿ ಬೆಂಗಳೂರಿಗೆ ತೆರಳಿ ಹಂತ ಹಂತವಾಗಿ ಮೇಲೇರಿದವನು. ಹಾಗಾಗಿ, ಜೀವನದ ಎಲ್ಲ ಕಷ್ಟಗಳನ್ನೂ ತಿಳಿದುಕೊಂಡಿದ್ದೇನೆ. ರಿಯಲ್ ಎಸ್ಟೇಟ್ ಮತ್ತು ಹೊಟೇಲ್ ಉದ್ಯಮದಲ್ಲಿ ಯಶಸ್ಸು ಸಾಧಿಸಿ, ಗಳಿಕೆಯ ಒಂದಂಶವನ್ನು ನನ್ನ ಉಡುಪಿ ಮತ್ತು ಮಂಗಳೂರಿನ ಅರ್ಹರಿಗೆ ದಾನ ಮಾಡಲು ನಿರ್ಧರಿಸಿದ್ದೇನೆ.



2019ರಲ್ಲಿ ನನ್ನ 60ನೇ ವರ್ಷಕ್ಕೆ ಅಭಿಮಾನಿಗಳು ಸೇರಿ ಅಭೂತಪೂರ್ವ ಕಾರ್ಯಕ್ರಮ ಹಮ್ಮಿಕೊಂಡು ಅದರಲ್ಲಿ ಒಂದೂ ಕಾಲು ಕೋಟಿ ರೂಪಾಯಿ ನೆರವನ್ನು ನೀಡಿದ್ದೆ. ಆನಂತರ ಪ್ರತಿ ವರ್ಷ ನೆರವಿನ ಹಸ್ತ ನೀಡುತ್ತ ಬಂದಿದ್ದು, ಈವರೆಗೆ 15 ಸಾವಿರ ಮಂದಿಗೆ ಸಹಾಯಧನ ನೀಡಿದ್ದೇವೆ. ಹಲವಾರು ಮಂದಿ ಇಂಜಿನಿಯರಿಂಗ್ ಮತ್ತಿತರ ಉನ್ನತ ಶಿಕ್ಷಣ ಪಡೆದು ತಾವೂ ನೆರವಿನ ಯೋಜನೆಯಲ್ಲಿ ಪಾಲುದಾರರಾಗುತ್ತೇವೆ ಎಂದು ಪತ್ರ ಬರೆದಿದ್ದಾರೆ. ಇದನ್ನು ಕೇಳಿ ಹೃದಯ ತುಂಬಿ ಬಂದಿದ್ದು, ಸಾರ್ಥಕ ಭಾವ ಉಂಟಾಗಿದೆ. ಇನ್ನು ಮೂರು ವರ್ಷ ನೆರವು ಯೋಜನೆ ಮುಂದುವರಿಸಿ, ಆಬಳಿಕ ನೆರವು ಯೋಜನೆಯ ಫಲಾನುಭವಿಗಳನ್ನು ಸೇರಿಸಿಕೊಂಡು ಅದಕ್ಕೊಂದು ಸಾಮೂಹಿಕ ರೂಪ ಕೊಡುವ ಚಿಂತನೆ ಇದೆ. ಆಮೂಲಕ ಪ್ರತಿ ವರ್ಷ 14 ಸಾವಿರ ಮಂದಿಗೆ ನೆರವು ನೀಡಲು ಸಾಧ್ಯವಾಗಲಿದೆ ಎಂದು ಹೇಳಿದರು.
ಕಾರ್ಯಕ್ರಮ ಉದ್ಘಾಟಿಸಿದ ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್, ಎಲ್ಲ ಜಾತಿ, ಎಲ್ಲ ಸಮುದಾಯದ ಜನರನ್ನು ಒಂದೆಡೆ ಸೇರಿಸಿ ನೊಂದ ಶೋಷಿತ ಜನರ ಜೊತೆ ನಾನಿದ್ದೇನೆ ಎನ್ನುವ ಪ್ರಕಾಶ್ ಶೆಟ್ಟಿಯವರ ಮನೋಬಲಕ್ಕೆ ನಾವೆಲ್ಲರೂ ಬೆಂಬಲ ನೀಡಬೇಕಿದೆ. ಸಾಮರಸ್ಯ ಮತ್ತು ಶಾಂತಿಯುತ ಸಮಾಜದ ನಿರ್ಮಾಣಕ್ಕಾಗಿ ನಾವೆಲ್ಲರೂ ಶ್ರಮ ಪಡಬೇಕು ಎಂದರು.
ವೇದಿಕೆಯಲ್ಲಿ ಅಶ್ವಿನಿ ಪುನೀತ್ ರಾಜ್ ಕುಮಾರ್, ಆಶಾ ಪ್ರಕಾಶ್ ಶೆಟ್ಟಿ, ಮೂಡಬಿದ್ರೆಯ ಅಳ್ವಾಸ್ ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ಡಾ.ಮೋಹನ್ ಆಳ್ವ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಎಂ.ಆರ್.ಜಿ.ಗ್ರೂಪ್ ಆಡಳಿತ ನಿರ್ದೇಶಕ ಗೌರವ್ ಪಿ.ಶೆಟ್ಟಿ ಉಪಸ್ಥಿತರಿದ್ದರು. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಗುರುಪುರ ವಜ್ರದೇಹಿ ಸ್ವಾಮೀಜಿ, ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕರಾದ ಡಾ.ಭರತ್ ವೈ.ಶೆಟ್ಟಿ, ಡಿ.ವೇದವ್ಯಾಸ ಕಾಮತ್ ಮತ್ತಿತರರಿದ್ದರು.
In the seventh year of the Asha Prakash Shetty Assistance Program, MRG Group Chairman Dr. Prakash Shetty distributed financial aid totaling ₹9.5 crore to over 4,000 underprivileged families for education and healthcare. The event, held at Goldfinch City in Bangrakulur, saw direct cheque distribution to beneficiaries.
18-06-26 01:25 pm
HK News Staffer
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm