ಬ್ರೇಕಿಂಗ್ ನ್ಯೂಸ್
28-12-25 11:50 am Mangalore Correspondent ಕರಾವಳಿ
ಮಂಗಳೂರು, ಡಿ.28 : ಪಾಂಡೇಶ್ವರ ಠಾಣೆಯ ಎಎಸ್ಐ ಒಬ್ಬರು ತನ್ನ ಮನೆಯಲ್ಲೇ ಮೈಗೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಕದ್ರಿ ವ್ಯಾಸನಗರದಲ್ಲಿ ನಡೆದಿದೆ.
ಪಾಂಡೇಶ್ವರ ಠಾಣೆಯ ಎಎಸ್ಐ ಹರಿಶ್ಚಂದ್ರ ಬೇರಿಕೆ ಆತ್ಮಹತ್ಯೆಗೆ ಯತ್ನಿಸಿದವರು. ಕೇರಳದ ಕಾಸರಗೋಡು ಜಿಲ್ಲೆಯ ಮುಳ್ಳೇರಿಯಾ ಮೂಲದವರಾದ ಹರಿಶ್ಚಂದ್ರ ಅವರು ಮಂಗಳೂರು, ಉಡುಪಿ ಜಿಲ್ಲೆಯಲ್ಲಿ ಕಳೆದ 27 ವರ್ಷಗಳಿಂದ ಹಲವಾರು ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದು ಒಂದು ವರ್ಷದ ಹಿಂದೆ ಎಎಸ್ಐ ಆಗಿ ಭಡ್ತಿ ಪಡೆದಿದ್ದರು. ಹಿಂದೆ ಕರಾವಳಿ ಕಾವಲು ಪಡೆಯಲ್ಲಿ ಕರ್ತವ್ಯದಲ್ಲಿದ್ದ ಇವರು ಇತ್ತೀಚೆಗೆ ಪಾಂಡೇಶ್ವರ ಠಾಣೆಗೆ ಬಂದಿದ್ದರು. ಮೂರು ವರ್ಷಗಳ ಹಿಂದೆ ಕದ್ರಿ ವ್ಯಾಸನಗರದಲ್ಲಿ ಹೊಸ ಮನೆ ಮಾಡಿ ನೆಲೆಸಿದ್ದರು.






ಪತ್ನಿ ಮತ್ತು ಮಕ್ಕಳು ರಜೆಯ ಕಾರಣ ನಿನ್ನೆ ಊರಿಗೆ ತೆರಳಿದ್ದರು. ಇಂದು ಬೆಳಗ್ಗೆ ಸಹಜವಾಗಿಯೇ ಇದ್ದ ಹರಿಶ್ಚಂದ್ರ ಅವರು ದೇವರಿಗೆ ಹೂ ಇಡಲು ಹೊರಗಿನಿಂದ ಹೂ ಕೊಯ್ಯುತ್ತಿದ್ದುದನ್ನು ಸ್ಥಳೀಯರು ಗಮನಿಸಿದ್ದರು. ಬೆಳಗ್ಗೆ 10.30ರ ವೇಳೆಗೆ ಹಠಾತ್ ಮನೆಯ ಹೊರಗಡೆ ಎದುರು ಭಾಗದಲ್ಲಿ ಬೆಂಕಿ ಹತ್ತಿಕೊಂಡು ಬೊಬ್ಬೆ ಕೇಳಿದ್ದು ಪಕ್ಕದ ಮನೆಯವರು ನೀರು ಹಾಕಿ ಬೆಂಕಿ ನಂದಿಸಿದ್ದಾರೆ. ಅಷ್ಟರಲ್ಲಿ ಮೈಯಲ್ಲಿದ್ದ ಅಂಗಿ ಸಹಿತ ಮೈ ಪೂರ್ತಿ ಸುಟ್ಟು ಹೋಗಿದೆ. ಕೂಡಲೇ ಮಾಹಿತಿ ಪಡೆದು ಕದ್ರಿ ಪೊಲೀಸರು ಮತ್ತು ಆಂಬುಲೆನ್ಸ್ ಬಂದಿದ್ದು ಅವರನ್ನು ಎಜೆ ಆಸ್ಪತ್ರೆಗೆ ಸೇರಿಸಲಾಗಿದೆ.
ಮನೆಯ ಹೊರಗಡೆ ಬಿಸ್ಲೆರಿ ನೀರಿನ ಬಾಟಲಿಯಲ್ಲಿ ಅರ್ಧ ಸುಟ್ಟು ಹೋದ ಸ್ಥಿತಿಯಲ್ಲಿ ಪೆಟ್ರೋಲ್ ತುಂಬಿರುವ ಕ್ಯಾನ್ ಪತ್ತೆಯಾಗಿದೆ. ನೀರು ಹಾಕಿದ್ದರಿಂದ ಕರಟಿ ಹೋದ ಬಾಟಲಿ ಸಹಿತ ಅದರಲ್ಲಿ ಅರ್ಧದಷ್ಟು ಪೆಟ್ರೋಲ್ ಉಳಿದಿದೆ. ಮೈಗೆ ಪೆಟ್ರೋಲ್ ಸುರಿದುಕೊಂಡ ಸಂದರ್ಭದಲ್ಲಿ ಎದುರು ಮನೆಯ ತಗಡು ಶೀಟಿಗೂ ಬಿದ್ದಿದೆ. ಬೆಂಕಿ ಅದಕ್ಕೂ ತಗಲಿದ್ದು ಶೀಟ್ ಸಹಿತ ಮನೆಯ ಫೈಬರ್ ಪೈಪ್ ಸುಟ್ಟು ಹೋಗಿದೆ. ನೆಲಹಾಸಿನ ಮ್ಯಾಟ್ ಕೂಡ ಸುಟ್ಟು ಹೋಗಿದೆ. ಕದ್ರಿ ಪೊಲೀಸರು ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.
In a shocking incident in Mangaluru’s Kadri Vyasanagar, an Assistant Sub-Inspector (ASI) attached to Pandeshwar Police Station attempted suicide by setting himself on fire. Harishchandra Berike, a native of Mulleria in Kasaragod and a police officer with 27 years of service, reportedly poured petrol on himself and ignited it while alone at home. His wife and children had gone to their native place for the holidays. Neighbours, who heard his screams, rushed in and extinguished the flames before alerting police and medical personnel.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am