ಬ್ರೇಕಿಂಗ್ ನ್ಯೂಸ್
28-12-25 11:50 am Mangalore Correspondent ಕರಾವಳಿ
ಮಂಗಳೂರು, ಡಿ.28 : ಪಾಂಡೇಶ್ವರ ಠಾಣೆಯ ಎಎಸ್ಐ ಒಬ್ಬರು ತನ್ನ ಮನೆಯಲ್ಲೇ ಮೈಗೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಕದ್ರಿ ವ್ಯಾಸನಗರದಲ್ಲಿ ನಡೆದಿದೆ.
ಪಾಂಡೇಶ್ವರ ಠಾಣೆಯ ಎಎಸ್ಐ ಹರಿಶ್ಚಂದ್ರ ಬೇರಿಕೆ ಆತ್ಮಹತ್ಯೆಗೆ ಯತ್ನಿಸಿದವರು. ಕೇರಳದ ಕಾಸರಗೋಡು ಜಿಲ್ಲೆಯ ಮುಳ್ಳೇರಿಯಾ ಮೂಲದವರಾದ ಹರಿಶ್ಚಂದ್ರ ಅವರು ಮಂಗಳೂರು, ಉಡುಪಿ ಜಿಲ್ಲೆಯಲ್ಲಿ ಕಳೆದ 27 ವರ್ಷಗಳಿಂದ ಹಲವಾರು ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದು ಒಂದು ವರ್ಷದ ಹಿಂದೆ ಎಎಸ್ಐ ಆಗಿ ಭಡ್ತಿ ಪಡೆದಿದ್ದರು. ಹಿಂದೆ ಕರಾವಳಿ ಕಾವಲು ಪಡೆಯಲ್ಲಿ ಕರ್ತವ್ಯದಲ್ಲಿದ್ದ ಇವರು ಇತ್ತೀಚೆಗೆ ಪಾಂಡೇಶ್ವರ ಠಾಣೆಗೆ ಬಂದಿದ್ದರು. ಮೂರು ವರ್ಷಗಳ ಹಿಂದೆ ಕದ್ರಿ ವ್ಯಾಸನಗರದಲ್ಲಿ ಹೊಸ ಮನೆ ಮಾಡಿ ನೆಲೆಸಿದ್ದರು.






ಪತ್ನಿ ಮತ್ತು ಮಕ್ಕಳು ರಜೆಯ ಕಾರಣ ನಿನ್ನೆ ಊರಿಗೆ ತೆರಳಿದ್ದರು. ಇಂದು ಬೆಳಗ್ಗೆ ಸಹಜವಾಗಿಯೇ ಇದ್ದ ಹರಿಶ್ಚಂದ್ರ ಅವರು ದೇವರಿಗೆ ಹೂ ಇಡಲು ಹೊರಗಿನಿಂದ ಹೂ ಕೊಯ್ಯುತ್ತಿದ್ದುದನ್ನು ಸ್ಥಳೀಯರು ಗಮನಿಸಿದ್ದರು. ಬೆಳಗ್ಗೆ 10.30ರ ವೇಳೆಗೆ ಹಠಾತ್ ಮನೆಯ ಹೊರಗಡೆ ಎದುರು ಭಾಗದಲ್ಲಿ ಬೆಂಕಿ ಹತ್ತಿಕೊಂಡು ಬೊಬ್ಬೆ ಕೇಳಿದ್ದು ಪಕ್ಕದ ಮನೆಯವರು ನೀರು ಹಾಕಿ ಬೆಂಕಿ ನಂದಿಸಿದ್ದಾರೆ. ಅಷ್ಟರಲ್ಲಿ ಮೈಯಲ್ಲಿದ್ದ ಅಂಗಿ ಸಹಿತ ಮೈ ಪೂರ್ತಿ ಸುಟ್ಟು ಹೋಗಿದೆ. ಕೂಡಲೇ ಮಾಹಿತಿ ಪಡೆದು ಕದ್ರಿ ಪೊಲೀಸರು ಮತ್ತು ಆಂಬುಲೆನ್ಸ್ ಬಂದಿದ್ದು ಅವರನ್ನು ಎಜೆ ಆಸ್ಪತ್ರೆಗೆ ಸೇರಿಸಲಾಗಿದೆ.
ಮನೆಯ ಹೊರಗಡೆ ಬಿಸ್ಲೆರಿ ನೀರಿನ ಬಾಟಲಿಯಲ್ಲಿ ಅರ್ಧ ಸುಟ್ಟು ಹೋದ ಸ್ಥಿತಿಯಲ್ಲಿ ಪೆಟ್ರೋಲ್ ತುಂಬಿರುವ ಕ್ಯಾನ್ ಪತ್ತೆಯಾಗಿದೆ. ನೀರು ಹಾಕಿದ್ದರಿಂದ ಕರಟಿ ಹೋದ ಬಾಟಲಿ ಸಹಿತ ಅದರಲ್ಲಿ ಅರ್ಧದಷ್ಟು ಪೆಟ್ರೋಲ್ ಉಳಿದಿದೆ. ಮೈಗೆ ಪೆಟ್ರೋಲ್ ಸುರಿದುಕೊಂಡ ಸಂದರ್ಭದಲ್ಲಿ ಎದುರು ಮನೆಯ ತಗಡು ಶೀಟಿಗೂ ಬಿದ್ದಿದೆ. ಬೆಂಕಿ ಅದಕ್ಕೂ ತಗಲಿದ್ದು ಶೀಟ್ ಸಹಿತ ಮನೆಯ ಫೈಬರ್ ಪೈಪ್ ಸುಟ್ಟು ಹೋಗಿದೆ. ನೆಲಹಾಸಿನ ಮ್ಯಾಟ್ ಕೂಡ ಸುಟ್ಟು ಹೋಗಿದೆ. ಕದ್ರಿ ಪೊಲೀಸರು ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.
In a shocking incident in Mangaluru’s Kadri Vyasanagar, an Assistant Sub-Inspector (ASI) attached to Pandeshwar Police Station attempted suicide by setting himself on fire. Harishchandra Berike, a native of Mulleria in Kasaragod and a police officer with 27 years of service, reportedly poured petrol on himself and ignited it while alone at home. His wife and children had gone to their native place for the holidays. Neighbours, who heard his screams, rushed in and extinguished the flames before alerting police and medical personnel.
27-12-25 02:40 pm
Bangalore Correspondent
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
Chitradurga Seabird Bus accident: ಚಿತ್ರದುರ್ಗ...
25-12-25 06:26 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
28-12-25 03:44 pm
Mangalore Correspondent
Mangalore, Pandeshwar ASI : ಪಾಂಡೇಶ್ವರ ಠಾಣೆ ಎಎ...
28-12-25 11:50 am
ನವ ವಿಧ - ನವ ವರ್ಷ ಮಂಗಳೂರು ಕಂಬಳ ; ಒಂಬತ್ತು ಮಂದಿ...
26-12-25 10:34 pm
Grace Ministry Christmas 2025: ಗ್ರೇಸ್ ಮಿನಿಸ್ಟ...
26-12-25 06:37 pm
ಎಂಆರ್ ಜಿ ಗ್ರೂಪಿನಿಂದ ಆಶಾ ಪ್ರಕಾಶ್ ಶೆಟ್ಟಿ ನೆರವು...
25-12-25 10:54 pm
28-12-25 05:19 pm
HK News Desk
ಬೈಕಿನಲ್ಲಿ 19 ಕೇಜಿ ಗೋಮಾಂಸ ಸಾಗಣೆ ; ಬಜ್ಪೆ ಮಳಲಿಯಲ...
27-12-25 07:42 pm
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm
ಪ್ಯಾಲೆಸ್ ಗ್ರೌಂಡ್ನಲ್ಲಿ ಅದ್ದೂರಿ ರಿಸೆಪ್ಷನ್, ಶ್...
26-12-25 11:21 pm
ಪಡುಬಿದ್ರೆ ; ನೇಮೊತ್ಸದಲ್ಲಿ ವೃದ್ಧೆಯ ಸರ ಕಳ್ಳತನ, ಮ...
26-12-25 11:06 pm