ಬ್ರೇಕಿಂಗ್ ನ್ಯೂಸ್
29-12-25 08:47 pm Mangalore Correspondent ಕರಾವಳಿ
ಮಂಗಳೂರು, ಡಿ.29: ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಠಾಣೆ ವ್ಯಾಪ್ತಿಯ ಪಿಲಾತಬೆಟ್ಟು ಕಟ್ಟೆಮನೆ ಎಂಬಲ್ಲಿ ಪೊಲೀಸ್ ಸಿಬಂದಿಯೊಬ್ಬರು ಚಲಾಯಿಸುತ್ತಿದ್ದ ನ್ಯಾನೋ ಕಾರು ಮತ್ತು ಬೈಕ್ ಡಿಕ್ಕಿಯಾಗಿದ್ದು, ಬೈಕ್ ಸವಾರ ಮಾರ್ನಬೈಲು ನಿವಾಸಿ ಇಮ್ರಾನ್ ಮೊಹಮ್ಮದ್ ತಾಹ ಎಂಬವರು ಸ್ಥಳದಲ್ಲೇ ತೀವ್ರ ಗಾಯಗೊಂಡು ಮೃತಪಟ್ಟಿದ್ದಾರೆ.
ಕಾರನ್ನು ಮಂಗಳೂರಿನ ಡಿಸಿಆರ್ ಇ ವಿಭಾಗದಲ್ಲಿ ಕರ್ತವ್ಯದಲ್ಲಿರುವ ಪ್ರಸನ್ನ ಎಂಬವರು ಚಲಾಯಿಸುತ್ತಿದ್ದರು. ಘಟನೆ ಸಂದರ್ಭದಲ್ಲಿ ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್ ಸವಾರ ಕಾರಿನ ಎದುರಿನ ಗ್ಲಾಸಿಗೆ ಬಿದ್ದು ಹೊರಗಡೆ ಎಸೆಯಲ್ಪಟ್ಟಿದ್ದಾನೆ. ಈ ವೇಳೆ, ಕಾಲು ತುಂಡಾಗಿದ್ದು, ತಲೆಗೆ ತೀವ್ರ ಏಟು ಬಿದ್ದು ಮೃತಪಟ್ಟಿದ್ದಾರೆ.


ಘಟನೆ ಸಂದರ್ಭದಲ್ಲಿ ಕಾರು ಚಲಾಯಿಸುತ್ತಿದ್ದ ಪೊಲೀಸ್ ಪೇದೆ ಪ್ರಸನ್ನ ಕಾರನ್ನು ಬಿಟ್ಟು ಪರಾರಿಯಾಗಿದ್ದಾರೆ. ಈ ವೇಳೆ, ಸ್ಥಳದಲ್ಲಿದ್ದವರು ಕಾರಿನ ಒಳಗಡೆ ಶೇಂದಿಯನ್ನು ತುಂಬಿಸಿದ್ದ ಬಾಟಲಿ ಇರುವುದನ್ನು ಪತ್ತೆ ಮಾಡಿದ್ದು, ವಿಡಿಯೋ ಮಾಡಿ ಜಾಲತಾಣದಲ್ಲಿ ಹಾಕಿದ್ದಾರೆ. ಅಲ್ಲದೆ, ಕಾರಿನ ಒಳಗೆ ಪೊಲೀಸರು ಬಳಸುವ ಟೋಪಿ ಕಂಡುಬಂದಿದ್ದು, ಇದು ಯಾರದ್ದೋ ಪೊಲೀಸರದ್ದೇ ಕಾರು ಎನ್ನುವ ಗುಮಾನಿಯಲ್ಲಿ ಕುಡಿದು ವಾಹನ ಚಲಾಯಿಸಿದ್ದಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಹಿಳೆಯೊಬ್ಬರು ಮಾಡಿದ್ದ ಈ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಎಸ್ಪಿ ಅರುಣ್ ಅವರು ತನಿಖೆಗೆ ಸೂಚಿಸಿದ್ದು ಸದ್ರಿ ಪೊಲೀಸ್ ಸಿಬಂದಿ ಪ್ರಸನ್ನ ಅವರನ್ನು ಆ ಮಹಿಳೆ ಮತ್ತು ಸಂತ್ರಸ್ತ ಯುವಕನ ಸಂಬಂಧಿಕರ ಸಮ್ಮುಖದಲ್ಲಿಯೇ ಪರೀಕ್ಷೆಗೆ ಒಳಪಡಿಸಿದ್ದಾರೆ. ಆಲ್ಕೋ ಮೀಟರಿನಲ್ಲಿ ತಪಾಸಣೆ ನಡೆಸಿದ ವೇಳೆ ನೆಗೆಟಿವ್ ಬಂದಿದ್ದು ರಕ್ತ ಪರೀಕ್ಷೆಯನ್ನೂ ನಡೆಸುವಂತೆ ಎಸ್ಪಿ ಸೂಚಿಸಿದ್ದಾರೆ. ಘಟನೆ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A fatal accident near Pilathabettu in Punjalkatte, Bantwal taluk, claimed the life of Imran Mohammed Taha after his bike collided head-on with a Nano car allegedly driven by police staffer Prasanna of Mangaluru DCR(E). The biker died on the spot from severe head injuries, with his leg severed in the impact.
29-12-25 11:13 pm
Bangalore Correspondent
ಡ್ರಗ್ಸ್ ಫ್ಯಾಕ್ಟರಿ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳಿ...
29-12-25 07:24 pm
ವ್ಯಾಪಕ ಭ್ರಷ್ಟಾಚಾರ ; ಕೋಲಾರದಲ್ಲಿ 25 ಗ್ರಾಪಂ ವಿರು...
28-12-25 09:03 pm
Seabird Bus, Drink and Drive: ಮೆಜೆಸ್ಟಿಕ್ ನಲ್ಲ...
27-12-25 02:40 pm
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
29-12-25 11:03 pm
Mangalore Correspondent
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
ಸಕಲೇಶಪುರ- ಸುಬ್ರಹ್ಮಣ್ಯ 55 ಕಿಮೀ ಘಾಟ್ ವಿದ್ಯುದೀಕರ...
29-12-25 11:45 am
29-12-25 03:02 pm
Mangalore Correspondent
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm
ಬೈಕಿನಲ್ಲಿ 19 ಕೇಜಿ ಗೋಮಾಂಸ ಸಾಗಣೆ ; ಬಜ್ಪೆ ಮಳಲಿಯಲ...
27-12-25 07:42 pm
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm