ಬ್ರೇಕಿಂಗ್ ನ್ಯೂಸ್
31-12-25 10:57 pm Mangalore Correspondent ಕರಾವಳಿ
ಮಂಗಳೂರು, ಡಿ.31 : ದೇಶಾದ್ಯಂತ ಭಾರಿ ಸುದ್ದಿಯಾಗಿದ್ದ ಧರ್ಮಸ್ಥಳ ಪ್ರಕರಣದಲ್ಲಿ ಷಡ್ಯಂತ್ರ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಧರ್ಮಸ್ಥಳ ಕ್ಷೇತ್ರದ ಪರವಾಗಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆಯಾಗಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಮೊಕದ್ದಮೆ ಸಂಖ್ಯೆ 39/2025ರ ಸಂಬಂಧಿಸಿ ಬೆಂಗಳೂರಿನ ಹಿರಿಯ ನ್ಯಾಯವಾದಿ ಸಿ.ವಿ. ನಾಗೇಶ್ ಹಾಗೂ ಪುತ್ತೂರಿನ ಮಹೇಶ್ ಕಜೆ ಬೆಳ್ತಂಗಡಿ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.
ಪ್ರಕರಣ ಸಂಬಂಧಿಸಿ ಎಸ್ಐಟಿ ತನಿಖೆ ನಡೆಸುತ್ತಿದ್ದು, ಈಗಾಗಲೇ ಬೆಳ್ತಂಗಡಿ ನ್ಯಾಯಾಲಯಕ್ಕೆ ವರದಿ ಸಲ್ಲಿಕೆಯಾಗಿದೆ. ಧರ್ಮಸ್ಥಳ ವಿರುದ್ಧ ಷಡ್ಯಂತ್ರ ನಡೆಸಿದ್ದಾರೆಂದು ವರದಿಯಲ್ಲಿ ಉಲ್ಲೇಖವಾಗಿದ್ದರೂ ಆರೋಪಿಗಳ ವಿರುದ್ದ ಕ್ರಮ ಕೈಗೊಂಡಿಲ್ಲ ಎಂದು ಹೇಳಿ ಧರ್ಮಸ್ಥಳ ಕ್ಷೇತ್ರದ ಪರವಾಗಿ ಅರ್ಜಿ ಸಲ್ಲಿಸಿದ್ದು ಹಿರಿಯ ವಕೀಲರಿಬ್ಬರು ವಾದ ಮಂಡನೆ ಮಾಡಲಿದ್ದಾರೆ. ಎಸ್ಐಟಿ ವರದಿ ಸಂಬಂಧಿಸಿ ಮುಂದಿನ ಕ್ರಮ ಏನಿರಬೇಕು ಎಂಬ ಬಗ್ಗೆ ಜ.3ರಂದು ಬೆಳ್ತಂಗಡಿ ಕೋರ್ಟ್ ಆದೇಶ ಮಾಡಲಿದ್ದು ಇದರ ನಡುವೆ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಅರ್ಜಿ ಸಲ್ಲಿಸಿರುವುದು ಮಹತ್ವ ಪಡೆದಿದೆ.
ಧರ್ಮಸ್ಥಳ ವಿರುದ್ಧ ಚಿನ್ನಯ್ಯ, ಮಹೇಶ್ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ವಿಠಲ ಗೌಡ, ಟಿ. ಜಯಂತ್ ಹಾಗೂ ಸುಜಾತಾ ಭಟ್ ಸೇರಿ ಆರು ಮಂದಿ ಷಡ್ಯಂತ್ರ ನಡೆಸಿರುವುದಾಗಿ ಎಸ್ಐಟಿ ಕೋರ್ಟಿಗೆ ವರದಿ ಸಲ್ಲಿಸಿರುವುದಾಗಿ ಹೇಳಲಾಗುತ್ತಿದೆ. ತಿಮರೋಡಿ ಮನೆಯಲ್ಲಿ ಮಟ್ಟಣ್ಣನವರ್, ಜಯಂತ್, ವಿಠ್ಠಲಗೌಡ, ಚಿನ್ನಯ್ಯ ಸೇರಿ ಸಭೆ ನಡೆಸಿದ್ದು, ಧರ್ಮಸ್ಥಳ ಮೇಲ್ವಿಚಾರಕರ ವಿರುದ್ಧ ಪಿತೂರಿ ನಡೆಸಲು ಯೋಜನೆ ಹಾಕಲಾಗಿತ್ತು. ಅದರಂತೆ ತಲೆ ಬುರುಡೆಯೊಂದನ್ನು ಚಿನ್ನಯ್ಯನಿಗೆ ಕೊಟ್ಟು ಪೊಲೀಸರಿಗೆ ದೂರು ಕೊಡಿಸಲಾಗಿತ್ತು ಎಂಬುದನ್ನು ಎಸ್ಐಟಿ ವರದಿ ತಿಳಿಸಿದೆ.
A petition has been submitted in the Beltangady court requesting action against those allegedly involved in the Dharmasthala conspiracy case. Senior advocates C.V. Nagesh and Mahesh Kaje filed the petition on behalf of the Dharmasthala region, citing the SIT report that names six individuals for plotting against the institution. The court will issue further orders on January 3 based on the SIT findings.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am