ಬ್ರೇಕಿಂಗ್ ನ್ಯೂಸ್
02-01-26 02:02 pm Mangalore Correspondent ಕರಾವಳಿ
ಮಂಗಳೂರು, ಜ.2 : ಮಂಗಳೂರು ಮೂಲದ ದುಬೈನಲ್ಲಿ ನೆಲೆಸಿರುವ ಕುಟುಂಬದ ಕುಡಿ, 11ರ ಹರೆಯದ ಪೋರ ಪರ್ವತಾರೋಹಣದಲ್ಲಿ ಜಗತ್ತಿನ ಗಮನ ಸೆಳೆದಿದ್ದಾನೆ. ತನ್ನ ಎಂಟನೇ ವಯಸ್ಸಿನಲ್ಲಿ ಆಫ್ರಿಕಾದ ಅತಿ ಎತ್ತರದ ಪರ್ವತ ತಾಂಜಾನಿಯಾದ ಕಿಲಿಮಂಜಾರೋ ಹತ್ತಿ ದಾಖಲೆ ಮಾಡಿದ್ದ ಅಯಾನ್ ಮೆಂಡನ್, ಇದೀಗ ಜಗತ್ತಿನ ಮೂರನೇ ಅತಿ ಎತ್ತರದ ಕೆನ್ಯಾದಲ್ಲಿರುವ ಮೌಂಟ್ ಕೆನ್ಯಾ ಪರ್ವತವನ್ನು ಏರುವ ಮೂಲಕ ಸಾಧನೆ ಮಾಡಿದ್ದಾನೆ.
ಮಂಗಳೂರಿನ ಅತ್ತಾವರ ಮೂಲದ ವಾಣಿ ಮೆಂಡನ್ ಎಂಬವರ ಪುತ್ರನಾಗಿರುವ ಅಯಾನ್ ಮೆಂಡನ್ ತನ್ನ 6ನೇ ವಯಸ್ಸಿನಲ್ಲೇ ಪರ್ವತಾರೋಹಣ ಆರಂಭಿಸಿದ್ದಾನೆ. ತನ್ನ ಎಂಟನೇ ವಯಸ್ಸಿನಲ್ಲಿ ಆಫ್ರಿಕಾದ ಎತಿ ಎತ್ತರದ ಪರ್ವತ ಕಿಲಿಮಂಜಾರೋವನ್ನು 2022ರ ಆಗಸ್ಟ್ 4ರಂದು ಏರಿದ್ದು, ಈ ಸಾಧನೆ ಮಾಡಿದ ಜಗತ್ತಿನ ಅತಿ ಕಿರಿಯ ಎಂಬ ಹೆಗ್ಗಳಿಕೆ ಗಳಿಸಿದ್ದಾನೆ.




ತನ್ನ 9ನೇ ವಯಸ್ಸಿನಲ್ಲಿ ಅಮೆರಿಕದ ಅತಿ ಎತ್ತರದ ಪರ್ವತ ಅಕಾಂಕಾಗುವಾ ಏರಿದ್ದು, ಇದನ್ನೂ ಅತಿ ಕಿರಿಯ ವಯಸ್ಸಿನಲ್ಲಿ ಏರಿದ ಬಾಲಕನೆಂಬ ಕೀರ್ತಿಗೆ ಪಾತ್ರವಾಗಿದ್ದಾನೆ. ಇದೀಗ 11ನೇ ವಯಸ್ಸಿನಲ್ಲಿ 2025ರ ಡಿ.30ರಂದು ಮೌಂಟ್ ಕೆನ್ಯಾ ಪರ್ವತವನ್ನು ಏರುವ ಮೂಲಕ ಮತ್ತೊಂದು ಸಾಧನೆ ಮಾಡಿದ್ದಾನೆ.
ಮೌಂಟ್ ಎವರೆಸ್ಟ್ ಬೇಸ್ ಕ್ಯಾಂಪ್, ಮೌಂಟ್ ಎಲ್ ಬ್ರಸ್, ಅನ್ನಪೂರ್ಣ ಬೇಸ್ ಕ್ಯಾಂಪ್ ಸೇರಿದಂತೆ ಈಗಾಗಲೇ ಜಗತ್ತಿನ ಎತ್ತರದ ಶಿಖರಗಳನ್ನು ಅಯಾನ್ ಮೆಂಡನ್ ಏರಿದ್ದಾನೆ. ಆಮೂಲಕ ಸಾಮಾನ್ಯ ಜನರು ಊಹಿಸುವುದಕ್ಕೂ ಸಾಧ್ಯವಾಗದ ಎತ್ತರಗಳನ್ನು ತನ್ನ ಸಣ್ಣ ವಯಸ್ಸಿನಲ್ಲೇ ಏರುವ ಮೂಲಕ ಜಗತ್ತಿನ ಗಮನ ಸೆಳೆದಿದ್ದಾನೆ. ಇದಕ್ಕಾಗಿ ಹೆತ್ತವರ ನಿರಂತರ ಬೆಂಬಲದೊಂದಿಗೆ ನುರಿತ ತಜ್ಞರಿಂದ ಅವಿರತ ತರಬೇತಿಯನ್ನೂ ಪಡೆಯುತ್ತಿದ್ದಾನೆ.
Ayaan Mendan, an 11-year-old originally from Mangalore and now based in Dubai, has once again captured global attention in the world of mountaineering. After becoming the youngest climber to summit Africa’s highest peak, Mount Kilimanjaro, at age eight, Ayaan has now successfully scaled Mount Kenya on December 30, 2025. Beginning his climbing journey at just six, he has also conquered Aconcagua, Mount Elbrus, Annapurna Base Camp, and Everest Base Camp, achieving extraordinary heights with strong family support and expert training.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am